ಕ್ರೈಂ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ […]

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಎರಡನೇ ವಿಡಿಯೋ ವೈರಲ್ |ಮಹಿಳೆ ಫೋಟೋ ಲಭ್ಯ

ರಾಮನಗರ: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು ಎರಡನೇ ವಿಡಿಯೋ ವೈರಲ್ ಆಗಿರುವ ನಡುವೆ ವಿಡಿಯೋದಲ್ಲಿದ್ದ ಮಹಿಳೆ ಫೋಟೋ ಪೊಲೀಸರಿಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಬಂಡೆಮಠದ ಬಸವಲಿಂಗಶ್ರೀ ಸ್ವಾಮೀಜಿಯವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಷಡ್ಯಂತ್ರ ನಡೆಸಲಾಗಿದ್ದಲ್ಲದೇ ಸ್ವಾಮೀಜಿ ಹೆಣ್ಣಿನ ಮೋಹಕ್ಕೆ ಸಿಲುಕಿ ಬಳಿಕ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದೀಗ ಸ್ವಾಮೀಜಿ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಇಂತಹ ಹಲವು ವಿಡಿಯೋಗಳಿರುವ ಶಂಕೆ ಪೊಲೀಸರಿಂದ ವ್ಯಕ್ತವಾಗಿದೆ. ಅಲ್ಲದೇ ವಿಡಿಯೋದಲ್ಲಿದ್ದ ಮಹಿಳೆ ಫೋಟೋ

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಎರಡನೇ ವಿಡಿಯೋ ವೈರಲ್ |ಮಹಿಳೆ ಫೋಟೋ ಲಭ್ಯ Read More »

ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ‌ ಕಂದಮ್ಮಗಳು

ಸಮಗ್ರ ನ್ಯೂಸ್: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ

ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ‌ ಕಂದಮ್ಮಗಳು Read More »

ಆಕೆ ಪ್ರೀತಿಯಿಂದ ಗಂಡ, ಮಕ್ಳಿಗೆ ಚಹಾ ಮಾಡಿಕೊಟ್ಟಳು| ಆದರೆ ಅದನ್ನು ಕುಡಿದ ಬಳಿಕ ನಡೆದದ್ದು ಘೋರ ದುರಂತ!!

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ಮಾಡಿದ ಎಡವಟ್ಟಿನಿಂದಾಗಿ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಘೋರ ದುರಂತ ಸಂಭವಿಸಿದೆ. ಕೀಟನಾಶಕ ಔಷಧ ಬೆರೆಸಿದ ಚಹಾ ಕುಡಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಆಕೆ ಮಾಡಿದ ಒಂದು ಸಣ್ಣ ತಪ್ಪಿನಿಂದ ಗಂಡ ಮತ್ತು ಮುದ್ದಾದ ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಕಳೆದುಕೊಂಡಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಮನೆಯಲ್ಲಿ ಚಹಾ ಕುಡಿದು ತೀವ್ರ

ಆಕೆ ಪ್ರೀತಿಯಿಂದ ಗಂಡ, ಮಕ್ಳಿಗೆ ಚಹಾ ಮಾಡಿಕೊಟ್ಟಳು| ಆದರೆ ಅದನ್ನು ಕುಡಿದ ಬಳಿಕ ನಡೆದದ್ದು ಘೋರ ದುರಂತ!! Read More »

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕೆಲತಿಂಗಳ ಹಿಂದೆ ಜಿಹಾದಿಗಳಿಂದ ಕೊಲ್ಲಲ್ಪಟ್ಟ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿರುವ ಯಾವುದೇ ಅಂಶ ಕಂಡುಬಂದಿಲ್ಲ, ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದೆಲ್ಲಾ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಹರ್ಷನ ಕುಟುಂಬದಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ನಗರದಲ್ಲಿ ಇತ್ತೀಚೆಗೆ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು,

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು? Read More »

ವಿಜಯಪುರ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

ಸಮಗ್ರ ನ್ಯೂಸ್ : ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ‌ ವಿಜಯಪುರ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಗ್ರಾಮಸ್ಥರು ಸರಿಯಾದ ಚಿಕಿತ್ಸೆ ಸಿಗದೆ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ

ವಿಜಯಪುರ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ Read More »

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ. ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ Read More »

ಹಾವು ಕಚ್ಚಿ ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ

ಹಾವು ಕಚ್ಚಿ ಗರ್ಭಿಣಿ ಸಾವು Read More »

ಭೀಕರ ಅಪಘಾತಕ್ಕೆ ದಂಪತಿ ಬಲಿ; 9 ಮಂದಿ ಜಖಂ

ಸಮಗ್ರ ನ್ಯೂಸ್: ಕಬ್ಬುಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್ ಗೆ ಹಿಂಬದಿಯಿಂದ ಕ್ರೂಸರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇಂದು(ಅ.27) ಮುಂಜಾನೆ ನಡೆದಿದೆ. ಘಟನೆಯಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಮೂಲದ ದಂಪತಿ ಸಾವನ್ನಪ್ಪಿದ್ದಾರೆ. ಶಿವಪುತ್ರ ಶಿಂಧೆ (50) ಸುಮಿತ್ರಾ ಶಿಂಧೆ (45) ಮೃತಪಟ್ಟಿರುವ ದುರ್ದೈವಿಗಳು, ಅಪಘಾತದಲ್ಲಿ ಕ್ರೂಜರ್‌ನಲ್ಲಿದ್ದ 9 ಜನರಿಗೆ ಗಾಯಗಳಾಗಿದ್ದು,ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವರದಿ ಶಂಕರ್ ತೆಗ್ಗಿ ವಿಜಯಪುರ

ಭೀಕರ ಅಪಘಾತಕ್ಕೆ ದಂಪತಿ ಬಲಿ; 9 ಮಂದಿ ಜಖಂ Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ| ಆರೋಪಿ ಕೀರ್ತನ್ ಶೆಟ್ಟಿ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಕೀರ್ತನ್ ಶೆಟ್ಟಿ ಅಡ್ಯಾರ್ ಎಂಬಾತ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ. ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಹಾಗೂ ಕೆ.ಆರ್.ಶೆಟ್ಟಿ ಎಂಬವರು ಅಶ್ಲೀಲವಾಗಿ ಪೋಸ್ಟ್ ಮಾಡಿದ್ದರು. ಇದಕ್ಕಾಗಿ ಸಾಮಾಜಿಕ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ| ಆರೋಪಿ ಕೀರ್ತನ್ ಶೆಟ್ಟಿ ಅರೆಸ್ಟ್ Read More »