ಕ್ರೈಂ

ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು

ಸಮಗ್ರ ನ್ಯೂಸ್ : ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿಯಲ್ಲಿ ನಡೆದಿದೆ. ಶೋಭ (40), ವರ್ಷ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದು, ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ. ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು, ಮಗ ದಾಟಲು ಯತ್ನಿಸಿದ್ದಾರೆ. […]

ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್‌ ಆಡಿಯೋ ಲೀಕ್| ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹುದ್ದೆಯಿಂದ ಕೆಳಗಿಳಿದರೂ ಭಾರಿ ಸದ್ದು ಮಾಡುತ್ತಿದ್ದಾರೆ. ಪ್ರಧಾನಿಯಾಗಿ ವಿವಾದದಲ್ಲೇ ಮುಳುಗಿದ್ದ ಇಮ್ರಾನ್ ಖಾನ್ ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯಲ್ಲಿ ಗುಂಡೇಟು ತಗುಲಿ ವಿಶ್ವದಾದ್ಯಂತ ಸುದ್ದಿಯಾಗಿದ್ದರು. ಇದೀಗ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ಇಮ್ರಾನ್ ಖಾನ್ ಮಹಿಳೆ ಜೊತೆ ಸೆಕ್ಸ್ ಕುರಿತು ಮಾತನಾಡುವ ಆಡಿಯೋ ಕಾಲ್ ಲೀಕ್ ಆಗಿದೆ. ಈ ಆಡಿಯೋ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರದ್ದು ಎನ್ನಲಾಗುತ್ತಿದೆ. ಈ ಆಡಿಯೋದಲ್ಲಿ ಇಮ್ರಾನ್ ಖಾನ್ ಈಗಲೇ ತನ್ನ ಬಳಿ ಬರುವಂತೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್‌ ಆಡಿಯೋ ಲೀಕ್| ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ Read More »

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆಯವರ ನೇತೃತ್ವದಲ್ಲಿ ಡಿ.೧೯ ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಆಗ್ರಹಿಸಿದರು. ಜನಪ್ರತಿನಿಧಿಗಳ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು. ಪ್ರತಿಭಟನಾ ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ಬರುತ್ತಿದ್ದಂತೆ ಕಾರ್ಯಕರ್ತರು ಜೋರಾಗಿ ಧಿಕ್ಕಾರದ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ರಾಜ್ಯಾದ್ಯಕ್ಷ ಸುಂದರ ಪಾಟಾಜೆ ತಮ್ಮ ಬಳಿ ತಂದಿದಂತಹ ವಿವಿಧ ಬೇಡಿಕೆಗಳ ಮನವಿಗಳನ್ನು ತಹಶೀಲ್ದಾರರಿಗೆ ನೀಡಿ

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ Read More »

ಬೆಂಗಳೂರು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಮೃತರನ್ನು ಯಶೋಧಾ (71), ಸುಮನ್ (41) ಹಾಗೂ ನರೇಶ್ ಗುಪ್ತಾ (34) ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಗಳೂರು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಪಿಕ್ಕಾಸಿಯಿಂದ ಹೊಡೆದು ವಿದ್ಯಾರ್ಥಿಯ ಕೊಲೆಗೈದ ಅತಿಥಿ ಶಿಕ್ಷಕ| ತರಗತಿ ವೇಳೆಯಲ್ಲೇ ನಡೆಯಿತು ಬರ್ಬರ ಹತ್ಯೆ

ಸಮಗ್ರ ನ್ಯೂಸ್; ಅತಿಥಿ ಶಿಕ್ಷನೊಬ್ಬ 4ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಭರತ್(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತ ವಿದ್ಯಾರ್ಥಿ ಮೇಲೆ ಪಿಕಾಸಿಯಿಂದ ಹಲ್ಲೆ ಮಾಡಿದ್ದಾಗಿ ಹೇಳಲಾಗಿದೆ. ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಅವರ ಮೇಲೂ ಮನಬಂದಂತೆ ಹಲ್ಲೆ ಮಾಡಿದ್ದಾನೆ. ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವಗೊಂಡ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹಲ್ಲೆ

ಪಿಕ್ಕಾಸಿಯಿಂದ ಹೊಡೆದು ವಿದ್ಯಾರ್ಥಿಯ ಕೊಲೆಗೈದ ಅತಿಥಿ ಶಿಕ್ಷಕ| ತರಗತಿ ವೇಳೆಯಲ್ಲೇ ನಡೆಯಿತು ಬರ್ಬರ ಹತ್ಯೆ Read More »

ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸಮಗ್ರ ನ್ಯೂಸ್; ಬೆಂಗಳೂರಿನ ವಿವಿ ಪುರ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊದಲ ವರ್ಷದ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ವಾಣಿ (23) ಎಂಬಾಕೆ ಮೃತ ದುರ್ದೈವಿ. ಸೋಮವಾರ ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಳು. ಕಾಲೇಜು ಆಡಳಿತ ಮಂಡಳಿಯವರು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ, ತೀವ್ರ ರಕ್ತಸ್ರಾವದಿಂದಾಗಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೂ ಮುನ್ನ ಎರಡು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವ ವಾಣಿ,

ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ Read More »

ಸುಳ್ಯ: ಯುವ ಉದ್ಯಮಿ ನವೀನ್ ಮಲ್ಲಾರ ಅಪಹರಣ ಪ್ರಕರಣ| ಅಂಬ್ಯುಲೆನ್ಸ್ ನಲ್ಲಿ ಅಳಿಯನನ್ನೇ ಕಿಡ್ನಾಪ್ ಮಾಡಿಸಿದ್ರಾ ಕೈ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ? ಸುಂಟಿಕೊಪ್ಪದಲ್ಲಿ ಹೈಡ್ರಾಮಾ…!

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಕಾಮಧೇನು ಅವರನ್ನು ಕಿಡ್ನಾಪ್ ಮಾಡಿರುವ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಡಿ.19ರ ಮಧ್ಯಾಹ್ನ ಬೆಳ್ಳಾರೆಯ ಕಾವಿನಮೂಲೆಯಲ್ಲಿರುವ ನವೀನ್ ರ ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದಿದ್ದು, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿ ಅಂಬ್ಯುಲೆನ್ಸ್ ನಲ್ಲಿ ಪರಾರಿಯಾಗಿದ್ದರು. ಇವರನ್ನು ಆಂಬ್ಯುಲೆನ್ಸ್ ನಲ್ಲಿ‌ ಅಪಹರಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸುಳ್ಯದ ಶಿವ ಆಂಬ್ಯುಲೆನ್ಸ್ ನವರು ತಮ್ಮ ಗ್ರೂಪ್ ಗಳಿಗೆ ಮಾಹಿತಿ

ಸುಳ್ಯ: ಯುವ ಉದ್ಯಮಿ ನವೀನ್ ಮಲ್ಲಾರ ಅಪಹರಣ ಪ್ರಕರಣ| ಅಂಬ್ಯುಲೆನ್ಸ್ ನಲ್ಲಿ ಅಳಿಯನನ್ನೇ ಕಿಡ್ನಾಪ್ ಮಾಡಿಸಿದ್ರಾ ಕೈ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ? ಸುಂಟಿಕೊಪ್ಪದಲ್ಲಿ ಹೈಡ್ರಾಮಾ…! Read More »

ಸುಳ್ಯ: ಯುವ ಉದ್ಯಮಿ ನವೀನ್ ಮಲ್ಲಾರ ಅಪಹರಣ| ಸುಂಟಿಕೊಪ್ಪದಲ್ಲಿ ಕಿಡ್ನಾಪರ್ಸ್ ಗಳ ವಾಹನಕ್ಕೆ ತಡೆ; ಪೊಲೀಸರಿಗೆ ಹಸ್ತಾಂತರ

ಸಮಗ್ರ ನ್ಯೂಸ್: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಕಾಮಧೇನು ಅವರನ್ನು ಅಪರಿಚಿತ ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಅಪಹರಣ ಮಾಡಿದ್ದು, ಕಿಡ್ನಾಪರ್ ಗಳ ವಾಹನಕ್ಕೆ ಸುಂಟಿಕೊಪ್ಪದಲ್ಲಿ ತಡೆಯೊಡ್ಡಲಾಗಿದೆ. ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದಿದ್ದು, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿತ್ತು. ಇತ್ತೀಚಿನ ಮಾಹಿತಿಯಂತೆ, ಇವರನ್ನು ಆಂಬ್ಯುಲೆನ್ಸ್ ನಲ್ಲಿ‌ ಅಪಹರಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸುಳ್ಯದ ಶಿವ ಆಂಬ್ಯುಲೆನ್ಸ್ ನವರು ತಮ್ಮ ಗ್ರೂಪ್ ಗಳಿಗೆ ಮಾಹಿತಿ ರವಾನಿಸಿದ

ಸುಳ್ಯ: ಯುವ ಉದ್ಯಮಿ ನವೀನ್ ಮಲ್ಲಾರ ಅಪಹರಣ| ಸುಂಟಿಕೊಪ್ಪದಲ್ಲಿ ಕಿಡ್ನಾಪರ್ಸ್ ಗಳ ವಾಹನಕ್ಕೆ ತಡೆ; ಪೊಲೀಸರಿಗೆ ಹಸ್ತಾಂತರ Read More »

ಸುಳ್ಯ: ಯುವ ಉದ್ಯಮಿಯ ಕಿಡ್ನಾಪ್?

ಸಮಗ್ರ ನ್ಯೂಸ್: ಬೆಳ್ಳಾರೆಯ ಯುವ ಉದ್ಯಮಿಯೋರ್ವರನ್ನು ಅಪರಿಚಿತ ತಂಡವೊಂದು ಕಿಡ್ನಾಪ್ ಮಾಡಿರುವ ಬಗ್ಗೆ ವರದಿಯಾಗಿದೆ. ಮನೆಗೆ ಬಂದ ಅಪರಿಚಿತ ತಂಡವೊಂದು ಕಾಮಧೇನು ಜ್ಯುವೆಲ್ಲರ್ ನ ಮಾಲೀಕ ಉದ್ಯಮಿ ನವೀನ್ ಮಲ್ಲಾರರನ್ನು ಕಿಡ್ನಾಪ್ ಮಾಡಿದ್ದು, ಅವರ ತಾಯಿಯನ್ನು ತಳ್ಳಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೇರಳ ಮೂಲದ ಅಂಬ್ಯುಲೆನ್ಸ್ ನಲ್ಲಿ ದುಷ್ಕರ್ಮಿಗಳು ಬಂದಿರುವುದಾಗಿ ಹೇಳಲಾಗುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿಗಳು ಲಭ್ಯವಾಗಿಲ್ಲ. ಉದ್ಯಮಿ ನವೀನ್ ಅವರ ತಾಯಿ ನೀರಜಾರವರು ಪ್ರತಿಕ್ರಿಯೆ ನೀಡಿದ್ದು, ”ಮಗನನ್ನು ನನ್ನ ಕಣ್ಣೆದುರೇ ಎಳೆದೊಯ್ಯಲಾಗಿದೆ. ನನಗೆ ಮಗ ಬೇಕು”

ಸುಳ್ಯ: ಯುವ ಉದ್ಯಮಿಯ ಕಿಡ್ನಾಪ್? Read More »

ನಾಲ್ವರನ್ನು ಮದ್ವೆಯಾಗಿ ಇಬ್ಬರೊಟ್ಟಿಗೆ ಎಂಗೇಜ್ ಆಗಿದ್ದ ಚಪಲ ಚೆನ್ನಿಗರಾಯ|

ಸಮಗ್ರ ನ್ಯೂಸ್: ನಾಲ್ವರನ್ನು ಮದುವೆಯಾಗಿ, ಇನ್ನೂ ಇಬ್ಬರನ್ನು ಎಂಗೇಜ್‌ಮೆಂಟ್‌ ಮಾಡಿಕೊಂಡು ಎಲ್ಲರನ್ನೂ ಪರಸ್ಪರ ಗೊತ್ತೇ ಆಗದಂತೆ ಮೇಂಟೇನ್‌ ಮಾಡುತ್ತಿದ್ದ ಚಪಲ ಚೆನ್ನಿಗರಾಯನನ್ನು ಪೊಲೀಸರು ಬಂಧಿಸಿದ್ದಾರೆ. ಶೇಖ್ ಫಾರೂಕ್ ಎಂಬಾತನೇ ನಾಲ್ವರು ಹೆಂಡಿರ ಗಂಡ. ಈತ ನಾಲ್ಕು ಮಂದಿ ಹೆಣ್ಣು ಮಕ್ಕಳನ್ನು ಮದುವೆಯಾಗಿ, ಇನ್ನೂ ಇಬ್ಬರ ಜತೆಗೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದ. ನಾಲ್ವರೂ ಕೂಡ ಈತ ತನಗೊಬ್ಬಳಿಗೇ ಪತಿ ಅಂದುಕೊಂಡಿದ್ದರು. ನಾಲ್ಕು ಜನ ಹೆಂಡತಿಯರಿಗೂ ಅನುಮಾನ ಬಾರದ ರೀತಿಯಲ್ಲಿ ನೋಡಿಕೊಂಡಿದ್ದ. ಪ್ರತೀ ಪತ್ನಿಯ ಕಡೆಯಿಂದಲೂ ನಯವಾಗಿ ಹಣ, ಚಿನ್ನಾಭರಣ ಲಪಟಾಯಿಸುತ್ತಿದ್ದ.

ನಾಲ್ವರನ್ನು ಮದ್ವೆಯಾಗಿ ಇಬ್ಬರೊಟ್ಟಿಗೆ ಎಂಗೇಜ್ ಆಗಿದ್ದ ಚಪಲ ಚೆನ್ನಿಗರಾಯ| Read More »