ಕ್ರೈಂ

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ

ಸಮಗ್ರ ನ್ಯೂಸ್: ಕಳೆದ ಹತ್ತು ದಿನಗಳ ಅವಧಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು 1.46 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಂಡು ಹಿಡಿದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಟೋಬರ್ 22 ರಿಂದ 31 ರವರೆಗೆ ಆರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ್ದಾರೆ. ದುಬೈನಿಂದ ಬಂದ ಆರು ಪ್ರಯಾಣಿಕರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 2,870 ಗ್ರಾಂ ತೂಕದ ಚಿನ್ನ ದೊರೆತಿದೆ. ಇದರ ಮೌಲ್ಯ 1,46,87,410 ರೂ. ಎಂದು ಅಂದಾಜಿಸಲಾಗಿದೆ. ಪ್ರಯಾಣಿಕರು ಜೀನ್ಸ್ ಪ್ಯಾಂಟ್‌ನ ಸೊಂಟದ […]

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ Read More »

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ. ಘಟನೆ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರಕಾರವು ಎನ್ನೈಎಗೆ ವಹಿಸಲಾಗಿದ್ದು ಎನ್ ಐ ಎ ತನಿಖೆ ವಹಿಸಿಕೊಳ್ಳಲು ತಡ ಆದ ಕಾರಣದಿಂದ ಕೆಲ ಆರೋಪಿಗಳು ತುಂಬಾ

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

ಬೆಟ್ಟಕ್ಕೆ ತೆರಳಿದ ಯುವಕ ಚಿರತೆ ಬಾಯಿಗೆ ಬಲಿ

ಸಮಗ್ರ ನ್ಯೂಸ್: ತಿ.ನರಸೀಪುರ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಬಳಿ ಚಿರತೆ ದಾಳಿಗೆ ಯುವಕ ಬಲಿಯಾಗಿದ್ದಾನೆ. ಮಹಾರಾಜ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ (18) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು ಮಾರಮ್ಮ ದೇವಾಲಯಕ್ಕೆ ಸ್ನೇಹಿತರೊಂದಿಗೆ ಪೂಜೆಗೆಂದು ಹೋಗಿದ್ದಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದಾಗ ಪೊದೆಯಿಂದ ಜಿಗಿದು ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿತು. ಸ್ನೇಹಿತರು ಚಿರತೆಗೆ ಕಲ್ಲು ಹೊಡೆದು ಮಂಜುನಾಥ್‌ನನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಗ್ರಾಮಸ್ಥರು ಯುವಕನ

ಬೆಟ್ಟಕ್ಕೆ ತೆರಳಿದ ಯುವಕ ಚಿರತೆ ಬಾಯಿಗೆ ಬಲಿ Read More »

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ Read More »

ಪ್ರಿಯಕರನೊಂದಿಗೆ ಹಸೆಮಣೆ ಏರಿದ ಪತ್ನಿ| ನೇಣಿಗೆ ಕೊರಳೊಡ್ಡಿದ ಪತಿ

ಸಮಗ್ರ ನ್ಯೂಸ್: ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ. ಸುರೇಶ್ ಕುಮಾರ್(37) ಮೃತ ದುರ್ದೈವಿ. 7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ. ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು. ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು. ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ

ಪ್ರಿಯಕರನೊಂದಿಗೆ ಹಸೆಮಣೆ ಏರಿದ ಪತ್ನಿ| ನೇಣಿಗೆ ಕೊರಳೊಡ್ಡಿದ ಪತಿ Read More »

ಡಾ. ಡಿ ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಪ್ರಕರಣ| ಜೈಲು ಸೇರಿದ ಕೆ.ಸೋಮನಾಥ ನಾಯಕ್

ಸಮಗ್ರ ನ್ಯೂಸ್: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ದ ಅಪಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದ ತೀರ್ಪಿನಂತೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಸುಧೀರ್ಘ ಕಾನೂನು ಹೋರಾಟದ ಬಳಿಕ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂ ಆಗಿದೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿದ ಆರೋಪ ಮಾಡಿದ್ದರು. ಅಲ್ಲದೇ ಧರ್ಮಸ್ಥಳ ಮತ್ತು

ಡಾ. ಡಿ ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಪ್ರಕರಣ| ಜೈಲು ಸೇರಿದ ಕೆ.ಸೋಮನಾಥ ನಾಯಕ್ Read More »

ಕಾಸರಗೋಡು: ವಿದ್ಯುತ್ ಕಂಬ ಏರಿದ ಮಾನಸಿಕ ಅಸ್ವಸ್ಥ|ಅವಾಂತರಕ್ಕೆ ಸುಸ್ತಾದ ಲೈನ್ ಮ್ಯಾನ್ ಗಳು…..!!

ಸಮಗ್ರ ನ್ಯೂಸ್: ಮಾನಸಿಕ ಅಸ್ವಸ್ಥನೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಕೇಬಲ್ ಮೇಲೆ ನಡೆದಾಡಿದ ಘಟನೆ ಕಾಞಂಗಾಡು ಸಮೀಪದ ಮಾವುಂಗಲ್‌ನಲ್ಲಿ ಎಂಬಲ್ಲಿ ನಡೆದಿದೆ. ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡ ವ್ಯಕ್ತಿ ಶನಿವಾರ ಮಧ್ಯಾಹ್ನ ವಿದ್ಯುತ್ ಕಂಬ ಹತ್ತಲು ಪ್ರಾರಂಭಿಸಿದ್ದಾನೆ. ಈ ವೇಳೆ ನೋಡಿ ಸ್ಥಳೀಯರು ಕೂಡಲೇ ವಿದ್ಯುತ್ ಮಂಡಳಿಗೆ ತಿಳಿಸಿದ್ದಾರೆ, ಈ ಹಿನ್ನಲೆ ಆ ಲೈನ್ ನಿಂದ ಪವರ್ ತೆಗೆದಿದ್ದಾರೆ. ಮಾನಸಿಕ ಅಸ್ವಸ್ಥ ವಿದ್ಯುತ್ ಕಂಬ ಹತ್ತಿ ಬಳಿಕ ವಿದ್ಯುತ್‌ ಕೇಬಲ್‌ ಮೇಲೆ ನಡೆದುಕೊಂಡು ಸರ್ಕಸ್ ಮಾಡಿದ್ದಾನೆ. ಸ್ಥಳಕ್ಕ

ಕಾಸರಗೋಡು: ವಿದ್ಯುತ್ ಕಂಬ ಏರಿದ ಮಾನಸಿಕ ಅಸ್ವಸ್ಥ|ಅವಾಂತರಕ್ಕೆ ಸುಸ್ತಾದ ಲೈನ್ ಮ್ಯಾನ್ ಗಳು…..!! Read More »

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತಿ ಅವರ ಪತಿ ದೂರು ನೀಡಿದ್ದು ಅ.29 ಮದ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮರಳಿ ಮನೆಗೆ ಹೋಗಿ ಅವರ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ ಎಂಬವರ ಚಿಕಿತ್ಸೆಯ ಬಗ್ಗೆ ಕಾಣಿಯೂರು ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪತಿಯ ತಾಯಿ

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ನಾಪತ್ತೆ Read More »

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ| ನಟ, ನಿರ್ದೇಶಕ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಅಮ್ಮ ನಾಗಮ್ಮ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಕ, ನಟ ಸಯ್ಯದ್ ಅಶ್ರಫ್ (42) ಸೋಮವಾರ(ಅ.31) ರ ಮುಂಜಾನೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಹಲವು ಧಾರಾವಾಹಿಗಳಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ| ನಟ, ನಿರ್ದೇಶಕ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ Read More »

ಗುಜರಾತ್ ತೂಗು ಸೇತುವೆ ದುರಂತ| 150 ರ ಸನಿಹಕ್ಕೆ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಮಚು ನದಿಗೆ ಬ್ರಿಟಿಷರ ಕಾಲದ ಸೇತುವೆ ದುರಸ್ತಿಗೊಂಡ ವಾರಗಳಲ್ಲಿ ಕುಸಿದಿದ್ದು, ಮೃತರ ಸಂಖ್ಯೆ 137ಕ್ಕೆ ಏರಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಛತ್ ಪೂಜೆಗೆ ಸಂಬಂಧಿಸಿದ ಕೆಲವು ಆಚರಣೆಗಳನ್ನು ಮಾಡಲು ಜನರು ಸಾಮೂಹಿಕವಾಗಿ ಸೇರಿದ್ದರು. ಅಪಘಾತದ ಸಮಯದಲ್ಲಿ ಸುಮಾರು 500 ಜನರು ಸೇತುವೆಯ ಮೇಲೆ ಇದ್ದರು ಎಂದು ವರದಿಯಾಗಿದೆ. ಸೋಮವಾರ ಬೆಳಗಿನ ಜಾವದವರೆಗೆ 137 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತಪಟ್ಟವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು

ಗುಜರಾತ್ ತೂಗು ಸೇತುವೆ ದುರಂತ| 150 ರ ಸನಿಹಕ್ಕೆ ಸಾವಿನ ಸಂಖ್ಯೆ Read More »