ಕ್ರೈಂ

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು […]

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ?

ಸಮಗ್ರ ನ್ಯೂಸ್: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಕಮೀಷನರೇಟ್ ನ್ಯಾಯಾಲಯಕ್ಕೆ 840 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಚಾರ್ಜ್ ಶೀಟ್ ನಲ್ಲಿನ ರಹಸ್ಯವೇನು?ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ? Read More »

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ

ಸಮಗ್ರ ನ್ಯೂಸ್: ಚಿರತೆಯ ಮುಖವನ್ನು ಬಳಸಿ ಗರ್ಭಿಣಿಯರಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಬಜಿಲಕೇರಿ ಅವರು ಫೇಸ್‌ಬುಕ್‌ನಲ್ಲಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ‌’ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪೋಸ್ಟ್ ಹಾಕಿದ್ದರು. ಇದು ಗರ್ಭಿಣಿಯರಿಗೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡುವ ಅವಮಾನವಾಗಿದೆ ಎಂದು ಎಡಪದವು ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿಂದೆ ಸುನೀಲ್ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ Read More »

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು

ಸಮಗ್ರ‌ ನ್ಯೂಸ್: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದ ಬಳಿಯ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟವನನ್ನು ತಡಲಗಿ ಗ್ರಾಮದ ರೈತ ಹನುಮಂತ ಈರಪ್ಪ ಹಡಪದ (45) ಎಂದು ಗುರುತಿಸಲಾಗಿದೆ. ಈತ ಅ.5 ರಂದು ಮನೆಯಿಂದ ಕುರಿಗಳನ್ನು ಮೇಯಿಸಲು ಹೋಗುವುದಾಗಿ ಹೇಳಿ ಕುರಿಗಳನ್ನು ದಡ್ಡಿಯಲ್ಲಿ ಬಿಟ್ಟು ಮರಳಿ ಬರುವಾಗ ಈ ಘಟನೆ ಸಂಭವಿಸಿದ್ದು, ಈತ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಕಾಲುವೆಯಲ್ಲಿ ನೀರು ಕುಡಿಯಲು ಹೋದ ವೇಳೆ ಮೂರ್ಛೆ ಬಂದು ಕಾಲು

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು Read More »

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿರುವ ಶಿರಗುಪ್ಪಿ ಶುಗರ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿದ್ದ ಪರಿಣಾಮವಾಗಿ ಕಾರ್ಮಿಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ದೀಲಿಪ ಚೋಟಿಲಾಲ ಯಾದವ್ ಎಂದು ತಿಳಿದು ಬಂದಿದೆ ಕಾಗವಾಡ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಕಾಗವಾಡ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು Read More »

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಸಮಗ್ರ ನ್ಯೂಸ್: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆಯಾದ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾ ರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ Read More »

ಹುಣಸೂರು: ಹಾವು ಕಚ್ಚಿ ರೈತ ಸಾವು

ಸಮಗ್ರ ನ್ಯೂಸ್: ಹುಣಸೂರು ತಾಲ್ಲೂಕಿನ ಉದ್ದೂರು ಗ್ರಾಮದ ನಂಜುಂಡೇಗೌಡ ಎಂಬವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಜುಂಡೇಗೌಡರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತರು ಪತ್ನಿಯರು, ಪುತ್ರರನ್ನು ಅಗಲಿದ್ದಾರೆ.

ಹುಣಸೂರು: ಹಾವು ಕಚ್ಚಿ ರೈತ ಸಾವು Read More »

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರಿನ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಈ ಪೂಜೆ ನಡೆದಿದೆ ಎನ್ನಲಾಗಿದ್ದು, ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪೂಜೆಯಲ್ಲಿ ಲಾಂಗ್, ಕತ್ತಿ, ಏರ್ ಗನ್ ಮೊದಲಾದವುಗಳನ್ನು ಇರಿಸಿ ಪೂಜೆ ಸಲ್ಲಿಸಲಾಗಿದ್ದು, ಇವುಗಳನ್ನು ಯಾರು ಬಳಸುತ್ತಿದ್ದರು ? ವಿಡಿಯೋ ನೋಡಿಯೂ ಪೊಲೀಸರು ಸುಮ್ಮನಿರುವುದು ಏಕೆ ಎಂಬ

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಜನಪ್ರಿಯ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ದಿವ್ಯಾ ಶ್ರೀಧರ್ ಇದೀಗ ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ‘ಸೇವಂತಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಚೆಲುವೆ ವೈವಾಹಿಕ ಜೀವನದ ಗುಟ್ಟು ರಟ್ಟು ಮಾಡಿದ್ದಾರೆ. ಪತಿ ಮೋಸ ಮಾಡುತ್ತಿದ್ದಾನೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮಿಳು ಸೀರಿಯಲ್‌ನಲ್ಲಿ ನಟಿಸುವಾಗ ದಿವ್ಯಾ ಶ್ರೀಧರ್‌ಗೆ ಆರ್ನವ್ ಪರಿಚಯ ಆಗಿದೆ. ದಿವ್ಯಾಳನ್ನು ಪ್ರೀತಿಸಬೇಕು ಎಂದು ಅಮ್ಜದ್ ​ಖಾನ್ ಎಂದು ನಿಜವಾದ ಹೆಸರನ್ನು ಹೇಳದೇ

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್ Read More »

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ!

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಇಂದಿಗೆ ಏಳು ದಿನಗಳಾಗಿವೆ. ಮೊದಲನೇ ದಿನದಿಂದಲೂ ಈವರೆಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೂಲಗಳ ಪ್ರಕಾರ 25 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎಂದು ಹೇಳಲಾಗುತ್ತಿದೆ. ಪ್ರತಿ ಪ್ರೇಕ್ಷಕನೂ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದರೆ, ಶಿವಮೊಗ್ಗದಲ್ಲಿ ವಿಕೃತ ಮನಸ್ಸಿನವರು ಅವಹೇಳನ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಕಾಂತಾರ ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದ್ದು, ಶಿವಮೊಗ್ಗದ ಗೋಡೆ ಗೋಡೆಗಳ ಮೇಲೆ ಕಾಂತಾರ ಸಿನಿಮಾದ ಪೋಸ್ಟರ್ ರಾರಾಜಿಸುತ್ತಿದೆ.

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ! Read More »