ಚಿಕ್ಕಮಗಳೂರು : ಶ್ರೀಗಂಧ ಕದಿಯಲು ಬಂದವನ ಹೊಡೆದು ಕೊಂದರಾ ಅರಣ್ಯ ಅಧಿಕಾರಿಗಳು? ಶಿಬಿರದ ಶೌಚಾಲಯದಲ್ಲಿತ್ತು ಆತನ ಹೆಣ…!
ಸಮಗ್ರ ನ್ಯೂಸ್: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಲಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲೆನ್ಸ್ ಬಂದಿದ್ದನ್ನ ಕಂಡ ಸ್ಥಳೀಯರು ಆನೆ ಶಿಬಿರದ ಶೌಚಾಲಯದಲ್ಲಿ ಬಂದು ನೋಡಿದಾಗ ವ್ಯಕ್ತಿಯ ಶವ ಪತ್ತೆಯಾಗಿದೆ. ಕೂಡಲೇ ಊರಿನ ಜನ ಸೇರಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆತ […]










