ಕ್ರೈಂ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ನಾಲ್ವರ ಬಂಧನ

ಸಮಗ್ರ ನ್ಯೂಸ್: ಕೂಲಿ ಕೆಲಸಕ್ಕೆ ಹೋಗುವ ವಿಚಾರದಲ್ಲಿ ನಾಲ್ಕು ಮಂದಿಯನ್ನು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಬೈದಾಡಿ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.ಬಸವರಾಜ್ ಮಡಿವಾಳ್, ಈರಣ್ಣ ನೈನಾಪುರ, ರಾಮಪ್ಪ ತಂಬೂರಿ, ಪರಶುರಾಮ ಬಂಧಿತ ಆರೋಪಿಗಳು. ಇವರು ಕೂಲಿಗೆ ಹೋಗುವ ವಿಚಾರದಲ್ಲಿ ರವಿವಾರ ಬೆಳಗ್ಗೆ ಬೈದಾಡಿ, ಹಲ್ಲೆ ನಡೆಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಉರ್ವ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ನಾಲ್ವರ ಬಂಧನ Read More »

‘ಭಾರತ್ ಜೋಡೋ’ ಯಾತ್ರೆಗೆ ಬಂದಿದ್ದಾತ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಪಕ್ಷದ ಕಾರ್ಯಕರ್ತ ಅಪಘಾತದಲ್ಲಿ ಮೃತಪಟ್ಟ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರಮೇಶ(38) ಮೃತಪಟ್ಟವರು ಎಂದು ಹೇಳಲಾಗಿದೆ. ಖಾಸಗಿ ಬಸ್ ನಲ್ಲಿ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತರಲಾಗಿತ್ತು. ರಮೇಶ್ ಅವರು ಹಿರಿಯೂರಿನಲ್ಲಿ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಹಿರಿಯೂರು ಪಟ್ಟಣದ ಟಿಬಿ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದು ರಮೇಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಹಿರಿಯೂರು ಟೌನ್ ಪೋಲಿಸ್

‘ಭಾರತ್ ಜೋಡೋ’ ಯಾತ್ರೆಗೆ ಬಂದಿದ್ದಾತ ಅಪಘಾತದಲ್ಲಿ ಸಾವು Read More »

ಸುಬ್ರಹ್ಮಣ್ಯ: ಹಳಿ‌ದಾಟುತ್ತಿದ್ದವನಿಗೆ ರೈಲು ಇಂಜಿನ್ ಡಿಕ್ಕಿ; ವ್ಯಕ್ತಿ ಗಂಭೀರ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನೆಟ್ಟಣದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ತನ್ನ ಮಗಳು ಭಾಗವಹಿಸಿದ್ದ ಕ್ರೀಡಾಕೂಟಕ್ಕೆ ತೆರಳಿ

ಸುಬ್ರಹ್ಮಣ್ಯ: ಹಳಿ‌ದಾಟುತ್ತಿದ್ದವನಿಗೆ ರೈಲು ಇಂಜಿನ್ ಡಿಕ್ಕಿ; ವ್ಯಕ್ತಿ ಗಂಭೀರ Read More »

ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್

ಸಮಗ್ರ ನ್ಯೂಸ್: ಜಮೀನಿನ ವಿವಾದವನ್ನು ಬಗೆಹರಿಸಲು ಮಾತುಕತೆ ನಡೆಸಲು ತೆರಳಿದವರ ಮೇಲೆ ರೈತಸಂಘದ ಮುಖಂಡ ಶೂಟ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯನ್ನು ನಾರಾಯಣ್ ರಾಜ್ ಎಂದು ಗುರುತಿಸಲಾಗಿದೆ. ಮಾಕೋನಹಳ್ಳಿ ಗ್ರಾಮದ ರೈತ ಸಂಘದ ದುಗ್ಗಪ್ಪಗೌಡ ಹಾಗೂ ಮಂಚೇಗೌಡ ನಡುವೆ ಜಮೀನು ವಿವಾದವಿದ್ದು, ಮಂಚೇಗೌಡ ತಮ್ಮ ಜಮೀನನ್ನ ಮನೋಜ್ ಎಂಬುವರಿಗೆ ಮಾರಾಟ ಮಾಡಿದ್ದರು. ಮಂಚೇಗೌಡ ಅವರ ಜಮೀನು ಖರೀದಿಸಿದ ಮನೋಜ್ ಜಮೀನಿನ ಸರ್ವೇ ಕಾರ್ಯ ಮುಗಿಸಿದ್ದರು.

ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್ Read More »

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಯುವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕಂಕನಾಡಿ‌ ಎಂಬಲ್ಲಿ ನಡೆದಿದೆ. ಇಲ್ಲಿನ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ. ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ Read More »

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ Read More »

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!!

ಸಮಗ್ರ ನ್ಯೂಸ್: ರಜೆಯ ಮಜಾ ಸವಿಯಲು ಗೋವಾಕ್ಕೆ ಬಂದಿದ್ದ ಉಡುಪಿಯ ಯುವಕ ಆದಿತ್ಯ ಶೆಟ್ಟಿ (28) ಪಾಡಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.ಆದಿತ್ಯ ಶೆಟ್ಟಿ ಮೂಲತಃ ಉಡುಪಿಯವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಬಂದಿದ್ದು, ಪಾಡಿ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯುವಕನ ಶವವನ್ನು ಹೊರತೆಗೆದಾಗ ಆದಿತ್ಯ ಕಾಲಿಗೆ ಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ನೀರಿಗೆ ಇಳಿದ ಸಂದರ್ಭದಲ್ಲಿ ಕಾಲಿಗೆ ಹಾವು ಕಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಈ ಯುವಕರು

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!! Read More »

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ಮಾರುತಿ 800 ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ.ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ‌. ವೀರಯ್ಯ ಹಿರೇಮಠ್ ,ಸುಳ್ಯ ಪಿ.ಎಸ್.ಐ. ದಿಲೀಪ್ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದರು ಎನ್ನಲಾಗಿದ್ದು ಪತ್ನಿ, 1 ಗಂಡು ಹಾಗೂ 1 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಗೌರೀಶ ಪತ್ನಿ ಕಳೆದ ಎರಡು ತಿಂಗಳಿಂದ

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ Read More »

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್

ಸಮಗ್ರ ನ್ಯೂಸ್: ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ಜೆ.ಪಿ.ನಗರ 1ನೇ ಹಂತ,ಆಕ್ಸ್‌ಫರ್ಡ್ ಮೈದಾನದ ಬಳಿ ಸಾಗಾಟ ಮಾಡಿಕೊಂಡು ಬಂದು ಅನಧಿಕೃತವಾಗಿ ದ್ವಿಚಕ್ರ ವಾಹನದಲ್ಲಿ ಬಂದು ನಿದ್ರಾಜನಕ ಸಿರಪ್ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ಜಪ್ತಿ

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್ Read More »

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!!

ಸಮಗ್ರ ನ್ಯೂಸ್: ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾಗಿದ್ದು ಯಾಕೆ?: ಕ್ಯಾಬ್ ಚಾಲಕನಾಗಿದ್ದ

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!! Read More »