ಅರಣ್ಯ ಇಲಾಖೆಯ _E-Prahari ಸರ್ವೆಗೆ ಮತ್ತೊಬ್ಬ ಸಿಬ್ಬಂದಿ ಬಲಿ| ಭಾಗಮಂಡಲ ವಲಯದ ಅರಣ್ಯ ವೀಕ್ಷಕ ಕಾಡೊಳಗೆ ಆಯತಪ್ಪಿ ಬಿದ್ದು ಸಾವು!
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಭಾಗಮಂಡಲ ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪಾರೆಸ್ಟ್ ವಾಚರ್(ಅರಣ್ಯ ವೀಕ್ಷಕ) ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗಡಿಭಾಗದ ಮಾವಿನಕಟ್ಟೆ ನರುವೋಳು ಮೊಟ್ಟೆ ಬಳಿ ನಡೆದಿದೆ. ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ (58 ವರ್ಷ ) ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆ ಇ-ಪ್ರಹಾರಿ ತಂತ್ರಾಂಶದಲ್ಲಿ ದಾಖಲಿಸಲು ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ […]










