ಕ್ರೈಂ

ಸೀರಿಯಲ್ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಜನಪ್ರಿಯ ಟಿವಿ ಸೀರಿಯಲ್ ನಟಿ ವೈಶಾಲಿ ಟಕ್ಕರ್ ಇಂದೋರ್’ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೇಜಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಹಿಂದಿಯ ʼಸಸುರಾಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್‌ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

ಸೀರಿಯಲ್ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ Read More »

ಹಾಸನ: ಯಮಸ್ವರೂಪಿಯಾದ ಹಾಲಿನ ಟ್ಯಾಂಕರ್| ಮಕ್ಕಳ ಶವದ ಮುಂದೆ ಕುಟುಂಬಸ್ಥರ ಆಕ್ರಂದನ| ರಾಂಗ್ ರೂಟ್ ಡ್ರೈವಿಂಗ್ ನಿಂದಾಯಿತೇ ಅವಘಡ

ಸಮಗ್ರ ನ್ಯೂಸ್: ಅರಸೀಕೆರೆ ತಾಲ್ಲೂಕಿನ ಗಾಂಧಿನಗರ ಬಳಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟ ಪ್ರಕರಣದಲ್ಲಿ ರಾಂಗ್​ ರೂಟ್​ನಲ್ಲಿ ಬಂದ ಹಾಲಿನ ಲಾರಿಯೇ ಮುಖ್ಯ ದೋಷಿ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಲಾರಿ ಚಾಲಕ ಮಿಲ್ಕ್​ ಟ್ಯಾಂಕರ್ ಅನ್ನು ರಾಂಗ್​ ರೂಟ್​ನಲ್ಲಿ ತಂದಿದ್ದರಿಂದ ಟೆಂಪೊ ಹಾಲಿನ ಲಾರಿ, ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆಯಿತು. ಜಿಗ್​-ಜಾಗ್ ರೀತಿಯಲ್ಲಿ ಟೆಂಪೊದ ಹಿಂದೆ ಮತ್ತು ಮುಂದೆ ಹಾನಿಯಾಯಿತು. ಹೀಗಾಗಿಯೇ ಸಾವಿನ ಸಂಖ್ಯೆ ಹೆಚ್ಚಾಯಿತು. ಬಸ್​ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಾಗೂ ಟೆಂಪೊ

ಹಾಸನ: ಯಮಸ್ವರೂಪಿಯಾದ ಹಾಲಿನ ಟ್ಯಾಂಕರ್| ಮಕ್ಕಳ ಶವದ ಮುಂದೆ ಕುಟುಂಬಸ್ಥರ ಆಕ್ರಂದನ| ರಾಂಗ್ ರೂಟ್ ಡ್ರೈವಿಂಗ್ ನಿಂದಾಯಿತೇ ಅವಘಡ Read More »

ಮಡಿಕೇರಿ: ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸಂಚು| ಆಡಿಯೋ ವೈರಲ್ ಬೆನ್ನಲ್ಲೇ ಜೆಡಿಎಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸಂಚು ರೂಪಿಸಿರುವ ಆರೋಪದಡಿ ಜೆಡಿಎಸ್ ಮುಖಂಡ ಸೇರಿದಂತೆ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭಾ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಮುಸ್ತಾಫ ಅಲಿಯಾಸ್ ಮುಸ್ತು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅಬ್ದುಲ್ಲಾ‌ ಬೆಟ್ಟಗೇರಿ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ನಾಲ್ಕು ತಿಂಗಳ ಹಿಂದೆ ಮೊಬೈಲ್’ನಲ್ಲಿ ಮಲೆಯಾಳ ಭಾಷೆಯಲ್ಲಿ ಮೂರು ನಿಮಿಷಗಳ ಕಾಲ ನಡೆಸಿರುವ ಸಂಭಾಷಣೆ ಇದೀಗ ವೈರಲ್ ಆಗಿದ್ದು, ಮಡಿಕೇರಿ ನಗರದ ನಿವಾಸಿ

ಮಡಿಕೇರಿ: ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸಂಚು| ಆಡಿಯೋ ವೈರಲ್ ಬೆನ್ನಲ್ಲೇ ಜೆಡಿಎಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್ Read More »

ಹಾಸನ: ಭೀಕರ ಅಪಘಾತಕ್ಕೆ 5 ಮಕ್ಕಳು ಸೇರಿ 9 ಮಂದಿ ದುರ್ಮರಣ|ಧರ್ಮಸ್ಥಳ ದರ್ಶನ ಮುಗಿಸಿ‌ ಮರಳುತ್ತಿದ್ದವರು ದೇವರ ಪಾದಕ್ಕೆ!!

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 5 ಮಕ್ಕಳು ಸೇರಿದಂತೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಕೆಎಸ್​ಆರ್​ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಟೆಂಪೋ ಟ್ರಾವೆಲರ್​ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು.

ಹಾಸನ: ಭೀಕರ ಅಪಘಾತಕ್ಕೆ 5 ಮಕ್ಕಳು ಸೇರಿ 9 ಮಂದಿ ದುರ್ಮರಣ|ಧರ್ಮಸ್ಥಳ ದರ್ಶನ ಮುಗಿಸಿ‌ ಮರಳುತ್ತಿದ್ದವರು ದೇವರ ಪಾದಕ್ಕೆ!! Read More »

ಬೆಳ್ತಂಗಡಿ: ಮೂರು ದಿನಗಳ ಹಿಂದೆ ದುಬೈನಲ್ಲಿ ಉದ್ಯೋಗಕ್ಕೆ ಸೇರಿದ್ದ ಯುವಕ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಹೊರ ದೇಶವಾದ ದುಬೈನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಕುವೆಟ್ಟು ನಿವಾಸಿ ಪ್ಲೇವಿನ್ ಅವಿನ್ ರೊಡ್ರಿಗಸ್ ಎಂದು ತಿಳಿದುಬಂದಿದೆ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ ಮೊಂತೆರೋ ದಂಪತಿಯ ಪುತ್ರನಾಗಿರುವ ನಿವಾಸಿ ಕೇವನ್ ಅವಿನ್ ರೊಡ್ರಿಗಸ್ ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ನಂತರ ನಿಟ್ಟೆ ಕಾಲೇಜಿನಲ್ಲಿ ಎಂ.ಬಿ.ಎ ಪದವಿ ಮುಗಿಸಿ ದುಬೈಗೆ ಹೋಗಿದ್ದರು. 3 ದಿನಗಳ ಹಿಂದೆಯಷ್ಟೆ ಇವರಿಗೆ

ಬೆಳ್ತಂಗಡಿ: ಮೂರು ದಿನಗಳ ಹಿಂದೆ ದುಬೈನಲ್ಲಿ ಉದ್ಯೋಗಕ್ಕೆ ಸೇರಿದ್ದ ಯುವಕ ಅಪಘಾತದಲ್ಲಿ ಸಾವು Read More »

ಕಾರವಾರ: ಪ್ರೀತಿಯಿಂದ ಸಾಕಿದ್ದ ಕೋತಿಮರಿಗೆ ಕಣ್ಣೀರ ವಿದಾಯ

ಸಮಗ್ರ ನ್ಯೂಸ್: ಕಳೆದ ಮೂರು ವರ್ಷದಿಂದ ಸಾಕಿ ಸಲುಹಿದ್ದ ಕೋತಿ ಮರಿಯೊಂದು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಕ್ಕೆ ಮಕ್ಕಳು, ಮನೆ ಮಂದಿ ಹಾಗೂ ಗ್ರಾಮಸ್ಥರು ಕಣ್ಣೀರ ವಿದಾಯ ಹೇಳಿದ ಹಾಗೂ ಮನೆಯ ಸದಸ್ಯನನ್ನೆ ಕಳೆದುಕೊಂಡಂತೆ ಊಟ ತಿಂಡಿ ಬಿಟ್ಟು, ಮರಳಿ ಬಾ ಎಂದು ಭಾವುಕರಾಗಿ ಕರೆದ ಮನಕಲಕುವ ಘಟನೆ ವರದಿಯಾಗಿದೆ. ದಾಂಡೇಲಿ ಪಟ್ಟಣದ ಕಂಜರಪೇಟೆ ಗಲ್ಲಿಯ ರೆಹೋನೆತ್ ಎನ್ನುವವರ ಮನೆಯಲ್ಲಿ ಕೋತಿ ಮರಿಯೂ ವಾಸವಿರುತ್ತಿತ್ತು. ಕೋತಿಗೆ ರಾಮು ಎಂದು ಹೆಸರನ್ನೂ ಕೂಡ ಇಡಲಾಗಿತ್ತು. ಕಂಜರಪೇಟೆ ಗಲ್ಲಿಯಲ್ಲಿ ಓಡಾಡಿಕೊಂಡು, ಗ್ರಾಮಸ್ಥರೊಂದಿಗೆ ಅನ್ಯೋನ್ಯತೆಯಿಂದಿದ್ದ

ಕಾರವಾರ: ಪ್ರೀತಿಯಿಂದ ಸಾಕಿದ್ದ ಕೋತಿಮರಿಗೆ ಕಣ್ಣೀರ ವಿದಾಯ Read More »

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಕೆಲವರು ಅವಶೇಷಗಳಡಿ ಸಿಲುಕಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಸಮಯದಲ್ಲಿ, ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು ಮಾಹಿತಿ ನೀಡಿದ್ದಾರೆ. ಮೀಥೇನ್ ಸ್ಫೋಟದಿಂದಾಗಿ ಈ ಘಟನೆ ಸಂಭವಿಸಿರಬಹುದು

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು Read More »

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಳಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಆರೋಪಿ

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್‌ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲದಿರುವುದು ವಿಶೇಷವಾಗಿದೆ. ಮಂಗಳೂರು ಪಳ್ನೀರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂಬವರ ಪುತ್ರ ರಿಯಾಝ್‌ (38) ಬಂಧಿತ ಆರೋಪಿ. ಈತನಿಗೆ ಯಾವುದೇ ಪೂರ್ವ ಕ್ರಿಮಿನಲ್‌ ಹಿನ್ನಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ದ ಇವರೆಗೆ ಯಾವುದೇ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್ Read More »

ಹಾಸನ:ಪತ್ನಿಗೆ ಪದೇಪದೇ ಮೆಸೇಜ್ ಮಾಡ್ತಿದ್ದ ಟೈಲರ್ ನ ಹತ್ಯೆ ಮಾಡಿದ ಗಂಡ

ಸಮಗ್ರ ನ್ಯೂಸ್: ಪತ್ನಿಗೆ ಮೆಸೇಜ್ ಮಾಡಿದ ಸಂಬಂಧ ಪತಿಯೊಬ್ಬ ಟೈಲರ್‌ನ್ನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತ ವ್ಯಕ್ತಿ ಊಪಿನಹಳ್ಳಿ ಗ್ರಾಮದ ಗಂಗಾಧರ್ (40) ಎಂದು ಗುರುತಿಸಲಾಗಿದೆ. ಭರತ್ ಕೊಲೆ ಮಾಡಿದ ಆರೋಪಿ. ಭರತ್ ಪತ್ನಿಗೆ ಗಂಗಾಧರ್ ಪದೇ ಪದೇ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದೇ ವಿಷಯವಾಗಿ ಭರತ್, ಸೋಮು, ಚಿರು, ಅಭಿ ಎಂಬ ನಾಲ್ವರು ಗಂಗಾಧರ್​ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ

ಹಾಸನ:ಪತ್ನಿಗೆ ಪದೇಪದೇ ಮೆಸೇಜ್ ಮಾಡ್ತಿದ್ದ ಟೈಲರ್ ನ ಹತ್ಯೆ ಮಾಡಿದ ಗಂಡ Read More »