ಕ್ರೈಂ

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30) ಹಲ್ಲೆಗೊಳಗಾದ ಆಟೋ ಚಾಲಕ. ಶಾಕೀರ್ ಕಬಡ್ಡಿ ಮ್ಯಾಚ್ ಮುಗಿಸಿಕೊಂಡು ಮನೆಗೆ ಆಟೋದಲ್ಲಿ ಹಿಂತಿರುಗುತ್ತಿದ್ದ. ಈ ವೇಳೆ ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ಆಟೋವನ್ನು ತಡೆದು ನಿಲ್ಲಿಸಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು, […]

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ Read More »

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು

ಸಮಗ್ರ ನ್ಯೂಸ್: ಸುಳ್ಯದ ಚೊಕ್ಕಾಡಿಯಲ್ಲಿ ನ.5 ರಂದು ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಈ ರೀತಿಯ ಯಾವುದೆ ಪ್ರಕರಣ ನಡೆದಿಲ್ಲ ಎಂದ ಭಜರಂಗದಳದವರುಕಾನತ್ತೂರು ದೈವಸ್ಥಾನಕ್ಕೆ ಬರಲಿ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು ಹಾಕಿದ್ದಾರೆ. ನ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಪೂಜೆ ಕಾರ್ಯಕ್ರಮದ ವಠಾರದಲ್ಲಿ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ನೊಂದ ಬಾಲಕಿ ನಮ್ಮ ಸಂಘಟನೆಗೆ ದೂರು ನೀಡಿದ್ದಾರೆ.‌ ಆದರೆ

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು Read More »

ಕೆಎಸ್ಆರ್ ಟಿಸಿ‌ ನಿರ್ವಾಹಕನ ಜಾಣ್ಮೆಗೆ ಬಸ್ ದರೋಡೆಕೋರರು ಅಂದರ್| ಕಂಡಕ್ಟರ್ ಗೆ ಭಲೇ..ಭೇಷ್ ಎಂದ ಸಾರಿಗೆ ಅಧಿಕಾರಿಗಳು

ಸಮಗ್ರ ನ್ಯೂಸ್: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ. ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿದ ವೇಳೆ ಬಸ್ ನಿರ್ವಾಹಕರು ಮುಖಚಹರೆ ಮೂಲಕವೇ ಗುರುತು ಹಿಡಿದು ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿರ್ವಾಹಕನ ಕಾರ್ಯಕ್ಷಮತೆಗೆ ಮೇಲಾಧಿಕಾರಿಗಳು ಮೆಚ್ಚುಗೆ ವ್ಯಕ್ತವಾಗಿದೆ. ನಿರ್ವಾಹಕ ಅಶೋಕ್ ಜಾದವ್ ಅವರೇ ಕಳ್ಳರನ್ನು ಪೊಲೀಸರಿಗೊಪ್ಪಿಸಿ ವೃತ್ತಿಪರತೆ ಮೆರೆದವರು. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ ಮಧ್ಯೆ ಇಳಿದು ಹೋದ

ಕೆಎಸ್ಆರ್ ಟಿಸಿ‌ ನಿರ್ವಾಹಕನ ಜಾಣ್ಮೆಗೆ ಬಸ್ ದರೋಡೆಕೋರರು ಅಂದರ್| ಕಂಡಕ್ಟರ್ ಗೆ ಭಲೇ..ಭೇಷ್ ಎಂದ ಸಾರಿಗೆ ಅಧಿಕಾರಿಗಳು Read More »

ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯತಮೆಯ ಭೀಕರ ಕೊಲೆ| ‘ದೇಹ 35 ತುಂಡು’, 18 ದಿನ ಫ್ರಿಡ್ಜ್‌ನಲ್ಲಿ!

ದೆಹಲಿ: ಲಿವಿಂಗ್ ಟುಗೆದರ್ ನಲ್ಲಿ ಜೊತೆಯಾಗಿದ್ದ ಯುವತಿಯನ್ನು ಆಕೆಯ ಪ್ರಿಯತಮನೇ ಹತ್ಯೆ ಮಾಡಿ , ಶವವನ್ನು 35 ಭಾಗಗಳಾಗಿ ತುಂಡರಿಸಿ ದೆಹಲಿಯಾದ್ಯಂತ ಎಸೆದ ಭೀಕರ ಪ್ರಕರಣವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. 26 ವರ್ಷದ ಯುವತಿ ಶ್ರದ್ಧಾ, ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು ಈ ವೇಳೆ ಅಫ್ತಾಬ್ ಅಮೀನ್ ಪೂನಾವಾಲಾ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಳು. ಆದರೆ ಯುವತಿಯ ಕುಟುಂಬವು ಈ ಸಂಬಂಧವನ್ನು ಒಪ್ಪದ ಹಿನ್ನಲೆ, ಈ ಜೋಡಿ ಮುಂಬೈ ತೊರೆದು

ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯತಮೆಯ ಭೀಕರ ಕೊಲೆ| ‘ದೇಹ 35 ತುಂಡು’, 18 ದಿನ ಫ್ರಿಡ್ಜ್‌ನಲ್ಲಿ! Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ಐಎ) ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಸಂಚು ರೂಪಿಸಿ ಹತ್ಯೆ ಮಾಡಿದ ಪಿಎಫ್ಐ! ಮಾಹಿತಿ ಬಹಿರಂಗ Read More »

ಮೋದಿ ಉದ್ಘಾಟಿಸಿದ್ದ ರೈಲುಹಳಿಯಲ್ಲಿ ಭಾರೀ ಸ್ಫೋಟ| ಸ್ವಲ್ಪದರಲ್ಲೇ‌ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರಿಂದ ಅಕ್ಟೋಬರ್‌ 31 ರಂದು ಉದ್ಘಾಟನೆಗೊಂಡ ಹೊಸ ರೈಲು ಹಳಿಯಲ್ಲಿ ಸ್ಫೋಟಗೊಂಡಿರುವ ಘಟನೆ ಉದಯಪುರ- ಅಹಮಾದಾಬಾದ್‌ ರೈಲು ಮಾರ್ಗದ ಕೆವಡಾ ಪ್ರದೇಶದಲ್ಲಿನ ಓಡಾ ಸೇತುವೆಯ ಬಳಿ ನಡೆದಿದೆ. ಕಳೆದ ತಡರಾತ್ರಿಯ ವೇಳೆಯಲ್ಲಿ ಸ್ಫೋಟದ ಸದ್ದೊಂದು ಕೇಳಿಬಂದಿತ್ತು. ಅದರ ಸದ್ದಿನಿಂದಾಗಿ ಜನರಲ್ಲಿ ಕೋಲಾಹಲ ಉಂಟಾಗಿತ್ತು. ಮಾಹಿತಿಗಳ ಪ್ರಕಾರ ಓಡಾ ಸೇತುವೆಯಿಂದ ಸ್ಫೋಟದ ಶಬ್ಧ ಕೇಳಿ ಬಂದಿದ್ದು ,ಬಳಿಕ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಹೊಸ ಹಳಿ ಹಾಳಾಗಿರುವುದು ಕಂಡುಬಂದಿದೆ. ತಕ್ಷಣವೇ ಸ್ಥಳೀಯರು ರೈಲ್ವೆ

ಮೋದಿ ಉದ್ಘಾಟಿಸಿದ್ದ ರೈಲುಹಳಿಯಲ್ಲಿ ಭಾರೀ ಸ್ಫೋಟ| ಸ್ವಲ್ಪದರಲ್ಲೇ‌ ತಪ್ಪಿದ ಅನಾಹುತ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ಬೆಳ್ಳಾರೆ ನಿವಾಸಿ, ಅಡಿಕೆ ವ್ಯಾಪಾರಸ್ಥ ಮುಹಮ್ಮದ್ ಶಹೀದ್ (36) ಎಂದು ಗುರುತಿಸಲಾಗಿದೆ. ಇದರೊಂದಿಗೆ ಎನ್ ಐ ಎ ವಿಚಾರಣೆಗೆ ಒಳಪಡಿಸಲು ಬಂಧಿಸಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈಗಾಗಲೇ ಹಲವು ಕಡೆ ದಾಳಿ ಮಾಡಿರುವ ಎನ್ಐಎ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ Read More »

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು

ಸಮಗ್ರ ನ್ಯೂಸ್: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್‌ ಇಂಟಲಿಜೆನ್ಸ್‌ ಯುನಿಟ್‌ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್‌ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »

ಚಿಕ್ಕಮಗಳೂರು: ಹೊತ್ತಿ ಉರಿದ ರೇಡಿಯೇಟರ್ ಸರ್ವಿಸ್ ಅಂಗಡಿ

ಸಮಗ್ರ ನ್ಯೂಸ್: ಬೆಂಕಿ ತಗುಲಿ ರೇಡಿಯೇಟರ್ ಸರ್ವಿಸ್ ಅಂಗಡಿಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ನಡೆದಿದೆ. ಇದು ಲುಕ್ಮನ್ ಎಂಬುವರಿಗೆ ಸೇರಿದ ಅಂಗಡಿಯಾಗಿದೆ. ಇವರು ರೇಡಿಯೇಟರ್ ಸರ್ವಿಸ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಚಿಕ್ಕಮಗಳೂರು: ಹೊತ್ತಿ ಉರಿದ ರೇಡಿಯೇಟರ್ ಸರ್ವಿಸ್ ಅಂಗಡಿ Read More »

ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಸಾವನ್ನಪ್ಪಿದ ಹಿಂದಿ ಕಿರುತೆರೆ ನಟ ಸಿದ್ದಾರ್ಥ್

ಸಮಗ್ರ ನ್ಯೂಸ್: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ನಟ ಮತ್ತು ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಸಾವನ್ನಪ್ಪಿದ್ಧಾರೆ ಎಂದು ತಿಳಿದುಬಂದಿದೆ. ಅವರು ಪತ್ನಿ ಮತ್ತು ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಿದ್ಧಾಂತ್ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ನಿಂದ ಸಿದ್ಧಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.

ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಸಾವನ್ನಪ್ಪಿದ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ Read More »