ಕ್ರೈಂ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ […]

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ Read More »

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್​ ಆಡಲು ಆಸ್ಟ್ರೇಲಿಯಾದಲ್ಲಿರುವಾಗ ಮಹಿಳೆಯೊಬ್ಬಳ ಮೇಲೆ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅನೇಕ ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡುವ ಯತ್ನವು ನಡೆದಿದ್ದು, ಮೆದುಳಿನಲ್ಲಿ ಗಾಯವಾಗಿದೆಯೇ ಎಂಬುದನ್ನು ತಿಳಿಯಲು ಸಂತ್ರಸ್ತೆಗೆ ಸ್ಕ್ಯಾನ್​ ಮಾಡಿಸುವ ಅವಶ್ಯಕತೆ ಇದೆ ಎಂದು ಸಿಡ್ನಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ. ನವೆಂಬರ್ 2ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ತನಿಖೆಯ ನಂತರ 31 ವರ್ಷದ

ಖ್ಯಾತ ಕ್ರಿಕೆಟಿಗನಿಂದ ಲೈಂಗಿಕ ದೌರ್ಜನ್ಯ| ಕಾಂಡೋಮ್ ಧರಿಸಿ ಸೆಕ್ಸ್ ಮಾಡಲು ಹೇಳಿದರೂ ಒಪ್ತಿರಲಿಲ್ಲ – ಸಂತ್ರಸ್ತೆ Read More »

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಿ ದೇವಾಲಯದ ಹತ್ತಿರ ಬಾವಿಯಲ್ಲಿ ಬಾಳೇಶ ಕಾಂಬಳೆ ಎಂಬ ಬಾಲಕನು ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರಿನಲ್ಲಿ ಮುಳುಗಿದ ಬಾಲಕನ ಶವವನ್ನು ಮೇಲೆಕ್ಕೆ ಎತ್ತಲಾಗಿದೆ. ಬಾಲಕನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು Read More »

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಚೆನ್ನೈ, ಮಧುರೈ ಸೇರಿದಂತೆ 45 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಎನ್‌ಐಎ ಅಧಿಕಾರಿಗಳು ಕೊಯಮತ್ತೂರಿನಲ್ಲಿ 20, ಚೆನ್ನೈಯಲ್ಲಿ 12ಕ್ಕೂ ಹೆಚ್ಚು ಮತ್ತು ಮುಧುರೈ, ರಾಮನಾಥಪುರಂ ಸೇರಿದಂತೆ ರಾಜ್ಯದ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಬಂಧಿಸಿರುವ ಆರು ಆರೋಪಿಗಳಿಗೆ ಸಂಬಂಧಪಟ್ಟ ಸ್ಥಳ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಷೇಧಿತ ಸಂಘಟನೆಯ ಸದಸ್ಯರನ್ನು ತನಿಖೆ

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ
Read More »

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೀರಂಗೂರು ಗ್ರಾಮದಲ್ಲಿ ನಡೆದಿದೆ. ಕೆ ಬಿ ರಾಮು(38) ಮೃತ ರೈತ, ಇವರು ವ್ಯವಸಾಯಕ್ಕೆ ಕೈ ಸಾಲ ಹಾಗೂ ತನ್ನ ಹೆಂಡತಿಯ ಹೆಸರಿನಲ್ಲಿ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದಿದ್ದರು. ಅದನ್ನು ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!!

ಸಮಗ್ರ ನ್ಯೂಸ್: ಅಪ್ರಾಪ್ತ ಶಾಲಾ ಬಾಲಕನ ಮೇಲೆ ಬಸ್ ನಿಲ್ದಾಣದಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಬುರ್ಖಾಧಾರಿ ಮಹಿಳೆ ಹಾಗೂ ಯುವಕನೋರ್ವ ಮನಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡುತ್ತಿರುವುದೇಕೆ ಎನ್ನುವುದು ಬಯಲಾಗಿಲ್ಲ. ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸದಿದ್ದಲ್ಲಿ ನೈತಿಕ ಪೊಲೀಸ್ ಗಿರಿ ನಿಯಂತ್ರಿಸುವುದು ಕಷ್ಟ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರು

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ! ಶಾಲಾ ವಿದ್ಯಾರ್ಥಿಗೆ ಥಳಿಸಿದ ಬುರ್ಖಾಧಾರಿ ಮಹಿಳೆ ಮತ್ತು ಯುವಕ!! Read More »

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ Read More »

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ

ಸಮಗ್ರ ನ್ಯೂಸ್ : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ Read More »

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ

ಸುರತ್ಕಲ್: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್ ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರೆಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳದಲ್ಲಿ ನಡೆದಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಮತ್ತು ಹಾಗೂ ಎಸ್. ಐ. ಪುನೀತ್ ಗಾಂವ್ಕರ್ ನೇತೃತ್ವದ ಸುರತ್ಕಲ್ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎರಡು ಟ್ಯಾಂಕರ್, ಪಿಕ್ ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ Read More »