ಕ್ರೈಂ

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು

ಸಮಗ್ರ ನ್ಯೂಸ್: ಎರಡನೇ ಬಾರಿ ಕ್ಷಮಾದಾನ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ […]

ವಿಕೃತಕಾಮಿ ಉಮೇಶ್ ರೆಡ್ಡಿಗೆ ಬಿಗ್ ರಿಲೀಫ್| ಸುಪ್ರೀಂ ಕೋರ್ಟ್ ನಿಂದ ಗಲ್ಲು ಶಿಕ್ಷೆ ರದ್ದು Read More »

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ|

ಸಮಗ್ರ ನ್ಯೂಸ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಪ್ರಭಾವತಿ, ಗುಂಡಮ್ಮ, ಜಕ್ಕಮ್ಮ, ರಾಧಮ್ಮ, ರುಕ್ಮಿಣಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ 6 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ದುರ್ಮರಣ| Read More »

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ. ‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’ ಎಂದು ಅಪರಿಚಿತ ದುಷ್ಕರ್ಮಿಗಳು ಮುತಾಲಿಕ್ ಅವರಿಗೆ ನಿಂದಿಸಿ

“ನಿನ್ನನ್ನು ಕೊಚ್ಚಿ ನಾಯಿಗೆ ಹಾಕುತ್ತೇವೆ” | ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ದುಷ್ಕರ್ಮಿಗಳು Read More »

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ

ಸಮಗ್ರ ನ್ಯೂಸ್: ‘ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನ. 3ರಂದು ನಡೆದಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು

ಪಂಜುರ್ಲಿಯ ವೇಷ ಧರಿಸಿ ರೀಲ್ಸ್ ಮಾಡಿದ್ದ ಪ್ರಕರಣ| ಧರ್ಮಸ್ಥಳದಲ್ಲಿ ಕ್ಷಮಾಪಣೆ ಕೇಳಿದ ಶ್ವೇತಾರೆಡ್ಡಿ Read More »

ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!!

ಸಮಗ್ರ ನ್ಯೂಸ್: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬುಧವಾರ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು

ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!! Read More »

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು

ಸಮಗ್ರನ್ಯೂಸ್: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೆಕ್ಷನ್ 9B ಅಡಿ ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 9ಬಿ ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಇಮ್ರಾನ್ ಖಾನ್ ಗುರುವಾರ ವಜೀರಾಬಾದ್‌ ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿದಂತೆ 6 ಜನರು ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಇಮ್ರಾನ್

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು Read More »

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ. ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ ಶೇಖರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದರು. ಈ ಬಗ್ಗೆ ಎಲ್ಲೆಡೆ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿತ್ತು. ತುಂಗಾ ಕಾಲುವೆಗೆ ಕಾರು ಬಿದ್ದ ಬಗ್ಗೆ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಕಾಲುವೆಯಲ್ಲಿ ಶೋಧ

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ Read More »

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ – ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಬೇಡರಹಟ್ಟಿ ಗ್ರಾಮದ ಸಿದ್ದಪ್ಪಾ ವಾಲಿ ಎಂದು ತಿಳಿದು ಬಂದಿದೆ. ಇವರು ಬೇಡರಹಟ್ಟಿ ಗ್ರಾಮದಿಂದ ಅಥಣಿಗೆ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು Read More »

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಪಿಡಿಒ ಒಬ್ಬರು ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಸುಳ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತಕ್ಕೆ ಬಲಿಯಾದವರು. ಇವರಿಗೆ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು‌ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು. ಮೃತರು

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು Read More »