ಕ್ರೈಂ

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ

ಸಮಗ್ರ ನ್ಯೂಸ್: ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು. ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು […]

ಉಡುಪಿ: ಕಾಂತಾರ ಖ್ಯಾತಿಯ ಹಿರಿಯ ನಟ ಪ್ರಭಾಕರ ಕಲ್ಯಾಣಿ ನಿಧನ Read More »

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ‌ ನಡೆದ ಅಹಿತಕರ ಘಟನೆಗಳ ಸಂಬಂಧ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಸಂಬಂಧ ಕುಡ್ಲ ರಾಂಪೇಜ್’ ಯುಟ್ಯೂಬ್ ಚಾನೆಲ್ ನ ಮಾಲೀಕರಾದ ಅಜಯ್ ಅಂಚನ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ‘ಧರ್ಮಸ್ಥಳದ ಪಾಂಗಾಳ ರಸ್ತೆ ಬಳಿ, ಒಬ್ಬರ

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ| ಏಳು ಪ್ರಕರಣಗಳು ದಾಖಲು Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ), ‘ಕದ್ರಿ ಮಂಜುನಾಥ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು. ಆದರೆ, ಜಾರಿ ನಿರ್ದೇಶನಾಲಯವು (ಇ.ಡಿ), ‘ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು’ ಎಂದಿದೆ. ಎರಡೂ ತನಿಖಾ ಸಂಸ್ಥೆಗಳ ವಿವರಗಳಲ್ಲಿನ ವ್ಯತ್ಯಾಸ ಚರ್ಚೆಗೆ ಕಾರಣವಾಗಿದೆ. 2022ರ ನವೆಂಬರ್‌ನಲ್ಲಿ ಮಂಗಳೂರಿನ ಆಟೋ ಒಂದರಲ್ಲಿ ಸ್ಫೋಟ ಸಂಭವಿಸಿತ್ತು. ಕುಕ್ಕರ್‌ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಎನ್‌ಐಎ ತನಿಖೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಚರ್ಚೆಗೆ ಕಾರಣವಾದ ಇ.ಡಿ, ಎನ್ಐಎ ನ ಎರಡು ರಿಪೋರ್ಟ್ Read More »

ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು 33 ವರ್ಷದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಸನತ್ನಗರ ಜೆಕ್ ಕಾಲೋನಿಯಲ್ಲಿ ನಡೆದಿದೆ.‌ ಮೃತಳನ್ನು ಎ.ರಜಿತಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ರೋಹಿತ್ ಮತ್ತು ಆತನ ಕುಟುಂಬದಿಂದ ನಿರಂತರ ಕಿರುಕುಳವನ್ನು ಎದುರಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಆಕೆಯ ತಂದೆ, ಸಬ್ ಇನ್ಸ್ಪೆಕ್ಟರ್ ನರಸಿಂಹ ಗೌಡ್ ನೀಡಿದ ದೂರಿನ ಆಧಾರದ ಮೇಲೆ ಸಂಜೀವ ರೆಡ್ಡಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮತ್ತು ಕುಟುಂಬ ಸದಸ್ಯರ ಪ್ರಕಾರ,

ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ Read More »

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್್ರ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿಗೆ ಸಾಥ್ ನೀಡಲು ದೂರುದಾರನ ಪರ ಹೇಳಿಕೆ ನೀಡಲು 6 ಸ್ಥಳೀಯರು ಮುಂದಾಗಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಯೊಂದ ವರದಿ ಮಾಡಿದೆ. ಆದರೆ ಎಸ್ಐಟಿ ಮೂಲಗಳು ಇದನ್ನು ಸ್ಪಷ್ಟಪಡಿಸಿಲ್ಲ. ಪ್ರಕರಣದ ಮತ್ತೋರ್ವ

ಧರ್ಮಸ್ಥಳ: ಶವ ಹೂತ ಪ್ರಕರಣಕ್ಕೆ ಮಹಾತಿರುವು| ದೂರುದಾರನ‌ ಪರ ಸಾಕ್ಷಿ ಹೇಳಲು ತಯಾರಾದ ಆರು ಮಂದಿ ಸ್ಥಳೀಯರು!? Read More »

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ

ಸಮಗ್ರ ನ್ಯೂಸ್: ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್ ಆಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು.

ಮಠಾದೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು| ಜಾಲತಾಣಗಳಲ್ಲಿ ವೈರಲ್‌ ಆಯ್ತು ನಿಜಲಿಂಗನ‌ ನಿಜಸ್ವರೂಪ Read More »

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಮಾಧ್ಯಮಗಳಿಗೆ ಯಾವುದೇ ರೀತಿ ಸುದ್ದಿ ಪ್ರಕಟಿಸದಂತೆ ಹಾಗೂ ಪ್ರಕಟಿಸಿರುವ ಸುದ್ದಿಗಳನ್ನು ಡಿಲೀಟ್ ಮಾಡುವಂತೆ ಏಕಪಕ್ಷೀಯವಾಗಿ ಆದೇಶ ಮಾಡಿದ್ದ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ತಾವು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಅವರು ಮನವಿ ಮಾಡಿದ್ದಾರೆ. ಪ್ರಕರಣವನ್ನು ಅಗತ್ಯ ಆದೇಶಗಳಿಗಾಗಿ ಪ್ರಧಾನ ನಗರ ಸಿವಿಲ್ ಸೆಷನ್ಸ್ ನ್ಯಾಯಾಧೀಶರ ಮುಂದೆ ಇಡುವುದು ಸೂಕ್ತ

ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮ ‌ನಿರ್ಬಂಧ ವಿಚಾರ| ಪ್ರಕರಣ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಧೀಶರ ಮನವಿ Read More »

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿವೆ. ಇಂದು ಪಾಯಿಂಟ್ ನಂಬರ್ 11ರಲ್ಲಿ ಉತ್ಖನನ ನಡೆಸಲು ತೀರ್ಮಾನಿಸಿದ್ದು ಈ ವೇಳೆ ಅನಾಮಿಕ ಎಸ್ಐಟಿ ತಂಡವನ್ನು ಧರ್ಮಸ್ಥಳದ ಬಂಗ್ಲಗುಡ್ಡಕ್ಕೆ ಕರೆದೊಯ್ದಿದ್ದಿದ್ದಾನೆ. ಆ ಭಾಗದಲ್ಲಿ ಮೂಳೆ‌ ಹಾಗೂ ಇನ್ನಿತರ ಅವಶೇಷಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ‌ಅನಾಮಿಕನ ವಿಚಾರಣೆ ತೀವ್ರಗೊಂಡಿದೆ ಎಂಬ ಮಾಹಿತಿಗಳು ಲಭಿಸಿವೆ. ಅವಶೇಷಗಳು ಸಿಕ್ಕ ಬೆನ್ನಲ್ಲೆ ಸ್ಥಳಕ್ಕೆ ಎಸ್ಐಟಿ ತಂಡದ ಕಾರ್ಮಿಕರು ವಿವಿಧ ವಸ್ತುಗಳನ್ನು ಹೊತ್ಯೊಯ್ಯುತ್ತಿರುವುದಾಗಿ ತಿಳಿದುಬಂದಿದೆ. ಒಟ್ಟಾರೆಯಾಗಿ ಪ್ರಕರಣ ಹಲವು ತಿರುವುಗಳನ್ನು

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ Read More »