ಕ್ರೈಂ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ […]

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಹರೀಶ್‌ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ Read More »

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ

ಸಮಗ್ರ ನ್ಯೂಸ್: ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್‌ ಮಹಲ್‌ ನಬೀಸ್‌ (87) ಭಾನುವಾರ ಕೋಲ್ಕತ್ತದಲ್ಲಿ (Kolkata) ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್‌ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರತಿಷ್ಠಿತ

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ Read More »

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ|

ಸಮಗ್ರ ನ್ಯೂಸ್: ಅಸ್ವಸ್ಥಗೊಂಡಿದ್ದ ವೃದ್ಧೆಯನ್ನು ಬೀದಿನಾಯಿಗಳು ತಿಂದ ಬೀಭತ್ಸ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ದೇವಲ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಅಪರಿಚಿತ ವಾಹನವೊಂದು ವೃದ್ಧೆಯನ್ನು ಡಿಕ್ಕಿ ಹೊಡೆದಿತ್ತು. ಈ ವೇಳೆ ವಾಹನ ಚಾಲಕ ವೃದ್ಧೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮತ್ತೆ ರಸ್ತೆ ಪಕ್ಕದಲ್ಲಿ ಬಿಸಾಡಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡ ವೃದ್ದೆಯನ್ನು 4 5 ಬೀದಿನಾಯಿಗಳು ಸೇರಿಕೊಂಡು ಸಂಪೂರ್ಣವಾಗಿ ತಿಂದುಹಾಕಿ ಅಸ್ತಿಪಂಜರ ರೂಪದಲ್ಲಿ ವೃದ್ದೆಯ ಶವ ಪತ್ತೆಯಾಗಿದೆ. ವೃದ್ಧೆಯ ಶವವನ್ನು

ಅಸ್ವಸ್ಥ ವೃದ್ದೆಯನ್ನು ಜೀವಂತ ತಿಂದ ನಾಯಿಗಳು| ವೃದ್ದೆಯ ಗುರುತು ಪತ್ತೆಗಾಗಿ ಪೋಲೀಸರ ಶೋದ| Read More »

ಬಾಕ್ಸ್ ಚರಂಡಿ ಕಾಮಗಾರಿ: ಗ್ರಾ.ಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ

ಸಮಗ್ರ ನ್ಯೂಸ್: ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿಯ ಬಗ್ಗೆ ಗ್ರಾ.ಪಂ ಸದಸ್ಯರಿಬ್ಬರು ಪ್ರತ್ಯೇಕವಾಗಿ ಪತ್ರಿಕಾ ಹೇಳಿಕೆ ನೀಡಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಕೊಟ್ಟಿಗೆಹಾರ‌ದ ಬಿ ಹೊಸಹಳ್ಳಿ ಗ್ರಾ.ಪಂ ಸದಸ್ಯರಾದ ಶಿವಪ್ರಸಾದ್ ಬಿ.ಇ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಬಿ.ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ನರೇಗಾ ಯೋಜನೆಯಲ್ಲಿನ ಬಾಕ್ಸ್ ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದ್ದು, ನಿರ್ಮಾಣಗೊಂಡ ಕೆಲವೇ ದಿನದಲ್ಲಿ ಕುಸಿದು ಬಿದ್ದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಂಬಂಧಿಸಿದ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳಿಕೊಂಡರು ಯಾವುದೇ

ಬಾಕ್ಸ್ ಚರಂಡಿ ಕಾಮಗಾರಿ: ಗ್ರಾ.ಪಂ ಸದಸ್ಯರಿಂದ ಆರೋಪ ಪ್ರತ್ಯಾರೋಪ Read More »

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ

ಸಮಗ್ರ ನ್ಯೂಸ್: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ Read More »

ಸಿದ್ದಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು. ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್

ಸಿದ್ದಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ Read More »

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಟ್ಟದ ಮೇಲೆ 15ಕಟ್ಟೆಗಳನ್ನು ಕಟ್ಟುವ ಮೂಲಕ ಪ್ರಸಿದ್ದಿ ಪಡೆದಿದ್ದ ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ(83) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಮೃತರು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದರು. ವೃತ್ತಿಯಲ್ಲಿ ಕುರಿಗಾಹಿ ಆಗಿದ್ದ ಇವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿ ಪ್ರತಿ ಕಟ್ಟೆಗೂ ದೇವರ ಹಾಗೂ ತಮ್ಮ ಮೊಮ್ಮಕ್ಕಳ ಹೆಸರನ್ನು ಇಟ್ಟಿದ್ದರು. ಪರಿಸರ ಸಂರಕ್ಷಣೆಗಾಗಿ ಪಣ ತೊಟ್ಟಿದ ಇವರು ಬೆಟ್ಟದ ಮೇಲಿನ ಕಟ್ಟೆಗಳನ್ನು ಸಂರಕ್ಷಿಸುತ ಬೆಟ್ಟದ

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ Read More »

ಪರೇಶ್ ಮೇಸ್ತಾ ಕೊಲೆ ಪ್ರಕರಣ| ಮರು ತನಿಖೆಗೆ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ

ಸಮಗ್ರ‌ ನ್ಯೂಸ್: ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ಬೆನ್ನಲ್ಲೇ ಇದೀಗ ಪರೇಶ್ ಮೆಸ್ತಾ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ. ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೇಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್‍ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಸಿಬಿಐ ವರದಿ ಬಂದು ಈಗಾಗಲೇ ಎರಡು ವಾರಕ್ಕೂ ಹೆಚ್ಚು ಕಾಲವಾಗಿದ್ದು, ಮರು ತನಿಖೆ ಆದೇಶ ಮಾಡಬೇಕೆಂದು ಒತ್ತಡ ಜೋರಾಗಿದೆ. ಹೊನ್ನಾವರದಲ್ಲಿ

ಪರೇಶ್ ಮೇಸ್ತಾ ಕೊಲೆ ಪ್ರಕರಣ| ಮರು ತನಿಖೆಗೆ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ Read More »

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ.16 ರಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರಲಾಗಿದ್ದು, ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆ ನಡೆದ ಸಂದರ್ಭ ರೈಲ್ವೇ

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು Read More »