ಕ್ರೈಂ

ವಿಕೆಟ್ ನಿಂದ ಇರಿದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ಇಬ್ಬರು ದಲಿತ ಯುವಕರ ಮೇಲೆ ವಿಕೆಟ್ ನಿಂ್ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ‌‌‌ ಮೈಸೂರು ಜಿಲ್ಲೆಯ ಕೆ ಆರ್ ನಗರ ಪಟ್ಟಣದ ಗಿರಿ ಮೆಡಿಕಲ್ ಬಳಿ ನಡೆದಿದೆ. ಕೆ‌.ಆರ್ ನಗರ ಪಟ್ಟಣದ ಆದಿಶಕ್ತಿ ಬಡಾವಣೆಯ 5ನೇ ವಾರ್ಡಿನ ನಿವಾಸಿಗಳಾದ ಭರತ್ ಕುಮಾರ್ ಹಾಗೂ ರಾಜೇಶ್ ಕುಮಾರ್ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರು ಪಟ್ಟಣದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾದ ವಿನೋದ್ ಹಾಗೂ ಇನ್ನಿತರ ಜೊತೆ ಮೂರು ದಿನಗಳ ಹಿಂದೆ ಜಗಳವಾಗಿ ರಾಜಿಯಾಗಿದ್ದರು. ಮಂಗಳವಾರ […]

ವಿಕೆಟ್ ನಿಂದ ಇರಿದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು Read More »

ಪಿಎಸ್ಐ ಜೊತೆ ಚಕ್ಕಂದವಾಡುತ್ತಿದ್ದಾಗ ಸಿಕ್ಕಿಬಿದ್ದ ವಿವಾಹಿತೆ| ಇಬ್ಬರಿಗೂ ಮದುವೆ ಮಾಡಿಸಿದ ಕುಟುಂಬಸ್ಥರು

ಸಮಗ್ರ ನ್ಯೂಸ್: ಅಬಕಾರಿ ಪೊಲೀಸ್​ ಅಧಿಕಾರಿ ಮತ್ತು ಈತನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಇಬ್ಬರೂ ಒಟ್ಟಿಗೆ ಸಿಕ್ಕಿ ಬಿದ್ದಿದ್ದು, ಅಲ್ಲಿಯೇ ಇಬ್ಬರಿಗೂ ಮದುವೆ ಮಾಡಿಸಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ನಡೆದಿದೆ. ಪೊಲೀಸ್​ ಅಧಿಕಾರಿ ಮತ್ತು ಮಹಿಳೆ ಇಬ್ಬರೂ ವಿವಾಹಿತರಾಗಿದ್ದು, ಬಹಳ ದಿನಗಳಿಂದ ಇಬ್ಬರು ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಅಬಕಾರಿ ಇಲಾಖೆಯ ಎಎಸ್‌ಐ ಆಗಿರುವ ಸುಮಂತ್ ಕುಮಾರ್ ಶರ್ಮಾ ಅವರ ಕುಟುಂಬ ಗುವಾಹಟಿಯಲ್ಲಿ ವಾಸಿಸುತ್ತಿದೆ. ಇದರ ನಡುವೆ ಬೇಗುಸರಾಯ್‌ನ ಬನ್ಹರಾ ಗ್ರಾಮದ ಮಹಿಳೆಯನ್ನು ಸುಮಂತ್ ಬಲೆಗೆ ಬೀಳಿಸಿಕೊಂಡಿದ್ದರು.

ಪಿಎಸ್ಐ ಜೊತೆ ಚಕ್ಕಂದವಾಡುತ್ತಿದ್ದಾಗ ಸಿಕ್ಕಿಬಿದ್ದ ವಿವಾಹಿತೆ| ಇಬ್ಬರಿಗೂ ಮದುವೆ ಮಾಡಿಸಿದ ಕುಟುಂಬಸ್ಥರು Read More »

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್

ಸಮಗ್ರ ನ್ಯೂಸ್ : ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಬಂದು ಬಂಧಿಸಿಕೊಂಡು ಹೋದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬಂಧಿದಂತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರಂ ಜಿಲ್ಲೆಯ ವೆಂಜಾರಂಮೂಡ್ ನಿಂದ

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್ Read More »

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 , ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 35 ವಯಸ್ಸಿನ ಮಹಿಳೆಯಾಗಿದ್ದು, ವೋಡಾಫೋನ್ ಸಿಂಬಲ್ ಇರುವ ಕೆಂಪು ಗುಲಾಬಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಬುದು ಬಣ್ಣದ ಶಾಟ್ಸ್ ಧರಿಸಿದ್ದು, ಬಲ ಮುಂಗೈ ನಲ್ಲಿ ಒಂದು ಟ್ಯಾಟೂ ಮಾರ್ಕ್, ಬಲ ಕೈ ನಲ್ಲಿ ಸ್ಟೀಲ್ ಬ್ರಾಸ್ ಲೈಟ್, ಎಡ ಕೈ ನಲ್ಲಿ ದಾರ, ತಾಳಿ, ಕಾಲ್ ಚೈನು,

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ Read More »

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಘಟನೆಯಿಂದ ‌ಬಿಸಿಲನಾಡಿನ‌ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ. ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ದಾಳನ್ನು ಅಫ್ತಾಬ್‌ ಬರ್ಬರವಾಗಿ ಹತ್ಯೆ ನಡೆದಿರುವ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದ ಜಬಲ್ಪುರದ ಮೂಲದ ಎಂದು ಹೇಳಲಾದ ವ್ಯಕ್ತಿಯೊಬ್ಬ ಮಹಿಳೆ ತನಗೆ ಮೋಸ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯೊಬ್ಬಳನ್ನು ಕತ್ತು ಸೀಳಿ ಕೊಂದಿದ್ದಾನೆ. ಹತ್ಯೆ ನಡೆದು ಹಲವು ದಿನಗಳು ಕಳೆದಿವೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಬಲ್‌ಪುರ ಮೂಲದ ಮೇಖ್ಲಾ ರೆಸಾರ್ಟ್‌ನಲ್ಲಿ 25 ವರ್ಷದ ಶಿಲ್ಪಾ ಝಾರಿಯಾಳನ್ನು ಕೊಂದು, ಆಕೆ ಸಾಯುವ ಮುನ್ನವೇ ರಕ್ತಸಿಕ್ತ ದೇಹದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ Read More »

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ!

ಸಮಗ್ರ ನ್ಯೂಸ್: ಭೂಮಿಯ ಖಾತೆಯಲ್ಲಿ ತಪ್ಪಾಗಿರುವ ಹೆಸರು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಮತ್ತು ಏಜೆಂಟ್ ಲೋಕಾಯುಕ್ತ ಬಲೆಗೆ ಸೆರೆಸಿಕ್ಕಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದ ಆರೋಪಿಗಳು. ಸದ್ಯ ಆರೋಪಿಗಳ ವಿರುದ್ಧ ಎಐಆರ್ ದಾಖಲಿಸಿ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ! Read More »

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು

ಸಮಗ್ರ‌ ನ್ಯೂಸ್: ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ‌ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ‌ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಶವಗಳನ್ನು ನೀರಿನಿಂದ

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು Read More »

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು

ಸಮಗ್ರ ನ್ಯೂಸ್: ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ನ.15ರ ಸಂಜೆ ಮಾಣಿ ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ಘಟನೆ ನಡೆದಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಈ ಪೈಕಿ ಕೆಲವರನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು Read More »

ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸೇರಿ, ೧೦ ಮಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುವ ಬಸ್ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಬಸ್ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಗಾಯಗೊಂಡ ಮೂರು ಮಂದಿ

ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ Read More »