ಕ್ರೈಂ

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕೆಲತಿಂಗಳ ಹಿಂದೆ ಜಿಹಾದಿಗಳಿಂದ ಕೊಲ್ಲಲ್ಪಟ್ಟ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿರುವ ಯಾವುದೇ ಅಂಶ ಕಂಡುಬಂದಿಲ್ಲ, ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದೆಲ್ಲಾ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಹರ್ಷನ ಕುಟುಂಬದಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ನಗರದಲ್ಲಿ ಇತ್ತೀಚೆಗೆ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, […]

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು? Read More »

ವಿಜಯಪುರ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

ಸಮಗ್ರ ನ್ಯೂಸ್ : ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ‌ ವಿಜಯಪುರ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಗ್ರಾಮಸ್ಥರು ಸರಿಯಾದ ಚಿಕಿತ್ಸೆ ಸಿಗದೆ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ

ವಿಜಯಪುರ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ Read More »

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ. ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ Read More »

ಹಾವು ಕಚ್ಚಿ ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ

ಹಾವು ಕಚ್ಚಿ ಗರ್ಭಿಣಿ ಸಾವು Read More »

ಭೀಕರ ಅಪಘಾತಕ್ಕೆ ದಂಪತಿ ಬಲಿ; 9 ಮಂದಿ ಜಖಂ

ಸಮಗ್ರ ನ್ಯೂಸ್: ಕಬ್ಬುಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್ ಗೆ ಹಿಂಬದಿಯಿಂದ ಕ್ರೂಸರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇಂದು(ಅ.27) ಮುಂಜಾನೆ ನಡೆದಿದೆ. ಘಟನೆಯಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಮೂಲದ ದಂಪತಿ ಸಾವನ್ನಪ್ಪಿದ್ದಾರೆ. ಶಿವಪುತ್ರ ಶಿಂಧೆ (50) ಸುಮಿತ್ರಾ ಶಿಂಧೆ (45) ಮೃತಪಟ್ಟಿರುವ ದುರ್ದೈವಿಗಳು, ಅಪಘಾತದಲ್ಲಿ ಕ್ರೂಜರ್‌ನಲ್ಲಿದ್ದ 9 ಜನರಿಗೆ ಗಾಯಗಳಾಗಿದ್ದು,ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವರದಿ ಶಂಕರ್ ತೆಗ್ಗಿ ವಿಜಯಪುರ

ಭೀಕರ ಅಪಘಾತಕ್ಕೆ ದಂಪತಿ ಬಲಿ; 9 ಮಂದಿ ಜಖಂ Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ| ಆರೋಪಿ ಕೀರ್ತನ್ ಶೆಟ್ಟಿ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಕಾರ್ಪೋರೇಟರ್ , ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಕೀರ್ತನ್ ಶೆಟ್ಟಿ ಅಡ್ಯಾರ್ ಎಂಬಾತ ನ್ಯಾಯಾಲಯಕ್ಕೆ ಶರಣಾಗಿದ್ದು, ಪೊಲೀಸರು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ. ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಕಹಳೆ ನ್ಯೂಸ್ ಸಂಪಾದಕ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಹಾಗೂ ಕೆ.ಆರ್.ಶೆಟ್ಟಿ ಎಂಬವರು ಅಶ್ಲೀಲವಾಗಿ ಪೋಸ್ಟ್ ಮಾಡಿದ್ದರು. ಇದಕ್ಕಾಗಿ ಸಾಮಾಜಿಕ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ| ಆರೋಪಿ ಕೀರ್ತನ್ ಶೆಟ್ಟಿ ಅರೆಸ್ಟ್ Read More »

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ

ಸಮಗ್ರ ನ್ಯೂಸ್: ಪತ್ನಿಯ ಮೇಲೆ ಅತಿಯಾದ ಸಂಶಯದಿಂದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ ಮತ್ತು ಅಕೆಯ ಪತಿ ಶಿವಾನಂದ ಪೂಜಾರಿ (55)ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ

ಮಂಗಳೂರು: ಅತಿಯಾದ ಸಂಶಯ| ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಪತಿ Read More »

ಫ್ಯಾನ್‍ಗೆ ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯ ವೀಡಿಯೋ ಮಾಡಿಕೊಂಡ ಪತಿ..!!!
ಮುಂದೇನಾಯಿತು?

ಲಕ್ನೋ: ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗುಲ್ಮೊಹರ್ ನಗರದಲ್ಲಿ ಈ ಘಟನೆ ನಡೆದಿದೆ. ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಸಂಜೀವ್ ಗುಪ್ತಾ ವೀಡಿಯೋ ಮಾಡಿದ ಆಕೆ ಪತಿ. ಶೋಭೀತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಆಕೆಯನ್ನು ಉಳಿಸುವ ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ. ಬದಲಿಗೆ ವೀಡಿಯೋ ಮಾಡುತ್ತಾ ನಿಂತಿದ್ದ. ಈ ವೇಳೆ ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ

ಫ್ಯಾನ್‍ಗೆ ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯ ವೀಡಿಯೋ ಮಾಡಿಕೊಂಡ ಪತಿ..!!!
ಮುಂದೇನಾಯಿತು?
Read More »

ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಐಸಿಸ್ ಉಗ್ರರ ದಾಳಿ| ಮಸೀದಿಯಲ್ಲಿ 15 ಮಂದಿ ಸಾವು

ಸಮಗ್ರ ನ್ಯೂಸ್: ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ‌ ಐಸಿಸ್ ಉಗ್ರರು ದಾಳಿ ನಡೆಸಿದ್ದು, 15 ಮಂದಿ ಸಾವನ್ನಪ್ಪಿದ ಘಟನೆ ಇರಾನ್ ನಲ್ಲಿ ನಡೆದಿದೆ. ಇರಾನ್ ದಕ್ಷಿಣ ನಗರವಾದ ಶಿರಾಜ್‌ ನಲ್ಲಿರುವ ಶಿಯಾಗಳ ಪ್ರಮುಖ ಪವಿತ್ರ ಸ್ಥಳದಲ್ಲಿ ಬಂದೂಕುಧಾರಿ ಉಗ್ರರು ಗುಂಡಿನ ದಾಳಿ ನಡೆಸಿ ಕನಿಷ್ಠ 15 ಜನರನ್ನು ಕೊಂದಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಲಾಗಿದೆ ಮತ್ತು ಮೂರನೆಯವರು ಪರಾರಿಯಾಗಿದ್ದಾರೆ. ಸುನ್ನಿ ಉಗ್ರಗಾಮಿಗಳು ಈ ಹಿಂದೆ ದೇಶದ ಶಿಯಾ ಬಹುಸಂಖ್ಯಾತರ ಪವಿತ್ರ

ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಐಸಿಸ್ ಉಗ್ರರ ದಾಳಿ| ಮಸೀದಿಯಲ್ಲಿ 15 ಮಂದಿ ಸಾವು Read More »

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ಅಕೌಂಟ್ಸ್ ಮ್ಯಾನೇಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 26ರಂದು ಬುಧವಾರ ಇಲ್ಲಿನ ನಗರ ಠಾಣೆ ಪೊಲೀಸರು ನಾಲ್ವರನ್ನು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಜಬಿ (23) ಎಂದು ಗುರುತಿಸಲಾಗಿದ್ದು, ಈತನ ಮೇಲೆ 11 ದರೋಡೆ ಡಕಾಯಿತಿ, ಕೊಲೆ ಯತ್ನ, ಗಾಂಜಾ ಪ್ರಕರಣ ಸೇರಿದಂತೆ 11 ಪ್ರಕರಣಗಳು, ದರ್ಶನ್ (21) ದರೋಡೆ ಡಕಾಯಿತಿ ಇತ್ಯಾದಿ 7 ಪ್ರಕರಣಗಳನ್ನು ಹೊಂದಿದ್ದು, ಕಾರ್ತಿಕ್ ಅಲಿಯಾಸ್ ಕಟ್ಟೆ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಇವರಲ್ಲದೆ ಇನ್ನೂ ಒಬ್ಬನನ್ನು ಬಂಧಿಸಬೇಕಿದ್ದು,

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ Read More »