ಕ್ರೈಂ

ಚೀನಾ ಗಡಿಯಲ್ಲಿ ಭಾರೀ ದುರಂತ| 16 ವೀರ ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಭಾರತ-ಚೀನಾ ಗಡಿಯ ಸಮೀಪ ಉತ್ತರ ಸಿಕ್ಕಿಂನಲ್ಲಿ ಭಾರಿ ದುರಂತ ನಡೆದಿದ್ದು, ಸೇನಾ ವಾಹನವೊಂದು ಕಮರಿಗೆ ಬಿದ್ದು 16 ಜನ ಯೋಧರು ಸಾವನ್ನಪ್ಪಿದ್ದಾರೆ. ಅಲ್ಲದೇ, ಇತರ ನಾಲ್ವರು ಗಾಯಗೊಂಡಿದ್ದಾರೆ. ಸೇನಾ ವಾಹನವು 20 ಜನ ಯೋಧರೊಂದಿಗೆ ಗಡಿ ಭಾಗದ ಪೋಸ್ಟ್‌ಗಳತ್ತ ಸಾಗುತ್ತಿತ್ತು. ಈ ವೇಳೆ ಸ್ಕಿಡ್​ ಆಗಿ ನೂರಾರು ಅಡಿ ಆಳದ ಕಮರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಉತ್ತರ ಬಂಗಾಳದ ಸೇನಾಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಸ್ಥಳದಿಂದ ಎಲ್ಲ […]

ಚೀನಾ ಗಡಿಯಲ್ಲಿ ಭಾರೀ ದುರಂತ| 16 ವೀರ ಯೋಧರು ಹುತಾತ್ಮ Read More »

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದರ ಇಂಜಿನ್ ಇದ್ದಕ್ಕಿದ್ದಂತೆ ಆಫ್ ಆಗಿ, ಇಡೀ ಸ್ಕೂಟರ್ ಬೆಂಕಿಗಾಹುತಿಯಾದ ಘಟನೆ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ನಡೆದಿದೆ. ಈ ವೇಳೆ ಸವಾರ ಸ್ಕೂಟರ್ ನಿಂದ ಇಳಿದು ಏನಾಗಿದೆ ಎಂದು ಪರಿಶೀಲಿಸುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟರ್ ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರ್ ಬೆಂಕಿಗಾಹುತಿ Read More »

ನಕಲಿ ದಾಖಲೆ ಸೃಷ್ಟಿಸಿ‌ ಆಸ್ತಿ ಕಬಳಿಕೆ ಸಂಚು| ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ನಕಲಿ ಮರಣ ಪತ್ರ ಸೃಷ್ಟಿಸಿ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದ ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಆರ್ ಆರ್ ನಗರ ಜನನ ಮರಣ ಸಬ್ ರಿಜಿಸ್ಟ್ರಾರ್ ನವೀನ್, ಪುಟ್ಟಮ್ಮ, ಪ್ರಸಾದ್, ದಿವ್ಯಾ ಎಂದು ಗುರುತಿಸಲಾಗಿದೆ. ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಮೇಲೆ ಆರ್ ಆರ್ ನಗರದ ಸಮೀಪ ಪಟ್ಟಣಗೆರೆಯಲ್ಲಿ ಕೋಟ್ಯಾಂತರ ಮೌಕ್ಯದ 3 ಎಕರೆ ಖಾಸಗಿ ಜಮೀನು ಗುಳುಂ

ನಕಲಿ ದಾಖಲೆ ಸೃಷ್ಟಿಸಿ‌ ಆಸ್ತಿ ಕಬಳಿಕೆ ಸಂಚು| ಸಬ್ ರಿಜಿಸ್ಟ್ರಾರ್ ಸೇರಿ ನಾಲ್ವರು ಅರೆಸ್ಟ್ Read More »

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು

ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಮೇಳದ ಕಲಾವಿದರಾಗಿದ್ದರು. ಕಟೀಲಿನ ಸರಸ್ವತೀ ಸದನದಲ್ಲಿ ʼತ್ರಿಜನ್ಮ ಮೋಕ್ಷʼ ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ಹೃದಯಾಘಾತವಾಗಿದೆ. ಕಟೀಲು ದೇವಸ್ಥಾನದಲ್ಲಿ ಆರು ಯಕ್ಷಗಾನ ಮೇಳಗಳಿದ್ದು, ಇವರು ನಾಲ್ಕನೇ‌ ಮೇಳದ ಕಲಾವಿದರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನದ ಅಂತಿಮ ಭಾಗದಲ್ಲಿ ಶಿಶುಪಾಲ- ದಂತವಕ್ತ್ರರ ವಧೆಯ ಪ್ರಸಂಗವಿದ್ದು, ಇದರಲ್ಲಿ ಗುರುವಪ್ಪ ಅವರು ಶಿಶುಪಾಲನ ಪಾತ್ರ ವಹಿಸಿದ್ದರು. ಕಾರ್ಯಕ್ರಮದ

ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು Read More »

ಸುಳ್ಯ: ಉದ್ಯಮಿ ನವೀನ್ ಕಾಮಧೇನುರನ್ನು ಹೊತ್ತೊಯ್ದ ಪ್ರಕರಣ| ನವೀನ್ ರನ್ನು ತಾಯಿಯ ವಶಕ್ಕೆ ಒಪ್ಪಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಿಕ ನವೀನ್ ಕಾಮಧೇನುರನ್ನು ಏಕಾಏಕಿ ಮನೆಗೆ ಬಂದು ಅಂಬ್ಯುಲೆನ್ಸ್ ನಲ್ಲಿ ಹೊತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀರಜಾಕ್ಷಿಯವರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ನವೀನರನ್ನು ತಾಯಿಯ ವಶಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ನವೀನ್ ಕುರಿತಂತೆ ಹೈಕೋರ್ಟ್ ವರದಿ ಕೇಳಿದ್ದು, ನವೀನ್ ರನ್ನು ಆಸ್ಪತ್ರೆಗೆ ದಾಖಲುಗೊಳಿಸಿರುವುದಾಗಿ ಪೋಲೀಸರಿಂದ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿತ್ತು. ಇದರ ಬೆನ್ನಲ್ಲೇ ನವೀನರನ್ನು ದಾಖಲಿಸಲಾದ ಆಸ್ಪತ್ರೆಗೆ ನ್ಯಾಯಾಲಯವು ವಕೀಲರನ್ನು ಕಳುಹಿಸಿದೆ.

ಸುಳ್ಯ: ಉದ್ಯಮಿ ನವೀನ್ ಕಾಮಧೇನುರನ್ನು ಹೊತ್ತೊಯ್ದ ಪ್ರಕರಣ| ನವೀನ್ ರನ್ನು ತಾಯಿಯ ವಶಕ್ಕೆ ಒಪ್ಪಿಸಿದ ಹೈಕೋರ್ಟ್ Read More »

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು ಪತ್ತೆಯಾಗಿದೆ. ಇದೇ ವೇಳೆ ಅಕ್ಕಪಕ್ಕದ ನೋಡಿ ಸಂದರ್ಭ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.

ವಿಟ್ಲ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಸುಳ್ಯ: ಉದ್ಯಮಿ ನವೀನ್ ಮಲ್ಲಾರರನ್ನು ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ| ಸ್ಪಷ್ಟನೆ ನೀಡಿದ 5ನೇ ಆರೋಪಿ

ಸಮಗ್ರ ನ್ಯೂಸ್: ಬೆಳ್ಳಾರೆಯ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಕಾಮಧೇನು ಇದರ ಮಾಲಕ , ಯುವ ಉದ್ಯಮಿ ನವೀನ್ ಎಂಬವರನ್ನು ಬಲವಂತವಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಐದನೇ ಆರೋಪಿಯಾಗಿ ಬೆಳ್ಳಾರೆ ಸಮೀಪದ ತಂಬಿನಮಕ್ಕಿ ಮನೆ ನಿವಾಸಿ ನವೀನ್ ಕುಮಾರ್ ರೈ ಟಿ ಎಂಬವರನ್ನು ಹೆಸರಿಸಲಾಗಿದೆ. ಆದರೇ ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ನವೀನ್ ಕುಮಾರ್‌ ಅವರು ಪತ್ರಿಕಾ ಪ್ರಕಟನೆ ನೀಡಿದ್ದಾರೆ. ನವೀನ್ ಕಾಮಧೇನು

ಸುಳ್ಯ: ಉದ್ಯಮಿ ನವೀನ್ ಮಲ್ಲಾರರನ್ನು ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ| ಸ್ಪಷ್ಟನೆ ನೀಡಿದ 5ನೇ ಆರೋಪಿ Read More »

ಮಂಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಶಾಲೆಯೊಂದರ ವಿದ್ಯಾರ್ಥಿಗೆ ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, , ಗಾಯಾಳು ವಿದ್ಯಾರ್ಥಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ Read More »

ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ

ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »