ಕ್ರೈಂ

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಯುವಕನಲ್ಲಿ ಹಣಕ್ಕೆ ಪೀಡಿಸಿದ್ದಲ್ಲದೆ ಪೊಲೀಸ್ ವಸತಿಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆಂಬ ಆರೋಪದಲ್ಲಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾಮದ ಭೀಮಗುಂಡಿ ಶಶಿಕಿರಣ್‌ (19) ಅವರು ಸುಬ್ರಹ್ಮಣ್ಯ ಠಾಣೆಯ ಪೊಲೀಸ್‌ ಸಿಬ್ಬಂದಿ ಭೀಮಣ್ಣ ಗೌಡ ವಿರುದ್ದ ದೂರು ನೀಡಿದ್ದಾರೆ. ಪಂಚಮಿ ದಿನವಾದ ನವೆಂಬರ್‍ 28ರಂದು ವ್ಯಾಪಾರ ನಡೆಸುತ್ತಿದ್ದಾಗ ರಾತ್ರಿ 11.30ರ ವೇಳೆಗೆ ಸ್ಟಾಲ್‌ಗೆ ಬಂದ ಭೀಮಣ್ಣ ಗೌಡ […]

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು Read More »

ಬೈಕ್ ಗೆ ಡಿಕ್ಕಿ ಹೊಡೆದ ಎಂಎಲ್ಸಿ ರವಿಕುಮಾರ್ ಕಾರು

ಸಮಗ್ರ ನ್ಯೂಸ್: ಬೈಕ್‌ ಸವಾರನಿಗೆ ಎಂಎಲ್‌ಸಿ ರವಿಕುಮಾರ್‌ ಕಾರು ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರನಿಗೆ ಗಾಯವಾಗಿದೆ. ಇದೇ ವೇಳೆ ಗಾಯಾಳುವಿನ ಸಹಾಯಕ್ಕೆ ಬಾರದ ಹಿನ್ನಲೆಯಲ್ಲಿ ಅವರಿಗೆ ಸ್ಥಳೀಯ ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕೋಲಾರ ತಾಲೂಕಿನ ಲಕ್ಷ್ಮಿಸಾಗರ ಬಳಿ ಈ ಅಪಘಾತವಾಗಿದ್ದು, ರವಿಕುಮಾರ್‌ ಇದ್ದ ಕಾರು ಬೈಕ್‌ ಸವಾರಿನಿಗೆ ಗುದ್ದಿದೆ ಎನ್ನಲಾಗಿದೆ. ಅಪಘಾತ ಸ್ಥಳಕ್ಕೆ ವೇಮಗಲ್ ಪೋಲಿಸರು ಆಗಮಿಸಿ, ಸ್ಥಳಿಯರನ್ನು ಸಮಾಧಾನ ಮಾಡಿ, ಗಾಯಾಳುವನ್ನು ಹತ್ತಿರದ ಆಸ್ಪತ್ತೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ ಅಂತ ತಿಳಿದು ಬಂದಿದೆ.

ಬೈಕ್ ಗೆ ಡಿಕ್ಕಿ ಹೊಡೆದ ಎಂಎಲ್ಸಿ ರವಿಕುಮಾರ್ ಕಾರು Read More »

10ವರ್ಷದ ಬಾಲಕಿಯ ಬರ್ಬರ ಹತ್ಯೆ| ಹೊಟ್ಟೆ ಸೀಳಿ ಅಂಗಾಂಗ ಹೊರತೆಗೆದು ವಿಕೃತಿ

ಸಮಗ್ರ ನ್ಯೂಸ್: ಹತ್ತು ವರ್ಷದ ಬಾಲಕಿಯೋರ್ವಳನ್ನು ಭೀಕರ ಸ್ವರೂಪದಲ್ಲಿ ಹತ್ಯೆಗೈಯಲಾಗಿದೆ. ಈಕೆಯ ಹತ್ಯೆಗೆ ತಂದೆಯ ಮೇಲಿನ ಹಗೆತನವೇ ಕಾರಣವೆಂದು ಹೇಳಲಾಗಿದೆ. ಉತ್ತರ ಪ್ರದೇಶದ ಪೀಲೀಭೀತ್​​ನಲ್ಲಿ 10 ವರ್ಷದ ಬಾಲಕಿಯನ್ನು ಅತ್ಯಂತ ಭೀಕರ ಸ್ವರೂಪದಲ್ಲಿ ಹತ್ಯೆಗೈಯಲ್ಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆಯ ಮೃತದೇಹ ಮನೆ ಸಮೀಪದ ಗೋಧಿ ಹೊಲದಲ್ಲಿ ಪತ್ತೆಯಾಗಿದೆ. ಆದರೆ ಆಕೆಯ ಮೃತದೇಹ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಬಾಲಕಿಯ ಹೊಟ್ಟೆಯನ್ನು ಕತ್ತರಿಸಲಾಗಿದ್ದು, ಹೊಟ್ಟೆ ತೆರೆದ ಸ್ಥಿತಿಯಲ್ಲಿದೆ. ಒಳಗಿನ ಅಂಗಾಂಗಳನ್ನೆಲ್ಲ ಕಿತ್ತು, ಅಲ್ಲೇ ಎಸೆಯಲಾಗಿದೆ. ಅತ್ಯಂತ ಕ್ರೂರವಾಗಿ,

10ವರ್ಷದ ಬಾಲಕಿಯ ಬರ್ಬರ ಹತ್ಯೆ| ಹೊಟ್ಟೆ ಸೀಳಿ ಅಂಗಾಂಗ ಹೊರತೆಗೆದು ವಿಕೃತಿ Read More »

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯಲ್ಲಿ ಹುಲಿ, ಚಿರತೆಗಳ ಆರ್ಭಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹೊಲದಲ್ಲಿ ಹಸು ಕಟ್ಟಿರುವ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ವಾರದಿಂದ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದರು ಹುಲಿ ಸಿಗದೆ ಜನರಲ್ಲಿ ಆತಂಕ ಮೂಡಿಸಿದೆ ಹೈರಿಗೆ ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿರುವ ಹುಲಿ ಸುತ್ತ ಮುತ್ತಲಿನ ಗ್ರಾಮದ ಜನರಲ್ಲಿ ಬಯ ಹುಟ್ಟಿಸಿದೆ. ರೈತರು

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ Read More »

ಬೆಳ್ತಂಗಡಿ : ಮೋಜಿಗಾಗಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ‌ ಸಾವು| ಜೀವ ಕಸಿದ ವೀಕೆಂಡ್ ರೈಡ್

ಸಮಗ್ರ ನ್ಯೂಸ್: ಮೋಜಿಗಾಗಿ ಸ್ನೇಹಿತರ ಜತೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಮಾ೯ಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.3) ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಮೃತಪಟ್ಟ ದುರ್ದೈವಿ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಸಮೀಪ ಮಲವಂತಿಗೆ ಬಳಿ ಇರುವ ಪ್ರಸಿದ್ದ ಪ್ರವಾಸಿ ತಾಣ ಎಮಾ೯ಯಿ ಫಾಲ್ಸ್ ನಲ್ಲಿ ಈ ದುರ್ಘಟನೆ ನಡೆದಿದೆ. ಶನಿವಾರದ ಕಾರಣ ಇಂದು

ಬೆಳ್ತಂಗಡಿ : ಮೋಜಿಗಾಗಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ‌ ಸಾವು| ಜೀವ ಕಸಿದ ವೀಕೆಂಡ್ ರೈಡ್ Read More »

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ನೀರು ಕೇಳುವ ನೆಪದಲ್ಲಿ ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಕಕ್ಕಬೆ ಕುಂಜಿಲ ನಿವಾಸಿ, ಪ್ರಸ್ತುತ ಕೇರಳದ ಕಾಸರಗೋಡು, ಹೊಸದುರ್ಗಾ ತಾಲೂಕು ಬದ್ರಿಯಾ ಮಂಜಿಲ್ ಪುಂಜವಿ ಕಾಂಞಗಾಡ್ ನಿವಾಸಿ ಸಲೀಂ ಪಿ.ಎ (34) ಬಂಧಿತ ಆರೋಪಿ. ನ.28 ರಂದು ಸುಳ್ಯ ತಾಲೂಕು ಜಾಲ್ಲೂರು, ವೈಲ್ಡ್ ಕೆಫೆ ಬಳಿ ಬೈತಡ್ಕ ನಿವಾಸಿ ಕಮಲ

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು Read More »

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!!

ಟೋಕಿಯೊ: ವಿದ್ಯಾರ್ಥಿನಿಗೆ ಗುಂಡು ಹಾರಿಸಿ ಅತ್ಯಾಚಾರವೆಸಗಿ ನಂತರ ಆಕೆಯ ಮೃತದೇಹವನ್ನು ತುಂಡುಗಳಾಗಿಸಿ ಹಲವು ದಿನಗಳವರೆಗೆ ಇಟ್ಟುಕೊಂಡು ಸೇವಿಸಿ ಜೈಲು ಶಿಕ್ಷೆಯಿಲ್ಲದೇ ಆರಾಮಾಗಿ ಓಡಾಡಿಕೊಂಡಿದ್ದ ಜಪಾನ್‌ ವ್ಯಕ್ತಿ ನಿಧನ ಹೊಂದಿದ್ದಾನೆ. ʼಕೋಬ್ ಕ್ಯಾನಿಬಾಲ್ʼ (ನರಭಕ್ಷಕ) ಎಂದೇ ಕುಖ್ಯಾತಿಯಾಗಿದ್ದ ಜಪಾನಿನ ಕೊಲೆಗಾರ ಇಸ್ಸೆ ಸಗಾವಾ (Issei Sagawa), ಕೊಲೆ ಮಾಡಿದ್ದರೂ ಜೈಲು ಶಿಕ್ಷೆ ಅನುಭವಿಸದೇ ಸ್ವತಂತ್ರನಾಗಿ ಇದ್ದ. ಇದೀಗ ತನ್ನ 73ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾನೆ. ಸಗಾವಾ, ನ್ಯುಮೋನಿಯಾದಿಂದ ಸಾವಿಗೀಡಾಗಿದ್ದು, ಕುಟುಂಬದ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 1981 ರಲ್ಲಿ ಸಗಾವಾ ಪ್ಯಾರಿಸ್‌ನಲ್ಲಿ

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!! Read More »

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ

ಸಮಗ್ರ ನ್ಯೂಸ್: ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ಮೂಲದ ನಿಂಗನ ಗೌಡ, ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಕಲಂ

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ Read More »

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಜೈಲೇ ಗತಿಯಾಗಿದೆ. 2ನೇ ಪೋಕ್ಸೋ ಪ್ರಕರಣದಲ್ಲಿಯೂ ಮುರುಘಾ ಶರಣರಿಗೆ ಜಾಮೀನು ನಿರಾಕರಿಸಲಾಗಿದೆ. ಈಗಾಗಲೇ ಮೊದಲ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿಯೂ ಮುರುಘಾಶ್ರೀಗಳಿಗೆ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ. ಅ.13ರಂದು ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳು ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ

ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ Read More »