ಕ್ರೈಂ

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ

ಸಮಗ್ರ ನ್ಯೂಸ್: ಆರು ಮಂದಿಯ ತಂಡವೊಂದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷವೆಂದರೆ ಈ ಕೃತ್ಯದಲ್ಲಿ ಮೂವರು‌ ಮಹಿಳೆಯರೂ ಪಾತ್ರ ವಹಿಸಿರುವುದು. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ […]

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ Read More »

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ

ಸಮಗ್ರ ನ್ಯೂಸ್ : ತನ್ನ ಮಗನನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದಲ್ಲದೆ ನಾಪತ್ತೆಯ ನಾಟಕವಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಅಖಿಲ್ ಭರತ್ ಮಹಾಜನ ಶೇಠ್ (26) ಎಂಬಾತ ಕೊಲೆಯಾಗಿದ್ದು, ಇಲ್ಲಿನ ಕೇಶ್ವಾಪುರ ಅರಿಹಂತ ನಗರದಲ್ಲಿ ಚಿನ್ನದ ಅಂಗಡಿ ಮಾಲಕನಾಗಿರುವ ಭರತ್ ಜೈನ್‌ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆ ದೂರು ದಾಖಲಾಗಿತ್ತು: ಡಿ. 3ರಂದು ಕೇಶ್ವಾಪುರ ಠಾಣೆಯಲ್ಲಿ ಅಖಿಲ್ ಕಾಣೆಯಾದ ಬಗ್ಗೆ ಹಾಗೂ ತಂದೆ ಭರತ್ ಜೈನ್‌ಗೆ ವಿಡಿಯೋ ಕಾಲ್

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ Read More »

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!!

ಸಮಗ್ರ ನ್ಯೂಸ್: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!! Read More »

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ

ಸಮಗ್ರ ನ್ಯೂಸ್: ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಐವರು ಅಪಹರಣಕಾರರ ಬಂಧನವಾಗಿದೆ. ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಹೆಜ್ಜೆ

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ Read More »

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು

ಸಮಗ್ರ ನ್ಯೂಸ್: ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು Read More »

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡುವುದಕ್ಕೂ ಮೊದಲ ಉಗ್ರ ಶಾರೀಖ್‌, ಇಬ್ಬರು ಮಹಿಳೆಯರ ಜೊತೆ ಆತ ಮಡಿಕೇರಿ ಜಿಲ್ಲೆ ಹೋಮ್‌ ಸ್ಟೇ ಒಂದಕ್ಕೆ ಬಂದಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶಾರೀಖ್‌ ಹಾಗೂ ಆತನ ಸಹಚರರು ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದರಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಗೂ ಮಂಗಳೂರು ಪೊಲೀಸರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಬಳಿಯ ನೆಮ್ಮಲೆ ಗ್ರಾಮದ ಓಟೆಕಾಡ್ ಹೋಂಸ್ಟೇಯಲ್ಲಿ

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!! Read More »

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಎಂಬತ್ತು ವರ್ಷದ ಒಂಟಿ ವೃದ್ಧೆ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡಿದ್ದ ವೃದ್ಧೆ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆಕೆಯ ಮೇಲೆ ಎಸ್‌.ರವಿ ಎಂಬಾತ ಅತ್ಯಾಚಾರ ಎಸಗಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶನಿವಾರ ಬೆಳಗ್ಗೆ ಒಂಟಿಯಾಗಿದ್ದ ವೃದ್ಧೆಯ ಮನೆಗೆ ನುಗ್ಗಿದ ಆರೋಪಿ ಎಸ್‌.ರವಿ, ವೃದ್ಧೆಯನ್ನು ಅಡುಗೆ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬೇಡ ಎಂದು ಎಷ್ಟೇ ಕೂಗಿಕೊಂಡರೂ ಆತ ಬಿಡಲಿಲ್ಲ

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ Read More »

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ Read More »

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ

ಸಮಗ್ರ ನ್ಯೂಸ್ ರಾಜಕಾರಣಿಯೊಬ್ಬರ ಪತ್ನಿ ಮದುವೆ ಮನೆ ಹಾಗೂ ಗಿಫ್ಟ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನಗರದ ನಾವದಗೇರಿಯ ಸಂತೋಷಿ ಶಿವರಾಜ ಕೊಳ್ಳೂರ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪಕ್ಕೆ ಆಹ್ವಾನಿತರಂತೆ ಬಂದು ಮದುಮಕ್ಕಳ ಕೊಠಡಿಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಸಿಪಿಐ ಕಪೀಲ್ ನೇತೃತ್ವದ ತಂಡದಿಂದ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬಂಧಿತ ಆರೋಪಿಯಿಂದ ₹ 3.80 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಗಿಫ್ಟ್​ ಅಂಗಡಿಯಲ್ಲಿ

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ Read More »

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ?

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ‌ ಸಮೀಪದ ತೊಕ್ಕೊಟ್ಟಿನ ಲಾಡ್ಜ್ ವೊಂದರಲ್ಲಿ ತಂಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹ ಸಮೀಪದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆ ಎತ್ತಲಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್‌ ಎ.ಎಸ್‌. (36) ಮೃತ ಯುವಕ. ನ. 30ರಂದು ತೊಕ್ಕೊಟ್ಟಿಗೆ ಬಂದಿದ್ದ ಆತ ಲಾಡ್ಜ್ನಲ್ಲಿ ತಂಗಿದ್ದರು. ಆ ಬಳಿಕ ಹೊರಗೆ ತೆರಳಿದವರು ವಾಪಸಾಗಿರಲಿಲ್ಲ. ಡಿ. 1ರಂದು

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ? Read More »