ಬೆಳ್ತಂಗಡಿ : ಮೋಜಿಗಾಗಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು| ಜೀವ ಕಸಿದ ವೀಕೆಂಡ್ ರೈಡ್
ಸಮಗ್ರ ನ್ಯೂಸ್: ಮೋಜಿಗಾಗಿ ಸ್ನೇಹಿತರ ಜತೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಮಾ೯ಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.3) ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಮೃತಪಟ್ಟ ದುರ್ದೈವಿ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಸಮೀಪ ಮಲವಂತಿಗೆ ಬಳಿ ಇರುವ ಪ್ರಸಿದ್ದ ಪ್ರವಾಸಿ ತಾಣ ಎಮಾ೯ಯಿ ಫಾಲ್ಸ್ ನಲ್ಲಿ ಈ ದುರ್ಘಟನೆ ನಡೆದಿದೆ. ಶನಿವಾರದ ಕಾರಣ ಇಂದು […]










