ಕ್ರೈಂ

ಬಂಟ್ವಾಳ: ಲಾರಿ-ಬೈಕ್ ಅಪಘಾತ|ಬೈಕ್ ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ರಾಯಿ ಸಮೀಪದ ಕೊಯಿಲ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಮಂಗಳೂರು ಬರ್ಕೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಈಚರ್ ಲಾರಿ ಮತ್ತು ಪಲ್ಸರ್ ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಂಟ್ವಾಳ: ಲಾರಿ-ಬೈಕ್ ಅಪಘಾತ|ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ| ಶಿವಮೊಗ್ಗ ಮತ್ತೆ ಉದ್ವಿಗ್ನ

ಸಮಗ್ರ ನ್ಯೂಸ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ

ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ| ಶಿವಮೊಗ್ಗ ಮತ್ತೆ ಉದ್ವಿಗ್ನ Read More »

ಕಾಸರಗೋಡು: ಹಾವು ಕಡಿದು ಇಂಜಿನಿಯರ್ ಸಾವು| ದೀಪಾವಳಿ ಆಚರಣೆಗೆ ಊರಿಗೆ ಬಂದಿದ್ದಾತನ ಮನೆಯಲ್ಲಿ ಸೂತಕ

ಸಮಗ್ರ ನ್ಯೂಸ್: ದೀಪಾವಳಿ ರಜೆಯಲ್ಲಿ ಊರಿಗೆ ಬಂದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವಕನೊಬ್ಬ ಮನೆಯ ಬಳಿ ಹಾವಿನ ಕಡಿತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಬಳಿಯ ಪಾಟಾಜೆ ನಿವಾಸಿ ಪಿ.ವಿ. ಕೃಷ್ಣ ಕುಮಾರ್ (27) ಮೃತ ಯುವಕ. ಗೋಪಾಲಕೃಷ್ಣ ಭಟ್ ಮತ್ತು ತಿರುಮಲೇಶ್ವರಿ ದಂಪತಿಯ ಪುತ್ರನಾದ ಕೃಷ್ಣ ಕುಮಾರ್ ಚೆನ್ನೈನಲ್ಲಿ ಅಮೆರಿಕದ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಮನೆಯವರ ಜೊತೆ ದೀಪಾವಳಿ ಆಚರಿಸಲು ಊರಿಗೆ ಬಂದಿದ್ದರು. ಮನೆಯ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಯಾವುದೋ ಹಾವು ಕಡಿದಿದ್ದು

ಕಾಸರಗೋಡು: ಹಾವು ಕಡಿದು ಇಂಜಿನಿಯರ್ ಸಾವು| ದೀಪಾವಳಿ ಆಚರಣೆಗೆ ಊರಿಗೆ ಬಂದಿದ್ದಾತನ ಮನೆಯಲ್ಲಿ ಸೂತಕ Read More »

ಸುಳ್ಯ: ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನ

ಸಮಗ್ರ ನ್ಯೂಸ್ : ಸುಳ್ಯದ ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಅ.24ರಂದು ನಡೆದಿದೆ. ವ್ಯಕ್ತಿ ಯನ್ನು ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷರ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ತಿಳಿದು ಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿಕೊಳ್ಳಲು

ಸುಳ್ಯ: ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನ Read More »

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಆಕೆಯ ದೂರವಾಣಿ ನಂಬರ್ ಪಡೆದು ಆಕೆಯೊಂದಿಗೆ ಚಾಟ್ ಮಾಡುತ್ತಿದ್ದ ಪರಿಚಯ ಪ್ರೀತಿಯಾಗಿ, ಆಕೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಎರಡು ಬಾರಿ ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇವರಿಬ್ಬರ ದೂರವಾಣಿ ಚಾಟ್ ಆಕೆಯ ಸಂಬಂಧಿಕರಿಗೆ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ Read More »

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಠದಲ್ಲಿಯೇ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಜಮೀನು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ Read More »

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಅ.23 ರಂದು ಪುತ್ತೂರಿನ ಮುರದಲ್ಲಿ ನಡೆದಿದೆ. ಮೃತರನ್ನು ಕಲ್ಲೇಗ ನಿವಾಸಿ, ಕೂಲಿ ಕೆಲಸ ನಿರ್ವಹಿಸುತ್ತಿದ್ದ ವಿಜಯ ಎಂದು ಗುರುತಿಸಲಾಗಿದೆ. ವಿಜಯ ರವರು ಕಾರ್ಯಕ್ರಮವೊಂದಕ್ಕೆ ಬಂದು ವಾಪಸ್ಸು ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಜನ ಜಮಾಯಿಸಿದರು.

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್‌ಶೀಟ್‌ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್‌ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್‌ ನಾಯಕರು

ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ

ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ‌ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ

ಸಮಗ್ರ ನ್ಯೂಸ್: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ

ವಿಧಾನ ಪರಿಷತ್ ಉಪಸಭಾಪತಿ ಆನಂದ ಮಾಮನಿ ವಿಧಿವಶ Read More »