ಕ್ರೈಂ

ಉತ್ತರಾಖಂಡ್: ಹೃದಯಾಘಾತಕ್ಕೆ ಕೊಡಗಿನ ಯೋಧ ಬಲಿ

ಸಮಗ್ರ ನ್ಯೂಸ್: ಕರ್ತವ್ಯದಲ್ಲಿದ್ದ ಕೊಡಗಿನ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಾಖಂಡ್‌ನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಮಹೇಶ್ (46) ಮೃತ ಯೋಧ. ಜೂನಿಯರ್ ಕಮೀಷನ್ ಆಫೀಸರ್ (JCO) ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದರು. ಮಹೇಶ್ ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನ ಅಗಲಿದ್ದಾರೆ. ಕಳೆದ 22 ವರ್ಷದಿಂದ ಭಾರತೀಯ ಸೇನೆಯಲ್ಲಿ‌ ಸೇವೆ ಸಲ್ಲಿಸುತ್ತಿದ್ದ ಮಹೇಶ್, ಬೆಂಗಳೂರು ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ್, ಉತ್ತರಾಖಂಡ್ […]

ಉತ್ತರಾಖಂಡ್: ಹೃದಯಾಘಾತಕ್ಕೆ ಕೊಡಗಿನ ಯೋಧ ಬಲಿ Read More »

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್

ಸಮಗ್ರ ನ್ಯೂಸ್: ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿದ್ದಾರೆ. ಆಕ್ಟೋಬರ್ 8 ರಂದು ಈ ಕೃತ್ಯ ನಡೆದಿದ್ದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್ Read More »

ವಿಟ್ಲ: ಗ್ರಾ.ಪಂ ಸಿಬ್ಬಂದಿಯಿಂದ ಯುವತಿಯ ಮಾನಭಂಗಕ್ಕೆ ಯತ್ನ| ಆರೋಪಿ ಬಂಧನ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ಗೆ ಬಂದಿದ್ದ ಹಿಂದೂ ಯುವತಿಗೆ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದ್ದು, ಯುವತಿ ನೀಡಿದ ದೂರಿನಂತೆ‌ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪುಣಚ ಗ್ರಾಮ ಪಂಚಾಯತ್‌ನ ಸ್ವಚ್ಚತಾ ಸಿಬ್ಬಂದಿ ಉಸ್ಮಾನ್ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಸಂತ್ರಸ್ತ ಯುವತಿ ಪುಣಚ ಪಂಚಾಯತ್ ಗೆ ಕಾರ್ಯನಿಮಿತ್ತ ಭೇಟಿ ನೀಡಿದ್ದ ವೇಳೆ ಪಕ್ಕದ ಶೌಚಾಲಯಕ್ಕೆ ತೆರಳಿದ್ದು, ಈ ವೇಳೆ‌ ಅಲ್ಲಿಗೆ ತೆರಳಿದ ಆರೋಪಿ ಉಸ್ಮಾನ್ ಕೈ ಹಿಡಿದೆಳೆದು

ವಿಟ್ಲ: ಗ್ರಾ.ಪಂ ಸಿಬ್ಬಂದಿಯಿಂದ ಯುವತಿಯ ಮಾನಭಂಗಕ್ಕೆ ಯತ್ನ| ಆರೋಪಿ ಬಂಧನ Read More »

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್​ ಏರ್​​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶವಾಗಿದೆ. ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ​ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ Read More »

ಇಬ್ಬರು ಕಾಡು ಹಂದಿ ಬೇಟೆಗಾರರ ಬಂಧನ

ಸಮಗ್ರ ನ್ಯೂಸ್: ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ರಡೇರಹಟ್ಟಿ ಗ್ರಾಮದ ನಿವಾಸಿಯಾದ ಸದಾಶಿವ ಬಸವಂತ ಕಾಂಬಳೆ ಹಾಗೂ, ಅಥಣಿ ಗವಿಸಿದ್ದನಮಡ್ಡಿಯ ನಿವಾಸಿಯಾದ ಶಿವಾಜಿ ಅಶೋಕ ಭಜಂತ್ರಿ (35) ಬಂಧಿತ ಆರೋಪಿಗಳು. ಕಾಡುಹಂದಿಯ ಮಾಂಸವನ್ನು ಅಥಣಿ, ಜಮಖಂಡಿ ಸೇರಿ ಮಹಾರಾಷ್ಟ್ರದ ಮಿರಜ, ಸಾಂಗಲಿ

ಇಬ್ಬರು ಕಾಡು ಹಂದಿ ಬೇಟೆಗಾರರ ಬಂಧನ Read More »

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವ ಮಹಿಳೆ; ಗ್ರಾಮಸ್ಥರಿಂದ ಆಕ್ರೋಶ

ಸಮಗ್ರ ನ್ಯೂಸ್: ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದ, ಮಹಿಳೆಯ ವಿರುದ್ದ ಗ್ರಾಮಸ್ಥರು ಆಕ್ರೋಶಗೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೋಕಿನ ಹೆಬ್ಬಲಗುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಲಗುಪ್ಪೆ ಗ್ರಾಮದಲ್ಲಿ ವಾಸವಾಗಿರುವ ವೆಂಕಟಮ್ಮ ಎಂಬ ಮಹಿಳೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲವು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ವೆಂಕಟಮ್ಮ ಎಂಬುವವರಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಹೆಬ್ಬಲಗುಪ್ಪೆ ಗ್ರಾಮದ ಮಹಿಳಾ ಹೋರಾಟಗಾರ್ತಿ ಜಯಲಕ್ಷಿ ಆರೋಪಿಸಿದ್ದಾರೆ. ಇದಕ್ಕೆ

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವ ಮಹಿಳೆ; ಗ್ರಾಮಸ್ಥರಿಂದ ಆಕ್ರೋಶ Read More »

ಟಾರ್ಚ್ ಲೈಟ್ ಹಿಡಿದು ಬಟ್ಟೆ ಕದಿಯುವ ಬೆತ್ತಲೆ ಯುವಕ| ಈ ಸೈಕೋನ ಅವತಾರ ಮೂರನೇ ಕಣ್ಣಲ್ಲಿ ಸೆರೆ

ಸಮಗ್ರ ನ್ಯೂಸ್: ರಾತ್ರಿಯಾದ್ರೆ ಸಾಕು ಯುವಕನೋರ್ವ ಟಾರ್ಚ್ ಹಿಡಿದು ಬೆತ್ತಲಾಗಿ ಬೀದಿ ಬೀದಿ ಸುತ್ತುತ್ತಾನೆ. ಈತ ನನ್ನು ಕಂಡು ಜನ ಭಯಭೀತರಾಗುತ್ತಿದ್ದು ಯುವಕನ ವರ್ತನೆಗೆ ಬೇಸತ್ತಿದ್ದಾರೆ. ಈಗ ಈ ಯುವಕನ ವರ್ತನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ… ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್​ಗೆ ನುಗ್ಗಿದ್ದ ಸೈಕೋ ವಿದ್ಯಾರ್ಥಿನಿಯರ ಒಳ ಉಡುಪುಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಭಾರೀ

ಟಾರ್ಚ್ ಲೈಟ್ ಹಿಡಿದು ಬಟ್ಟೆ ಕದಿಯುವ ಬೆತ್ತಲೆ ಯುವಕ| ಈ ಸೈಕೋನ ಅವತಾರ ಮೂರನೇ ಕಣ್ಣಲ್ಲಿ ಸೆರೆ Read More »

ನೀರಿಗೆ ಹಾರಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ನೇಹಿತರಿಗೆ ಮೆಸೇಜ್ ಮಾಡಿದ ನಂತರ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಬಳಿಯ ಕಲ್ಲುಕಟ್ಟೆ ಡ್ಯಾಂನಲ್ಲಿ ನಡೆದಿದೆ. ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಕಲ್ಲಹಳ್ಳಿ ಗ್ರಾಮದ ಸಚಿನ್, ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಮೂವರು ಸ್ನೇಹಿತರಿಗೆ ಮೆಸೆಜ್ ಮಾಡಿದ್ದಾನೆ. ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್

ನೀರಿಗೆ ಹಾರಿ ಯುವಕ ಆತ್ಮಹತ್ಯೆ Read More »

ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಎಳೆದೊಯ್ದು ಅತ್ಯಾಚಾರ

ಸಮಗ್ರ ನ್ಯೂಸ್: ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಬಾಲಕಿಯನ್ನು ಎಳೆದೊಯ್ದಿದ್ದಾರೆ. ತಡೆಯಲು ಮುಂದಾದ ಆಕೆಯ ತಾಯಿಯನ್ನು ಥಳಿಸಿದ್ದು, ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು,

ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಎಳೆದೊಯ್ದು ಅತ್ಯಾಚಾರ Read More »

ನಾಪತ್ತೆಯಾಗಿದ್ದ ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಸಮೀಪ ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಹಾಗೂ ಮೂವರು ಮಕ್ಕಳ ಶವ ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಬಿಳ್ಳೂರು ಗ್ರಾಮದ ಹೊರ ವಲಯ ತೋಟದ ಬಾವಿಯೊಂದರಲ್ಲಿ ಪತ್ತೆಯಾಗಿವೆ. ಸಂಗೀತಾ ತುಕಾರಾಮ ಮಾಳಿ (27), ಅಮೃತಾ (13), ಅಂಕಿತಾ (10) ಹಾಗೂ ಐಶ್ವರ್ಯ (7) ಮೃತಪಟ್ಟವರು. ಮೃತರು ಅಥಣಿ ಜತ್ತ ರಸ್ತೆಯ ಬಿಳ್ಳೂರು ಗ್ರಾಮದ ತೋಟದ ಮನೆಯಲ್ಲಿ

ನಾಪತ್ತೆಯಾಗಿದ್ದ ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ Read More »