ಕ್ರೈಂ

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!!

ಸಮಗ್ರ ನ್ಯೂಸ್: ಅಪ್ರಾಪ್ತ ಶಾಲಾ ಬಾಲಕನ ಮೇಲೆ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಬುರ್ಖಾಧಾರಿ ಮಹಿಳೆ ಹಾಗೂ ಯುವಕನೋರ್ವ ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವುದೇಕೆ ಎನ್ನುವುದು ಬಯಲಾಗಿಲ್ಲ. ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸದಿದ್ದಲ್ಲಿ ನೈತಿಕ ಪೊಲೀಸ್ ಗಿರಿ ನಿಯಂತ್ರಿಸುವುದು ಕಷ್ಟ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರು […]

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!! Read More »

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ Read More »

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ

ಸಮಗ್ರ ನ್ಯೂಸ್ : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ Read More »

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ

ಸುರತ್ಕಲ್: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್ ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರೆಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳದಲ್ಲಿ ನಡೆದಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಮತ್ತು ಹಾಗೂ ಎಸ್. ಐ. ಪುನೀತ್ ಗಾಂವ್ಕರ್ ನೇತೃತ್ವದ ಸುರತ್ಕಲ್ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎರಡು ಟ್ಯಾಂಕರ್, ಪಿಕ್ ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ Read More »

ಅರಣ್ಯ ಇಲಾಖೆಯ _E-Prahari ಸರ್ವೆಗೆ ಮತ್ತೊಬ್ಬ ಸಿಬ್ಬಂದಿ ಬಲಿ| ಭಾಗಮಂಡಲ ವಲಯದ ಅರಣ್ಯ ವೀಕ್ಷಕ ಕಾಡೊಳಗೆ ಆಯತಪ್ಪಿ ಬಿದ್ದು ಸಾವು!

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಭಾಗಮಂಡಲ ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪಾರೆಸ್ಟ್ ವಾಚರ್(ಅರಣ್ಯ ವೀಕ್ಷಕ) ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗಡಿಭಾಗದ ಮಾವಿನಕಟ್ಟೆ ನರುವೋಳು ಮೊಟ್ಟೆ ಬಳಿ ನಡೆದಿದೆ. ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ (58 ವರ್ಷ ) ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆ ಇ-ಪ್ರಹಾರಿ ತಂತ್ರಾಂಶದಲ್ಲಿ ದಾಖಲಿಸಲು ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ

ಅರಣ್ಯ ಇಲಾಖೆಯ _E-Prahari ಸರ್ವೆಗೆ ಮತ್ತೊಬ್ಬ ಸಿಬ್ಬಂದಿ ಬಲಿ| ಭಾಗಮಂಡಲ ವಲಯದ ಅರಣ್ಯ ವೀಕ್ಷಕ ಕಾಡೊಳಗೆ ಆಯತಪ್ಪಿ ಬಿದ್ದು ಸಾವು! Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾ ಗೊಳಿಸಿದೆ. ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ‌ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್ ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ‌ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ ಅರ್ಜಿಯನ್ನು ವಜಾ ಗೊಳಿಸುವಂತೆ ಮಳಲಿಪೇಟೆ ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಶಿಷ್ಯೆಯಲ್ಲಿ ವರಿಸಲು ಲಿಂಗ ಬದಲಿಸಿಕೊಂಡ ಶಿಕ್ಷಕಿ

ಸಮಗ್ರ ನ್ಯೂಸ್: ಶಿಷ್ಯೆಯನ್ನು ಪ್ರೀತಿಸಿದ್ದ ಶಿಕ್ಷಕಿ ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಸಿಕೊಂಡಿದ್ದಾರೆ. ರಾಜಸ್ಥಾನ ಭರತ್‌ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರಿಗೆ ತನ್ನ ವಿದ್ಯಾರ್ಥಿನಿ ಮೇಲೆ ಪ್ರೀತಿ ಉಂಟಾಗಿದ್ದು, ಆಕೆಯನ್ನು ಮದುವೆಯಾಗುವ ಸಲುವಾಗಿ ಎರಡುಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗಂಡಾಗಿ ಪರಿವರ್ತನೆಯಾಗಿದ್ದಾರೆ. ಆರವ್‌ ಕುಂತಲ್‌ ಎಂಬುವವರೇ ಲಿಂಗ ಬದಲಾವಣೆ ಮಾಡಿಕೊಂಡ ಶಿಕ್ಷಕಿ. 2019ರಲ್ಲಿ ಮೊದಲ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ ಇವರು, ಇತ್ತೀಚೆಗೆ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗಂಡಾಗಿ ಬದಲಾಗಿದ್ದಾರೆ. ಅನಂತರ ತನ್ನ ಶಿಷ್ಯಯನ್ನೇ ಲವ್‌ ಮಾಡಿ

ಶಿಷ್ಯೆಯಲ್ಲಿ ವರಿಸಲು ಲಿಂಗ ಬದಲಿಸಿಕೊಂಡ ಶಿಕ್ಷಕಿ Read More »

ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೋಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಪತಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸಂಗ ಮಾಡಿದವಳು ಬೀದಿ ಹೆಣವಾದಳು!!

ಸಮಗ್ರ ನ್ಯೂಸ್: ಮಹಿಳೆಗೆ ಮದುವೆಯಾಗಿ ಪತಿ ಮತ್ತು ಇಬ್ಬರು ಮಕ್ಕಳಿದ್ದರೂ ಪರಸಂಗದ ಸಹವಾಸ ಮಾಡಿ ಇದೀಗ ದುರಂತ ಅಂತ್ಯ ಕಂಡಿದ್ದಾಳೆ. ಇದರಿಂದ ಇಬ್ಬರು ಮಕ್ಕಳು ತಾಯಿ ಇಲ್ಲದ ತಬ್ಬಲಿಯಾಗಿವೆ. ಆಶಾ ಎನ್ನುವ ಮಹಿಳೆ ಕಳೆದ 12 ವರ್ಷದ ಹಿಂದೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಗ್ರಾಮದ ನಿವಾಸಿಯನ್ನು ಮದುವೆಯಾಗಿದ್ದಳು. ಇವರಿಗೆ ಎರಡು ಮುದ್ದಾದ ಗಂಡು ಮಕ್ಕಳು ಕೂಡ ಇದ್ದರೂ ಸಹ ಪರಸಂಗ ಸಹವಾಸ ಮಾಡಿ ಈಗ ಹೆಣವಾಗಿದ್ದಾಳೆ. ಆಶಾ ಮದುವೆಗೂ ಮುನ್ನವೇ ಕುರುಬರಹಳ್ಳಿ ಗ್ರಾಮದ ವೆಂಕಟೇಶ್

ಪತಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸಂಗ ಮಾಡಿದವಳು ಬೀದಿ ಹೆಣವಾದಳು!! Read More »

ಉಪ್ಪಿನಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ‌ ಓರ್ವ ಸಾವು; ಮತ್ತಿಬ್ಬರು ಗಂಭೀರ

ಸಮಗ್ರ ನ್ಯೂಸ್ : ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ತಾಗಿ ಒಬ್ಬ ಸಾವಿಗೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಮೂವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಬೆನ್ನಲ್ಲೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಓರ್ವ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಇನ್ನಿಬ್ಬರು ಕೂಡ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ‌ ಓರ್ವ ಸಾವು; ಮತ್ತಿಬ್ಬರು ಗಂಭೀರ Read More »