ಕ್ರೈಂ

ಬರ್ಬರವಾಗಿ ಕೊಲೆಯಾದ ಗ್ರಾ.ಪಂ ಪಿಡಿಒ| ಬೈಕ್ ತಡೆದು ಕಡಿದು ಕೊಂದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ‌ಲಿಂಗಸಗೂರು ತಾಲೂಕಿನ ಕೋಠಾ‌ ಗ್ರಾಮದಲ್ಲಿ ನಡೆದಿದೆ. ಪಿಡಿಓ ಗಜದಂಡಯ್ಯ ಸ್ವಾಮಿ ಅವರು ಬೈಕ್‌ನಲ್ಲಿ ಹೋಗಿದ್ದ ವೇಳೆ ತಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಹಂತಕರು ಬನ್ನಿ ಕೊಡುವ ನೆಪದಲ್ಲಿ ಗಜ ದಂಡಯ್ಯ ಸ್ವಾಮಿ ಅವರನ್ನು ನಿಲ್ಲಿಸಿ ಕೊಲೆ ಮಾಡಿರುವ ಶಂಕೆ ಇದೆ. ಗಜ ದಂಡಯ್ಯ ಅವರು ಬೈಕನ್ನು ರಸ್ತೆಯಲ್ಲಿ […]

ಬರ್ಬರವಾಗಿ ಕೊಲೆಯಾದ ಗ್ರಾ.ಪಂ ಪಿಡಿಒ| ಬೈಕ್ ತಡೆದು ಕಡಿದು ಕೊಂದ ದುಷ್ಕರ್ಮಿಗಳು Read More »

84 ಲಕ್ಷ ವಂಚಿಸಿ ಮ್ಯಾನೇಜರ್ ಎಸ್ಕೇಪ್; ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಕ್ಯಾಶಿಯರ್ ಆತ್ಮಹತ್ಯೆ!!

ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್​ನ ಕ್ಯಾಷಿಯರ್ ಕಲ್ಲೂಡಿ ಗ್ರಾಮದ ಸುನಿಲ್ ಕುಮಾರ್ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ವಾಟದಹೊಸಳ್ಳಿಯ ಕೆರೆ ಬಳಿ ನಡೆದಿದೆ. ಕಲ್ಲೂಡಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್​ ಮ್ಯಾನೇಜರ್ 84 ಲಕ್ಷ ರೂಪಾಯಿ ವಂಚಿಸಿ ಎಸ್ಕೇಪ್ ಆಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಎಸ್ಕೇಪ್ ಆಗಿರುವ ಮ್ಯಾನೇಜರ್ ಜೊತೆ ಸುನಿಲ್ ಬಾಗಿಯಾಗಿರುವ ಶಂಕೆ ಶುರುವಾಗಿದೆ. ವಂಚನೆ ಪ್ರಕರಣ ತನ್ನ ಮೇಲೆ ಬರುತ್ತೆ ಅಂತ

84 ಲಕ್ಷ ವಂಚಿಸಿ ಮ್ಯಾನೇಜರ್ ಎಸ್ಕೇಪ್; ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಕ್ಯಾಶಿಯರ್ ಆತ್ಮಹತ್ಯೆ!! Read More »

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ

ಸಮಗ್ರ ನ್ಯೂಸ್: ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೂರಿಸ್ಟ್ ಬಸ್‌ನಲ್ಲಿ ಒಟ್ಟು 42 ವಿದ್ಯಾರ್ಥಿಗಳಿದ್ದರು ಮತ್ತು ಕೆಎಸ್‌ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ Read More »

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಸಾಹಿತಿ ಶಿವರಾಮ ಕಾರಂತರ ಕಾರು ಚಾಲಕರಾಗಿದ್ದ ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102) ಅವರು ವಯೋಸಹಜ ಅಸೌಖ್ಯದಿಂದಾಗಿ ಇಂದು(ಅ.6) ಮುಂಜಾನೆ ನಿಧನರಾಗಿದ್ದಾರೆ. ಭಾರತದ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಳ್ಯ: ನೆಹರೂ, ಕಾರಂತರ ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಕೊರಂಬಡ್ಕ ಇನ್ನಿಲ್ಲ Read More »

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ

ಸಮಗ್ರ ನ್ಯೂಸ್: ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು ಹಲವರು ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು‌ ನಾಪತ್ತೆ Read More »

ಕಡಬ: ಬಾಲಕಿ ಮೇಲೆ‌ ಅತ್ಯಾಚಾರ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಕಡಬ ಠಾಣಾ ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ನೂಜಿಬಾಳ್ತಿಲದ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಮೊದಲೇ ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರಗಿನವನಾಗಿದ್ದು, ಆತನಿಗೆ ಸ್ಥಳೀಯ ಯುವಕನೊಬ್ಬ ಆಶ್ರಯ ನೀಡಿದ್ದ ಎನ್ನಲಾಗಿದೆ.

ಕಡಬ: ಬಾಲಕಿ ಮೇಲೆ‌ ಅತ್ಯಾಚಾರ; ಇಬ್ಬರ ಬಂಧನ Read More »

ಶಾಕಿಂಗ್ ನ್ಯೂಸ್: 10ರ ಬಾಲಕನಿಂದ 6 ವರ್ಷದ ಬಾಲಕಿಯ ಅತ್ಯಾಚಾರ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ದನದ ಕೊಟ್ಟಿಗೆಗೆ ಕರೆದೊಯ್ದು ಹತ್ತು ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದಿದೆ. ವಿಷಯ ತಿಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಘೈಟಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 6

ಶಾಕಿಂಗ್ ನ್ಯೂಸ್: 10ರ ಬಾಲಕನಿಂದ 6 ವರ್ಷದ ಬಾಲಕಿಯ ಅತ್ಯಾಚಾರ Read More »

ಕಂದಕಕ್ಕೆ ಉರುಳಿದ ಬಸ್| 25 ಮಂದಿ ದುರ್ಮರಣ

ಸಮಗ್ರ ನ್ಯೂಸ್ ನಿಯಂತ್ರಣ ತಪ್ಪಿದ ಬಸ್ಸೊಂದು 500 ಮೀಟರ್ ಆಳದ ಕಮರಿಗೆ ಉರುಳಿ 25 ಮಂದಿ ಸಾವನ್ನಪ್ಪಿದ್ದ ಘಟನೆ ಉತ್ತರಾಖಂಡ್ ನ ಪೌರಿಯಲ್ಲಿ‌ ನಡೆದಿದೆ. ಹರಿದ್ವಾರದ ಲಾಲ್ ಧಾಂಗ್ ನಿಂದ ಕಾರಾ ತಲ್ಲಾಗೆ ತೆರಳುತ್ತಿದ್ದ 50 ಮಂದಿ ಬರಾತಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಸಿಮ್ರಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ 500 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದಿದೆ. ರಾತ್ರಿ 8 ಗಂಟೆ ಸುಮಾರಿಗೆ ಬಿರೊಂಖಲ್ ನ ಸಿಎಂಡಿ ಬಳಿ ಅಪಘಾತ ಸಂಭವಿಸಿದೆ. ಇದರಲ್ಲಿ 25 ಜನರು ಸಾವನ್ನಪ್ಪಿದ್ದಾರೆ.

ಕಂದಕಕ್ಕೆ ಉರುಳಿದ ಬಸ್| 25 ಮಂದಿ ದುರ್ಮರಣ Read More »

ಮಂಗಳೂರು: ನಿಷೇಧದ ಹತಾಶೆ ನಡುವೆ ಪಿಎಫ್ಐನಿಂದ ರಸ್ತೆಯಲ್ಲಿ ಎಚ್ಚರಿಕೆ ಬರಹ

ಸಮಗ್ರ ನ್ಯೂಸ್: ಬ್ಯಾನ್ ಬೆನ್ನಲ್ಲೇ ರಸ್ತೆ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ. ಚಡ್ಡಿಗಳೇ ಎಚ್ಚರ -ಪಿಎಫ್‍ಐ ನಾವು ಮರಳಿ ಬರುತ್ತೇವೆ ಅಂತಾ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ಯಾರೋ ಕಿಡಿಗೇಡಿಗಳು ತಡ ರಾತ್ರಿ ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು,ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ನಿಷೇಧದ ಹತಾಶೆ ನಡುವೆ ಪಿಎಫ್ಐನಿಂದ ರಸ್ತೆಯಲ್ಲಿ ಎಚ್ಚರಿಕೆ ಬರಹ Read More »

ಸುಳ್ಯ: ಕಾರು-ಸ್ಕೂಟಿ ಅಪಘಾತ| ಅಣ್ಣ ಸ್ಥಳದಲ್ಲಿಯೇ ಸಾವು; ತಂಗಿ ಆಸ್ಪತ್ರೆಯಲ್ಲಿ ಕೊನೆಯುಸಿರು

ಸಮಗ್ರ ನ್ಯೂಸ್: ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮೃತಪಟ್ಟು ತಂಗಿ ಗಂಭೀರ ಗಾಯಗೊಂಡ ಘಟನೆ‌ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಲಿಮಲೆ ಸಮೀಪದ ‌ಜಬಳೆಯಲ್ಲಿ ನಡೆದಿದೆ. ಮೃತಪಟ್ಟ ಯುವಕ ನಿಶಾಂತ್ ಬಾಜಿನಡ್ಕ ಎಂದು ತಿಳಿದು ಬಂದಿದೆ. ನಿಶಾಂತ್ ತಂಗಿಯನ್ನು ಕರೆದುಕೊಂಡು ಎಲಿಮಲೆಯಿಂದ ಮನೆಗೆ ಹೋಗುತ್ತಿದ್ದಾಗ ಸುಳ್ಯ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕ ಸ್ಥಳದಲ್ಲಿಯೇ ಮೃತಪಟ್ಟರೆ , ತೀವ್ರ ಗಾಯಗೊಂಡ ನಿಶಾಂತ್ ನ

ಸುಳ್ಯ: ಕಾರು-ಸ್ಕೂಟಿ ಅಪಘಾತ| ಅಣ್ಣ ಸ್ಥಳದಲ್ಲಿಯೇ ಸಾವು; ತಂಗಿ ಆಸ್ಪತ್ರೆಯಲ್ಲಿ ಕೊನೆಯುಸಿರು Read More »