ಕ್ರೈಂ

ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!!

ಸಮಗ್ರ ನ್ಯೂಸ್: ಹೃದಯಾಘಾತದಿಂದ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬುಧವಾರ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು […]

ಸುಳ್ಯ: ಹೃದಯಾಘಾತಕ್ಕೆ ಎರಡನೇ ತರಗತಿ ವಿದ್ಯಾರ್ಥಿ ಬಲಿ!! Read More »

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು

ಸಮಗ್ರನ್ಯೂಸ್: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೆಕ್ಷನ್ 9B ಅಡಿ ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 9ಬಿ ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ

ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಲಾಹೋರ್‌ ನಿಂದ ಇಸ್ಲಾಮಾಬಾದ್‌ಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಇಮ್ರಾನ್ ಖಾನ್ ಗುರುವಾರ ವಜೀರಾಬಾದ್‌ ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿದಂತೆ 6 ಜನರು ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಇಮ್ರಾನ್

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ| ಆಪ್ತ ಸಹಾಯಕ ಸಾವು Read More »

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ರೇಣುಕಾಚಾರ್ಯ ರವರ ಸಹೋದರ ಪುತ್ರ ಕಾಲುವೆಯೊಂದರಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಸಂಭವಿಸಿದೆ. ಶಾಸಕ ರೇಣುಕಾಚಾರ್ಯ ರವರ ಸಹೋದರನ ಮಗ ಚಂದ್ರ ಶೇಖರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದರು. ಈ ಬಗ್ಗೆ ಎಲ್ಲೆಡೆ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿತ್ತು. ತುಂಗಾ ಕಾಲುವೆಗೆ ಕಾರು ಬಿದ್ದ ಬಗ್ಗೆ ಶಂಕೆ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಕಾಲುವೆಯಲ್ಲಿ ಶೋಧ

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ Read More »

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡರಹಟ್ಟಿ – ಅಥಣಿ ಮಾರ್ಗದ ನಡುವೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಬೇಡರಹಟ್ಟಿ ಗ್ರಾಮದ ಸಿದ್ದಪ್ಪಾ ವಾಲಿ ಎಂದು ತಿಳಿದು ಬಂದಿದೆ. ಇವರು ಬೇಡರಹಟ್ಟಿ ಗ್ರಾಮದಿಂದ ಅಥಣಿಗೆ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು ಅಥಣಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೋಲಿಸ

ಅಥಣಿ:ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ‌ ಸ್ಥಳದಲ್ಲೇ ಸಾವು Read More »

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಪಿಡಿಒ ಒಬ್ಬರು ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಸುಳ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತಕ್ಕೆ ಬಲಿಯಾದವರು. ಇವರಿಗೆ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು‌ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು. ಮೃತರು

ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು Read More »

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ

ಸಮಗ್ರ ನ್ಯೂಸ್: ಕಳೆದ ಹತ್ತು ದಿನಗಳ ಅವಧಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು 1.46 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಂಡು ಹಿಡಿದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಟೋಬರ್ 22 ರಿಂದ 31 ರವರೆಗೆ ಆರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ್ದಾರೆ. ದುಬೈನಿಂದ ಬಂದ ಆರು ಪ್ರಯಾಣಿಕರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 2,870 ಗ್ರಾಂ ತೂಕದ ಚಿನ್ನ ದೊರೆತಿದೆ. ಇದರ ಮೌಲ್ಯ 1,46,87,410 ರೂ. ಎಂದು ಅಂದಾಜಿಸಲಾಗಿದೆ. ಪ್ರಯಾಣಿಕರು ಜೀನ್ಸ್ ಪ್ಯಾಂಟ್‌ನ ಸೊಂಟದ

ಮಂಗಳೂರು: 10 ದಿನಗಳಲ್ಲಿ 1.46 ಕೋಟಿ ಅಕ್ರಮ ಚಿನ್ನಾಭರಣ ವಶ Read More »

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ ದ.ಕ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ. ಘಟನೆ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರಕಾರವು ಎನ್ನೈಎಗೆ ವಹಿಸಲಾಗಿದ್ದು ಎನ್ ಐ ಎ ತನಿಖೆ ವಹಿಸಿಕೊಳ್ಳಲು ತಡ ಆದ ಕಾರಣದಿಂದ ಕೆಲ ಆರೋಪಿಗಳು ತುಂಬಾ

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

ಬೆಟ್ಟಕ್ಕೆ ತೆರಳಿದ ಯುವಕ ಚಿರತೆ ಬಾಯಿಗೆ ಬಲಿ

ಸಮಗ್ರ ನ್ಯೂಸ್: ತಿ.ನರಸೀಪುರ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಬಳಿ ಚಿರತೆ ದಾಳಿಗೆ ಯುವಕ ಬಲಿಯಾಗಿದ್ದಾನೆ. ಮಹಾರಾಜ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ (18) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು ಮಾರಮ್ಮ ದೇವಾಲಯಕ್ಕೆ ಸ್ನೇಹಿತರೊಂದಿಗೆ ಪೂಜೆಗೆಂದು ಹೋಗಿದ್ದಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದಾಗ ಪೊದೆಯಿಂದ ಜಿಗಿದು ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿತು. ಸ್ನೇಹಿತರು ಚಿರತೆಗೆ ಕಲ್ಲು ಹೊಡೆದು ಮಂಜುನಾಥ್‌ನನ್ನು ರಕ್ಷಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಗ್ರಾಮಸ್ಥರು ಯುವಕನ

ಬೆಟ್ಟಕ್ಕೆ ತೆರಳಿದ ಯುವಕ ಚಿರತೆ ಬಾಯಿಗೆ ಬಲಿ Read More »

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ

ಜಾಲತಾಣಗಳಲ್ಲಿ ತುಳುಭಾಷೆ, ದೈವಾರಾಧನೆಯ ಅಶ್ಲೀಲ ಪೋಸ್ಟ್| ವಿಕೃತರ ವಿರುದ್ದ ಕಾನೂನು ಹೋರಾಟಕ್ಕೆ ದೈವಾರಾಧನಾ ವೇದಿಕೆ ನಿರ್ಧಾರ Read More »