ಕ್ರೈಂ

ಬಿ.ಸಿ‌ರೋಡು: ಲಾರಿ ರಿಕ್ಷಾ ಅಪಘಾತ: ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಲಾರಿ ರಿಕ್ಷಾ ಅಪಘಾತದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ‌ರೋಡು ಸಮೀಪದ ಮೊಡಂಕಾಪು‌ವಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ರಿಕ್ಷಾವನ್ನು ಅಶ್ರಫ್ ಎಂಬವರು ಚಲಾಯಿಸುತ್ತಿದ್ದು, ರಿಕ್ಷಾ ಪ್ರಯಾಣಿಕರನ್ನು ಕೈಕಂಬ ಕಡೆಯಿಂದ ಮೊಡಂಕಾಪು ಕಡೆಗೆ ಕರೆದೊಯ್ಯುತ್ತಿತ್ತು, ಈ ವೇಳೆ ಮೊಡಂಕಾಪು ಕಡೆಯಿಂದ ಬಂದ ಟಿಪ್ಪರ್ ಲಾರಿ, ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ‌ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು, ಪಕ್ಕದ ವಿದ್ಯುತ್ ಕಂಬಕ್ಕೆ […]

ಬಿ.ಸಿ‌ರೋಡು: ಲಾರಿ ರಿಕ್ಷಾ ಅಪಘಾತ: ಮಹಿಳೆ ಗಂಭೀರ Read More »

ಬೈಕ್ ನಲ್ಲಿ ಬಂದು ಬಾಲಕಿಗೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಬೈಕ್​ನಲ್ಲಿ ಬಂದ ಇಬ್ಬರು ಯುವಕರು 17ವರ್ಷದ ಬಾಲಕಿಯ ಮೇಲೆ ಆಯಸಿಡ್​ ಎರಚಿದ ಘಟನೆ ದೆಹಲಿಯ ದ್ವಾರಕ ಜಿಲ್ಲೆಯ ಉತ್ತಮ್​ನಗರದಲ್ಲಿ ಡಿ. ೧೪ರಂದು ನಡೆದಿದೆ. ಬಾಲಕಿ ತನ್ನ ತಂಗಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ದುಷ್ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದರು. ಬಾಲಕಿಯ ಎರಡೂ ಕಣ್ಣುಗಳಿಗೆ ಆ್ಯಸಿಡ್ ಬಿದ್ದಿದೆ. ಇಬ್ಬರ ಹೆಸರನ್ನು ಆಕೆ ಹೇಳಿದ್ದಾಳೆ. ಅವರಲ್ಲಿ ಓರ್ವ ಪೊಲೀಸರ

ಬೈಕ್ ನಲ್ಲಿ ಬಂದು ಬಾಲಕಿಗೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು Read More »

ಬೆಳ್ತಂಗಡಿ: ಸುಟ್ಟರೀತಿಯಲ್ಲಿ ಮಹಿಳೆಯ ಶವ ಕಾಡೊಳಗೆ ಪತ್ತೆ

ಸಮಗ್ರ ನ್ಯೂಸ್: ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ ಪ್ರಕರಣದಲ್ಲಿ ಶವದ ಹಲವು ಗುರುತುಗಳು ಪತ್ತೆಯಾಗಿದೆ. ಎರಡು ಕಾಲು ಉಂಗುರ, ಕೈಯಲ್ಲಿ ನಾಗರ ಹಾವಿನ ರೀತಿಯ ಉಂಗುರ, ಕೈ ಬಲೆಗಳು, ಸುಟ್ಟ ರೀತಿಯಲ್ಲಿ ಚೈನ್ ವಾಚ್, ಕುತ್ತಿಗೆಗೆ ಹಾಕುವ ಶಿವಲಿಂಗಧಾರಣೆ, ಬಟ್ಟೆಯ ಬಟನ್, ಸುಟ್ಟು ಉಳಿದ ಸ್ವಲ್ಪ ಬಟ್ಟೆಗಳು, ತಲೆಗೆ ಹಾಕುವ ಕ್ಲಿಪ್ ಕೂಡಾ ಪತ್ತೆಯಾಗಿದೆ. ಸುಮಾರು 30-40 ವರ್ಷದ ಮಹಿಳೆಯ ಮೃತದೇಹ ಇದಾಗಿದೆ ಎಂದು ಡಾಕ್ಟರ್ ಮಹಾಬಲ ಶೆಟ್ಟಿ ಅವರು ಅಂದಾಜಿಸಿದ್ದಾರೆ. ಘಟನೆ ನಡೆದ

ಬೆಳ್ತಂಗಡಿ: ಸುಟ್ಟರೀತಿಯಲ್ಲಿ ಮಹಿಳೆಯ ಶವ ಕಾಡೊಳಗೆ ಪತ್ತೆ Read More »

ವರದಕ್ಷಿಣೆ ಕಿರುಕುಳ; ನಟಿ ‘ಅಭಿನಯ’ ಗೆ ಎರಡು ವರ್ಷ ಜೈಲು!!

ಸಮಗ್ರ ನ್ಯೂಸ್: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ. ನಟಿ ಅಭಿನಯ ಕನ್ನಡ ಚಿತ್ರರಂಗದ ಖ್ಯಾತ ನಟಿ.ಇವರು ಕಿರುತೆರೆಯಲ್ಲೂ ಹೆಸರುವಾಸಿಯಾಗಿದ್ದು, ಹಲವು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ `ಅನುಭವ’ದಿಂದ ಚಿತ್ರರಂಗಕ್ಕೆ

ವರದಕ್ಷಿಣೆ ಕಿರುಕುಳ; ನಟಿ ‘ಅಭಿನಯ’ ಗೆ ಎರಡು ವರ್ಷ ಜೈಲು!! Read More »

ಚುನಾವಣೆ ಹಿನ್ನಲೆ|ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್

ಸಮಗ್ರ ನ್ಯೂಸ್: ಚುನಾವಣೆ ಹಿನ್ನಲೆ ಮೈಸೂರು ಖಾಕಿ ಪಡೆ ಅಲರ್ಟ್ ಆಗುತ್ತಿದ್ದು, ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಮುಂದಾಗಿದೆ. ಶಾಂತಿ ಕದಡುವ ಯತ್ನ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ ಮಾಡಿಸಿದ್ದು ಸುಮಾರು 50 ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನ ಹೆಬ್ಬಾಳ್ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗೆ ಆಸ್ಪದ ನೀಡಿದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ವೇಳೆ ನಗರದ ವಿವಿದ ಪೊಲೀಸ್

ಚುನಾವಣೆ ಹಿನ್ನಲೆ|ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ Read More »

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ Read More »

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು

ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು Read More »

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ

ಸಮಗ್ರ ನ್ಯೂಸ್: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ. ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ Read More »

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಿನಿಬಸ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ-ರೋಣ್ ರಸ್ತೆಯ ಗದ್ದಿಹಳ್ಳದ ಸಮೀಪ ಸಂಭವಿಸಿದೆ. ನೆರೆಗಲ್ಲ ಪಟ್ಟಣದ ನಿವಾಸಿಗಳಾದ ಸಂಗಮೇಶ(27) ಹಾಗು ದತ್ತಪ್ಪ(30) ಮೃತಪಟ್ಟ ದುರ್ದೈವಿಗಳು.ಅಪಘಾತದ ಸುದ್ದಿ ತಿಳಿಯುತ್ತಲ್ಲೇ ಗದಗ ಗ್ರಾಮೀಣ ಠಾಣೆಯ ಸಿಪಿಐ ಚಂದ್ರಶೇಖರ ಹರಿಹರ ಹಾಗು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ವರದಿ: ಪ್ರವೀಣಕುಮಾರ ಮಾಂತಾ

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು Read More »

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್

ಸಮಗ್ರ ನ್ಯೂಸ್: ವಕೀಲ ಕುಲದೀಪ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ರನ್ನು ಅಮಾನತುಗೊಳಿಸಿ ಇನ್‌ಸ್ಪೆಕ್ಟರ್ ಜನರಲ್ ಆದೇಶ ಹೊರಡಿಸಿದ್ದಾರೆ. ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅವರನ್ನು ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದ್ದರು. ಮನವಿ ಕುರಿತಂತೆ ಪರಿಶೀಲನೆ ನಡೆಸಿರುವ

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್ Read More »