ಕ್ರೈಂ

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

ಸಮಗ್ರ ನ್ಯೂಸ್: ತನ್ನದೇ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಿಗೆಹಾರದ ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್ ಎ ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್, ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್,ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ, ವಾಹನ ಚಾಲಕ ಸತೀಶ್ […]

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ Read More »

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್

ಸಮಗ್ರ ನ್ಯೂಸ್: ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.ಇಲ್ಲಿನ ಕರ್ನೂಲ್​​ ಜಿಲ್ಲೆಯಲ್ಲಿ ಡ್ರಗ್​ ಇನ್ಸ್​ಪೆಕ್ಟರ್​ ಆಗಿ ಕೆಲಸ ಮಾಡುತ್ತಿರುವ ಅಬೀದ್​ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ. ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್​ ಅಲಿ ತನಗೆ ಮದುವೆ ಆಗಿರುವ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ ಜತೆಗೆ ಲವ್ವಿ ಡವ್ವಿ ಆಡಿ

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್ Read More »

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಂಭವಿಸಿದೆ. ಸಾವಿಗೀಡಾದವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ (30)ಎಂದು ಗುರುತಿಸಲಾಗಿದೆ. ಭಟ್ಕಳ NH66ರ ಮೂಡ್‍ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಈ ಯುವಕರಿಬ್ಬರು ನಗರದ ಹೋಟೆಲ್‍ ಒಂದರಲ್ಲಿ

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು Read More »

ಸುಳ್ಯ: ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ

ಸಮಗ್ರ ನ್ಯೂಸ್: ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಪಾಲಡ್ಕ ಬಳಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಈ ವೆಳೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ Read More »

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ|18 ವಿದ್ಯಾರ್ಥಿಗಳಿಗೆ ಗಾಯ

ಸಮಗ್ರ ನ್ಯೂಸ್: ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ|18 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ|ಬಸ್ ಕಂಡೆಕ್ಟರ್, ಸಂಘಪರಿವಾರದ ಕಾರ್ಯಕರ್ತರಿಂದ ಮುಸ್ಲಿಮ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಮುಲ್ಲರಪಟ್ನ ನಿವಾಸಿ ಇಸಾಕ್ (45) ಎಂದು ಗುರುತಿಸಲಾಗಿದೆ. ಇವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಬಿ.ಸಿ.ರೋಡ್’ನಿಂದ ಮೂಡಬಿದ್ರೆಗೆ ಹೋಗಲು ‘ಮಹಾ ಗಣೇಶ’ ಎಂಬ ಖಾಸಗಿ ಬಸ್ ಹತ್ತಿದ್ದಾರೆ. ಸ್ವಲ್ಪ ದೂರ ಹೋದ ಬಳಿಕ ವಿದ್ಯಾರ್ಥಿಗಳು, ಇತರ ಪ್ರಯಾಣಿಕರು ಬಸ್ ಹತ್ತಿದ್ದರಿಂದ ವಿಪರೀತ ಪ್ರಯಾಣಿಕ ದಟ್ಟಣೆ ಉಂಟಾಗಿದೆ. ಇಸಾಕ್

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ|ಬಸ್ ಕಂಡೆಕ್ಟರ್, ಸಂಘಪರಿವಾರದ ಕಾರ್ಯಕರ್ತರಿಂದ ಮುಸ್ಲಿಮ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ Read More »

ಗದಗ: ಶಿರಹಟ್ಟಿಯ ಮಾಜಿ ಶಾಸಕ ಎಸ್.ಎನ್ ಪಾಟೀಲ ನಿಧನ

ಸಮಗ್ರ ನ್ಯೂಸ್: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್‌ ಪಾಟೀಲ ನಿಧನ ಹೊಂದಿದ್ದಾರೆ. ಎಸ್‌.ಎನ್.ಪಾಟೀಲ ಅವರಿಗೆ 81 ವಯಸ್ಸಾಗಿತ್ತು. ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.ಎಸ್. ಎನ್‌ ಪಾಟೀಲ ಸರಳ, ಸಜ್ಜನಿಕೆ, ನೇರ – ನಿಷ್ಠುರ ವ್ಯಕ್ತಿತ್ವ ಹೊಂದಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಪಾಟೀಲ ಅವರು ಶಾಸಕರಾಗಿದ್ದರು.

ಗದಗ: ಶಿರಹಟ್ಟಿಯ ಮಾಜಿ ಶಾಸಕ ಎಸ್.ಎನ್ ಪಾಟೀಲ ನಿಧನ Read More »

ಬೆಳ್ತಂಗಡಿ: ಬಂದಾರು‌ ಗ್ರಾ.ಪಂ ಸಿಬ್ಬಂದಿ ನಿಧನ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ಜನಸ್ನೇಹಿ ಉದ್ಯೋಗ ಖಾತ್ರಿ ಡಾಟಾ ಎಂಟ್ರಿ ಸಿಬ್ಬಂದಿ ಮೊಗ್ರು ಗ್ರಾಮದ ನಾಯಿಮಾರು ಲಲಿತ (38 ಪ್ರಾ) ಇವರು ಅನಾರೋಗ್ಯದಿಂದ ಸ್ವಗೃಹದಲ್ಲಿ ವಿಧಿವಿಶರಾದರು. ಮೃತರು ಪತಿ ಲವ, ಮಕ್ಕಳಾದ ಸ್ವಸ್ಥಿಕ್ ,ಸಾಕ್ಷಿತ್ ಇವರನ್ನು ಅಗಲಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ನಲ್ಲಿ 14 ವರ್ಷ ಸೇವೆ ಸಲ್ಲಿಸಿರುತ್ತಾರೆ. ಜನರ ಜೊತೆ ನಗುಮೊಗದ ಜನಸ್ನೇಹಿ ಕೆಲಸ ಕಾರ್ಯದಲ್ಲಿ ನಿರತರಾಗಿ,ಅಪಾರ ಜನರ ಪ್ರೀತಿ ಪಾತ್ರರಾಗಿದ್ದರು. ಬಂದಾರು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಗೌಡ, ಉಪಾಧ್ಯಕ್ಷ

ಬೆಳ್ತಂಗಡಿ: ಬಂದಾರು‌ ಗ್ರಾ.ಪಂ ಸಿಬ್ಬಂದಿ ನಿಧನ Read More »

ಉದ್ಯಮಿಗೆ ಬೆದರಿಕೆ; ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್‌ ಪವಿತ್ರನ್‌ ಎಂಬುವರನ್ನು ಸುರತ್ಕಲ್‌ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್‍ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು

ಉದ್ಯಮಿಗೆ ಬೆದರಿಕೆ; ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್ Read More »

ಪತ್ನಿಯ ಐಷಾರಾಮಿ ಆಸೆಗೆ ಬೇಸತ್ತ ಪತಿ| ಹೆಂಡತಿ ಕಾಟ ತಾಳಲಾರದೆ ‌ನವವಿವಾಹಿತ ಆತ್ಮಹತ್ಯೆ

ಸಮಗ್ರ ನ್ಯೂಸ್: ಹೆಂಡತಿ ಕಾಟ ತಾಳಲಾರದೇ ನವವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್‌ ಸಿಟಿಯ ಉಲ್ಲಾಳದ ಬಳಿಯ ಎಂವಿ ಲೇಔಟ್ನಲ್ಲಿ ನಡೆದಿದೆ. ಮಹೇಶ್ವರ(24) ಮೃತ ದುರ್ದೈವಿ. ಕಳೆದ ಆಗಸ್ಟ್ 21 ರಂದು ಕವನಾ ಎಂಬಾಕೆಯ ಜೊತೆ ಮಹೇಶ್ವರ ಸಪ್ತಪದಿ ತುಳಿದಿದ್ದ. ಆದರೆ ಮದುವೆಯಾದ ಮೇಲೆ ಹೆಂಡತಿ ಕವನಾ ಪ್ರತಿದಿನ ಟಾರ್ಚರ್‌ ಕೊಡುತ್ತಿದ್ದಳು. ನಾನು ಐಷಾರಾಮಿ ಜೀವನ ನಡೆಸಬೇಕು. ನನಗೆ ಚಿನ್ನಾಭರಣ ಬೇಕು ಎಂದು ಪ್ರತಿ ನಿತ್ಯ ಪೀಡಿಸುತ್ತಿದ್ದು ಎನ್ನಲಾಗಿದೆ. ಇದಕ್ಕೆ ಮಹೇಶ್ವರ ಸ್ಪಂದಿಸದಿದ್ದಾಗ ಅವಾಚ್ಯ ಶಬ್ದಗಳಿಂದ ಕವನಾ

ಪತ್ನಿಯ ಐಷಾರಾಮಿ ಆಸೆಗೆ ಬೇಸತ್ತ ಪತಿ| ಹೆಂಡತಿ ಕಾಟ ತಾಳಲಾರದೆ ‌ನವವಿವಾಹಿತ ಆತ್ಮಹತ್ಯೆ Read More »