ಕ್ರೈಂ

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗಾಜಿಯಾಬಾದ್‌ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್‌ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಕೌಶಂಬಿಯಲ್ಲಿರುವ ರಾಡಿಸನ್ ಬ್ಲೂ […]

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ Read More »

ಮಂಗಳೂರು: ಅಟೋರಿಕ್ಷಾದಲ್ಲಿ ನಿಗೂಢ ಸ್ಪೋಟ| ಡಿಜಿಪಿ ಪ್ರವೀಣ್ ಸೂದ್ ಮಾಹಿತಿ

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ನಿಗೂಢವಾಗಿ ಸ್ಪೋಟ ಸಂಭವಿಸಿದ್ದು, ಪೊಲೀಸರ ಬಳಿ ಪ್ರಯಾಣಿಕ ಗೊಂದಲದ ಹೇಳಿಕೆ ನೀಡುತ್ತಿದ್ದಾನೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದ ಪ್ರಯಾಣಿಕ ನಂತರ ಅಣ್ಣ ಬಾಬುರಾವ್ ಅವರಿಗೆ ಕರೆ ಮಾಡಿ ಎಂದು ನಂಬರ್ ನೀಡಿದ್ದಾನೆ. ಆ ನಂಬರ್ ಗೆ ಕರೆ ಮಾಡಿದಾಗ ಆತ

ಮಂಗಳೂರು: ಅಟೋರಿಕ್ಷಾದಲ್ಲಿ ನಿಗೂಢ ಸ್ಪೋಟ| ಡಿಜಿಪಿ ಪ್ರವೀಣ್ ಸೂದ್ ಮಾಹಿತಿ Read More »

ಬೆಳಗಾವಿ: ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮಕ್ಕಳ ಶವ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕವರು. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ನಿವಾಸಿ ತನುಜಾ ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ

ಬೆಳಗಾವಿ: ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮಕ್ಕಳ ಶವ ಪತ್ತೆ Read More »

ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಸಾವು|ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಇದಕ್ಕೆ ಕಾರಣ: ಸ್ಥಳೀಯರು

ಸಮಗ್ರ ನ್ಯೂಸ್ : ಕಾಡಾನೆ ದಾಳಿಗೆ ಮಹಿಳೆ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ. ಶೋಭಾ (45) ಮೃತ ದುರ್ದೈವಿ. ಇವರು ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಕಾಡಾನೆ ದಾಳಿ ನಡೆಸಿದ್ದು ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ. ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ

ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಸಾವು|ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಇದಕ್ಕೆ ಕಾರಣ: ಸ್ಥಳೀಯರು Read More »

ವೋಟರ್ ಐಡಿ ಹಗರಣ; ಪ್ರಮುಖ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ. ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕೆಂಪೇಗೌಡನನ್ನು ಬಂಧಿಸಲಾಗಿದೆ. ತುಮಕೂರಿನ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಂಪೇಗೌಡನನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ. ಅಕ್ರಮವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿದ್ದ ಕಾರಣ

ವೋಟರ್ ಐಡಿ ಹಗರಣ; ಪ್ರಮುಖ ಆರೋಪಿ ಅರೆಸ್ಟ್ Read More »

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ

ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಲಿದ್ದಾರೆ. ಆಟೋದಲ್ಲಿ ಕುಕ್ಕರ್ ಕಂಡು ಬಂದಿದೆ. ತನಿಖೆ ನಂತರ ನಿಗೂಢ ಸ್ಪೋಟದ ಹಿಂದಿನ ರಹಸ್ಯವೇನೆಂಬುದು ಗೊತ್ತಾಗಲಿದೆ. ಘಟನೆಯ

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ Read More »

ಹೃದಯಾಘಾತ; ನಟಿ ತಬಸ್ಸುಮ್ ನಿಧನ

ಸಮಗ್ರ ನ್ಯೂಸ್: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು. ‘ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ’ ಎಂದು

ಹೃದಯಾಘಾತ; ನಟಿ ತಬಸ್ಸುಮ್ ನಿಧನ Read More »

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕ ನೊಬ್ಬ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ ನಲ್ಲಿ ತನ್ನ ಗುಪ್ತಾಂಗವನ್ನು ಸ್ಪರ್ಶಿಸಿ ಸಾರ್ವಜನಿಕವಾಗಿ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಉಪ್ಪಿನಂಗಡಿ ಬಳಿ ನಡೆದಿದೆ. ಕಾಮುಕ ಯುವಕನನ್ನು ಪ್ರಯಾಣಿಕರು ಹಿಡಿದು ಇದೀಗ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ಯುವತಿ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಯುವಕ ನೆಲ್ಯಾಡಿಯಿಂದ ಕೆಎಸ್‌ಆರ್ ಟಿಸಿ ಬಸ್ ಹತ್ತಿದ್ದು, ದಾರಿಯುದ್ಧಕ್ಕೂ ತನ್ನ ಗುಪ್ತಾಂಗವನ್ನು ಯುವತಿಗೆ ಮುಟ್ಟಿಸುತ್ತಿದ್ದ ಎಂದು

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು Read More »

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ

ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ. ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ Read More »