ಕ್ರೈಂ

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಸರಿಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ ಕೃಷ್ಣ ನಾಯ್ಕ್ ಮತ್ತು ಸರಸ್ವತಿ ದಂಪತಿ ಪುತ್ರ, ಪಟ್ಟೆಯ ಪ್ರತಿಭಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಂಜಿತ್ ಮೃತ ಪಟ್ಟವರು. ರಂಜಿತ್ ಅವರ ಪರಿಚಯದ ಹುಡುಗನೋರ್ವ ತನ್ನ ಮನೆಗೆ ವಿದ್ಯುತ್ ಇಲ್ಲ, ಹಾಗಾಗಿ ಅದನ್ನು ಸರಿಪಡಿಸುವಂತೆ ರಂಜಿತ್ ಅವರನ್ನು […]

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು Read More »

ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಡಿ.17 ರ ಮುಂಜಾನೆ 6

ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್ Read More »

ಅಸ್ಸಾಂ ಕಾರ್ಮಿಕರಿಂದ ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಅಸ್ಸಾಂ ಕಾರ್ಮಿಕರು ಕಾಫಿ ತೋಟದ ಮಾಲೀಕನ ಮೇಲೆ‌ ಹಲ್ಲೆಗೆ ಯತ್ನಿಸಿದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ದ್ಯಾವನಗೂಲ್ ಹ್ಯಾರೀಸ್ ಎಸ್ಟೇಟ್ ನಲ್ಲಿ‌ ನಡೆದಿದೆ. ಹ್ಯಾರೀಸ್ ಎಸ್ಟೇಟ್ ನ ಮಾಲೀಕರಾದ ಅಜ್ಘರ್ ಅಹಮ್ಮದ್ ಅವರ ಮೇಲೆ ಅವರ ತೋಟದ ಅಸ್ಸಾಂ ಕಾರ್ಮಿಕರು ಹಲ್ಲೆ ನಡೆಸಲು ಮುಂದಾಗಿದ್ದರು. ಈ ಬಗ್ಗೆ ಅಜ್ಘರ್ ಅಹಮ್ಮದ್ ಅವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಣಕಲ್‌ ಪೊಲೀಸರು ಈ ಬಗ್ಗೆ ತನಿಖೆ‌ ಕೈಗೊಂಡಿದ್ದಾರೆ.

ಅಸ್ಸಾಂ ಕಾರ್ಮಿಕರಿಂದ ಕಾಫಿತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ Read More »

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ ಗಿರಿ ಮತ್ತೆ ಮುಂದುವರೆದಿದೆ. ಜಿಲ್ಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿಗೆ ತಡೆ ಹಿಡಿದಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಭಾತರ್‌ ಚಿತ್ರಮಂದಿರದ ಬಳಿ ಘಟನೆ ನಡೆದಿದೆ. ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಉರ್ವಾ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಈ ವೇಳೆ ಮಂಗಳೂರಿನ ಉರ್ವಾ ಠಾಣೆ ಪೊಲೀಸರಿಂದ ಆ ಜೋಡಿಯ ರಕ್ಷಣೆ ಮಾಡಿದ್ದಾರೆ. ಕೂಡಲೇ ಆ

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ Read More »

ಬಂಟ್ವಾಳ: ಖಾಸಗಿ ಬಸ್ ಗಳ‌ ಮುಖಾಮುಖಿ ಡಿಕ್ಕಿ| 8 ಮಂದಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಶನಿವಾರ (ಡಿ.17) ಬೆಳಿಗ್ಗೆ ನಡೆದಿದೆ. ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಂಟ್ವಾಳ: ಖಾಸಗಿ ಬಸ್ ಗಳ‌ ಮುಖಾಮುಖಿ ಡಿಕ್ಕಿ| 8 ಮಂದಿಗೆ ಗಾಯ Read More »

ಬೀದಿನಾಯಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ| ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಮೈದಾನವೊಂದರಲ್ಲಿ ಹೆಣ್ಣು ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಘಟನೆ ನಾಗ್ಪುರದ ಶಾಹು ನಗರದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಾಯಿಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ ಆರೋಪಿ ಮಧ್ಯಪ್ರದೇಶ ರಾಜ್ಯದ ಬಾಲಘಾಟ್ ಜಿಲ್ಲೆಯವನಾಗಿದ್ದು, ನಾಗ್ಪುರದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ಎಂದು ಹುದಕೇಶ್ವರ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲಲಿತ್ ವರ್ಟಿಕರ್ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ತಡೆ ಕಾಯ್ದೆಯಡಿ 377(ಅನೈಸರ್ಗಿಕ

ಬೀದಿನಾಯಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ| ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Read More »

ಮೂತ್ರಬಾಧೆಗೆ ಕಾರಿನಿಂದಿಳಿದ ವಕೀಲನಿಗೆ ಚಾಕು‌ ತೋರಿ ಕಾರು ಹೊತ್ತೊಯ್ದ ಕಳ್ಳರು

ಸಮಗ್ರ ನ್ಯೂಸ್: ಮೂತ್ರ ಮಾಡಲೆಂದು ಕಾರಿನಿಂದ ಇಳಿದ ವಕೀಲೊಬ್ಬರಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆನ್ಜ್​ ಕಾರು ಕದ್ದು ಪರಾರಿಯಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಸೆಕ್ಟರ್ 29ರಲ್ಲಿ ಈ ಘಟನೆ ನಡೆದಿದ್ದು, ವಕೀಲರೊಬ್ಬರು ಮೂತ್ರ ಮಾಡಲೆಂದು ಕಾರಿಳಿದಿದ್ದಾರೆ, ಅದೇ ಸಮಯದಲ್ಲಿ ಬಂದ ದುಷ್ಕರ್ಮಿಗಳು ಚಾಕು ತೋರಿಸಿ ಮರ್ಸಿಡಿಸ್ ಬೆಂಜ್ ಕಾರನ್ನು ಕದ್ದು ಪರಾರಿಯಾಗಿದ್ದಾರೆ. ಸೆಕ್ಟರ್ 66ರಲ್ಲಿ ವಾಸಿಸುತ್ತಿರುವ ವಕೀಲ ಅನುಜ್ ಬೇಡಿ ಅವರು ನೀಡಿರುವ ದೂರಿನ ಪ್ರಕಾರ, ಗುರುವಾರ ರಾತ್ರಿ 8.50ರ ಸುಮಾರಿಗೆ ಸೆಕ್ಟರ್ 29ರ

ಮೂತ್ರಬಾಧೆಗೆ ಕಾರಿನಿಂದಿಳಿದ ವಕೀಲನಿಗೆ ಚಾಕು‌ ತೋರಿ ಕಾರು ಹೊತ್ತೊಯ್ದ ಕಳ್ಳರು Read More »

ದಸರಾ ಗಜಪಡೆಯ ಬಲರಾಮನಿಗೆ ಗುಂಡೇಟು| ಜಮೀನು ಮಾಲೀಕನ ಬಂಧನ

ಸಮಗ್ರ ನ್ಯೂಸ್: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆಗೆ ಗುಂಡು ಹಾರಿಸಿದ ಜಮೀನಿನ ಮಾಲೀಕನನ್ನು ಬಂಧಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ್ ಆನೆಗೆ ಗುಂಡು ಹಾರಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶು ವೈದ್ಯಾಧಿಕಾರಿ ಡಾ. ರಮೇಶ್ ಚಿಕಿತ್ಸೆ ನೀಡಿದ್ದು, ಸದ್ಯ ಆನೆ ಬಲರಾಮ ಚೇತರಿಸಿಕೊಳ್ಳುತ್ತಿದೆ. ಆನೆ ಬಲರಾಮನಿಗೆ ಗುಂಡು ಹಾರಿಸಿ

ದಸರಾ ಗಜಪಡೆಯ ಬಲರಾಮನಿಗೆ ಗುಂಡೇಟು| ಜಮೀನು ಮಾಲೀಕನ ಬಂಧನ Read More »

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…?

ಸಮಗ್ರ ನ್ಯೂಸ್: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…? Read More »

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್

ಸಮಗ್ರ ನ್ಯೂಸ್: ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ಮಂಗಳಮುಖಿಯರ ಅನೈತಿಕ ದಂಧೆ ಮಿತಿಮೀರಿದ್ದು, ಮಧ್ಯರಾತ್ರಿ ಉಡುಪಿ ಎಸ್‌ಪಿ ಕಾರ್ಯಚರಣೆ ನಡೆಸಿದ್ದಾರೆ. ಎಸ್‌ಪಿ ಎಂದು ತಿಳಿಯದ ಮಂಗಳ ಮುಖಿಯರು ಎಸ್‌ಪಿ ಜತೆಗೆ ವಾಗ್ವಾದಕ್ಕಿಳಿದು, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅನೈತಿಕ ಚಟುವಟಿಕೆ ಹತ್ತಿಕ್ಕುವ ಕಾರ್ಯಾಚರಣೆ ವೇಳೆ ಕೆಲಕಾಲ

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್ Read More »