ಕ್ರೈಂ

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಅ.23 ರಂದು ಪುತ್ತೂರಿನ ಮುರದಲ್ಲಿ ನಡೆದಿದೆ. ಮೃತರನ್ನು ಕಲ್ಲೇಗ ನಿವಾಸಿ, ಕೂಲಿ ಕೆಲಸ ನಿರ್ವಹಿಸುತ್ತಿದ್ದ ವಿಜಯ ಎಂದು ಗುರುತಿಸಲಾಗಿದೆ. ವಿಜಯ ರವರು ಕಾರ್ಯಕ್ರಮವೊಂದಕ್ಕೆ ಬಂದು ವಾಪಸ್ಸು ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಜನ ಜಮಾಯಿಸಿದರು.

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಸಮಗ್ರ ನ್ಯೂಸ್: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ Read More »

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಕೊನೆಗೂ ಎಫ್‌ಐಆರ್ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ನಲ್ಲಿ ಯಾರೊಬ್ಬರ ಹೆಸರನ್ನೂ ನಮೂದಿಸಿಲ್ಲ. ಆದರೆ ಎಫ್ ಐಆರ್ ನ ಪ್ರತಿಯಲ್ಲಿ ಆರೋಪಿತರ ಹೆಸರು ಮತ್ತು ವಿಳಾಸ ಕಲಂನಲ್ಲಿ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು Read More »

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು

ಸಮಗ್ರ ನ್ಯೂಸ್: ಫೋಟೋ ಸ್ಟುಡಿಯೋದಲ್ಲಿ ಕ್ಲೀನ್ ಮಾಡುತ್ತಿರುವ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್ ಗಳಿಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಬೆಸಗರಹಳ್ಳಿಯ ಮಧುಸೂದನ್, ವಿವೇಕ್ ಸಾವನ್ನಪ್ಪಿರುವ ದುರ್ದೈವಿಗಳು ದೀಪಾವಳಿ ಹಿನ್ನೆಲೆಯಲ್ಲಿ ವಿವೇಕ್ ಮತ್ತು ಮಧುಸೂದನ್ ಅವರು ತಮ್ಮ ಲಕ್ಷ್ಮೀ ಸ್ಟುಡಿಯೋದಲ್ಲಿ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಆಕಸ್ಮಿಕ ಅವಘಡದಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು Read More »

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ

ಸಮಗ್ರ ನ್ಯೂಸ್: ಅರುಣಾಚಲದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್‌ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್‌ಎಎಲ್‌ ನಿರ್ಮಿತ ರುದ್ರ ಎಂಬ ಸುಧಾರಿತ ಕಾಪ್ಟರ್‌ ನಿನ್ನೆ ಪತನಗೊಂಡು ನಾಲ್ವರು ಮೃತಪಟ್ಟಿದ್ದರು. ಹೆಲಿಕಾಪ್ಟರ್‌ನಲ್ಲಿ ಒಟ್ಟು ಐದು ಜನರಿದ್ದರು. ಕಾಸರಗೋಡಿನ ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್‌ ಮತ್ತು ಕೆ.ವಿ. ಕೌಶಲ್ಯ ದಂಪತಿ ಪುತ್ರ ಕೆ.ವಿ. ಅಶ್ವಿನ್‌ (24) ಈ ಹೆಲಿಕಾಪ್ಟರ್‌ ಪತನದಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಅಶ್ವಿನ್‌ ಅವರ ಮನೆಗೆ ಕರೆ ಮಾಡಿ ಮಾಹಿತಿ

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ Read More »

ಕಾಸರಗೋಡು: ಶಾಲಾ ಕಲೋತ್ಸವ ದಂದು ಕುಸಿದ ಚಪ್ಪರ/ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಾಲೆಯೊಂದರಲ್ಲಿ ಏರ್ಪಡಿಸಿದ್ದ ‘ಶಾಲಾ ಕಲೋತ್ಸವ ‘ ಕಾರ್ಯಕ್ರಮದ ವೇಳೆ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯಿಂದ ವರದಿಯಾಗಿದೆ. ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಮೂರು ದಿನಗಳ ಕಲೋತ್ಸವ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 1.30 ರ ಸುಮಾರಿಗೆ ಈ ದುರಂತ ನಡೆದಿದೆ. ಈ ಸಂದರ್ಭ ಸುಮಾರು 200ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಚಪ್ಪರದಡಿಯಲ್ಲಿ ಸಿಲುಕಿದ್ದರು ಎನ್ನಲಾಗಿದೆ. 40 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂಬ ಮಾಹಿತಿಯಿದೆ. 9ಶಾಲಾ

ಕಾಸರಗೋಡು: ಶಾಲಾ ಕಲೋತ್ಸವ ದಂದು ಕುಸಿದ ಚಪ್ಪರ/ಹಲವಾರು ವಿದ್ಯಾರ್ಥಿಗಳು, ಶಿಕ್ಷಕರು ಆಸ್ಪತ್ರೆಗೆ ದಾಖಲು Read More »

ಪುತ್ತೂರು: ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದ ಯುವಕ| ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಗೂಸಾ

ಸಮಗ್ರ‌ ನ್ಯೂಸ್: ಯುವತಿಯೊರ್ವಳನ್ನು ‘‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’’ ಎಂದು ಕೇಳಿ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಬಲ್ನಾಡು ಗ್ರಾ.ಪಂ ವ್ಯಾಪ್ತಿಯ ಸಾಜ ಪನೆತ್ತಡ್ಕ ಎಂಬಲ್ಲಿಂದ ವರದಿಯಾಗಿದೆ. ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಅ.20ರಂದು ಸಂಜೆ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅದೇ ದಾರಿಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಸಾಜ ನಿವಾಸಿ ನಾಗರಾಜ್ ಎಂಬವರು ಬರ್ತೀಯಾ ಎಂದು ಕೇಳಿದ್ದಾರೆ ಎನ್ನಲಾಗಿದ್ದು ಈ ವಿಷಯವನ್ನು ಯುವತಿಯು ತನ್ನ ಮನೆಯಲ್ಲಿ

ಪುತ್ತೂರು: ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದ ಯುವಕ| ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಗೂಸಾ Read More »

ಮೈಸೂರು: ಕುಸಿದು ಬಿದ್ದ ಮಹಾರಾಣಿ ಕಾಲೇಜು ಕಟ್ಟಡ| ಇಬ್ಬರು ಅಧ್ಯಾಪಕರು ಜಸ್ಟ್ ಮಿಸ್

ಸಮಗ್ರ ನ್ಯೂಸ್: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮೈಸೂರಿನ ಮಹಾರಾಣಿ ಪದವಿ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕಾಲೇಜಿನ ಮುಂಭಾಗದ ಎರಡು ಲ್ಯಾಬ್ ಧರಾಶಾಯಿ. ವಿದ್ಯಾರ್ಥಿಗಳು ಇಲ್ಲದ ಕಾರಣ ಭಾರೀ ದುರಂತ ತಪ್ಪಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ. ಕಾಲೇಜಿನ ಇತರೆ ಕಟ್ಟಡ ಕೂಡ ಇದೇ ಪರಿಸ್ಥಿತಿ ಇದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ

ಮೈಸೂರು: ಕುಸಿದು ಬಿದ್ದ ಮಹಾರಾಣಿ ಕಾಲೇಜು ಕಟ್ಟಡ| ಇಬ್ಬರು ಅಧ್ಯಾಪಕರು ಜಸ್ಟ್ ಮಿಸ್ Read More »