ಕ್ರೈಂ

ಸುಬ್ರಹ್ಮಣ್ಯ: ಸೇತುವೆ ಕೆಳಗೆ ಪತ್ತೆಯಾದ ದನದ ತಲೆ‌, ಕಳೇಬರ

ಸಮಗ್ರ ನ್ಯೂಸ್ಯ: ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಕಳೇಬರ ಪತ್ತೆಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕೊಪ್ಪಳಗದ್ದೆ ಎಂಬಲ್ಲಿ ನಡೆದಿದೆ. ಇಲ್ಲಿನ‌ ಸೇತುವೆಯ ಕೆಳಗೆ ಹಿಂದೆ ಕೂಡ ಈ ರೀತಿ ಘಟನೆ ನಡೆದಿದೆ ಎಂದು ಆ ಭಾಗದ ಜನರು ತಿಳಿಸಿದ್ದಾರೆ.‌ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಎಸ್.ಐ ಮಂಜುನಾಥ್ ಅವರು ಭೇಟಿ ನೀಡಿದ್ದು, ಪೋಲೀಸ್ ಇಲಾಖೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

ಸುಬ್ರಹ್ಮಣ್ಯ: ಸೇತುವೆ ಕೆಳಗೆ ಪತ್ತೆಯಾದ ದನದ ತಲೆ‌, ಕಳೇಬರ Read More »

ಸುಳ್ಯ: ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸಾವು

ಸಮಗ್ರ‌ನ್ಯೂಸ್: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ. ಘಟನೆಯಿಂದ ಸುಜಿತ್ ಎಂಬವರಿಗೆ ಗಂಭೀರ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸಾವು Read More »

ಪ್ರಿಯಕರನೊಂದಿಗೆ ಪರಾರಿಯಾದ ಮಗಳು| ತಂದೆ, ತಾಯಿ, ಸಹೋದರ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಿಯಕರನೊಂದಿಗೆ ಪರಾರಿಯಾದ ಮಗಳು| ತಂದೆ, ತಾಯಿ, ಸಹೋದರ ಆತ್ಮಹತ್ಯೆಗೆ ಶರಣು Read More »

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಸಿಬಿಐ ಆಕಸ್ಮಿಕ ಎಂದು ಹೇಳಿ ವರದಿ ಸಲ್ಲಿಸಿದೆ. ಇಂದು(ಅ. ೩) ಹೊನ್ನಾವರದ ಕೋರ್ಟ್ ಗೆ ವರದಿ ಸಲ್ಲಿಸಿರುವ ಸಿಬಿಐ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮುಹತ್ಯೆ ಅಲ್ಲ ಎಂದು ಹೇಳಿದೆ. ಏನಿದು ಪ್ರಕರಣ?ಕಳೆದ 2017ರ ಡಿಸೆಂಬರ್ ತಿಂಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು.

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ Read More »

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ

ಸಮಗ್ರ ನ್ಯೂಸ್: ಇನ್ನೂ ಬಾಳಿ ಬದುಕಬೇಕಾದ ಆ ಬಾಲಕಿಯೋರ್ವಳು ವಿಚಿತ್ರವಾದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಈಕೆಯ ಡೆತ್ ನೋಟ್ ವೈರಲ್ ಅಗ್ತಿದೆ. ಜಿಲ್ಲೆಯ ಸಿಂಧನೂತಿನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಸಾರಿಕಾಳ ಸಾವಿನಿಂದ ಊರಿನವರೆಲ್ಲ ದಿಗ್ಭ್ರಮೆಗೆ ಒಳಗಾಗಿದ್ದರು. ಆಕೆಯ ಮನೆಯವರು ಮಗಳನ್ನು ಕಳೆದುಕೊಂಡ ಶೋಕದಲ್ಲಿದ್ದ ಸಂದರ್ಭದಲ್ಲಿ ಆಕೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ ನೋಟ್ ಸಿಕ್ಕಿದೆ. ಆ ಪತ್ರ ನೋಡಿ ಎಲ್ಲರೂ

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ Read More »

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ

ಸಮಗ್ರ ನ್ಯೂಸ್: ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅ.2ರ ತಡರಾತ್ರಿ ಬೆಳಕಿಗೆ ಬಂದಿದೆ. ಸಿಕ್ಕಿಬಿದ್ದಾಕೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ Read More »

ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು

ಸಮಗ್ರ ನ್ಯೂಸ್ : ಭಾರೀ ಮಳೆಯಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪರಮೇಶ್ (45), ಜಯಮ್ಮ (39) ಹಾಗೂ ಪುತ್ರ ಭರತ್ (5) ಸಾವನ್ನಪ್ಪಿದ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು Read More »

ಮಂಗಳೂರು: ಕಾನ್ಸ್ ಟೇಬಲ್ ಗೆ ಡಿಕ್ಕಿ ಹೊಡೆದ ಕಾರು ಪರಾರಿ

ಸಮಗ್ರ ನ್ಯೂಸ್: ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಕಾನ್ಸ್​ಟೇಬಲ್​ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಕಾನ್ಸ್​ಟೇಬಲ್. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ತೊಕ್ಕೊಟ್ಟು ಕಡೆಯಿಂದ ಉಳ್ಳಾಲ ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್

ಮಂಗಳೂರು: ಕಾನ್ಸ್ ಟೇಬಲ್ ಗೆ ಡಿಕ್ಕಿ ಹೊಡೆದ ಕಾರು ಪರಾರಿ Read More »

ತಂಗಿಯ ಬೆತ್ತಲೆ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ| ಅವಳಣ್ಣ ಅವನನ್ನು ಮಾಡಿದ್ದೇನು?

ಸಮಗ್ರ ನ್ಯೂಸ್: ತಂಗಿಯ ಬೆತ್ತಲೆ ಫೋಟೋ ಇಟ್ಟುಕೊಂಡಿದ್ದ ಅಂತ ಬರ್ಬರವಾಗಿ ಕೊಂದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿ ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನಿಗೆ 50 ಬಾರಿ ಇರಿದು ಬರ್ಬರವಾಗಿ ಕೊಂದಿದ್ದಾನೆ. ದೊಡ್ಡಬಳ್ಳಾಫುರದ ನಂದಾ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡಿದ್ದ. ಅದೇ ವಿಚಾರಕ್ಕೆ ಕೊಲೆ ನಡೆದಿದೆ.

ತಂಗಿಯ ಬೆತ್ತಲೆ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ| ಅವಳಣ್ಣ ಅವನನ್ನು ಮಾಡಿದ್ದೇನು? Read More »

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….!

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್ಯ ಅಧಿಕಾರಿಗಳು ಜಿಲ್ಲೆ ಹಾಗೂ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಹೋರಾಟ ನಡೆಸಿದ್ದಾರೆ. ಬಲ್ಲಾಳರಾಯನದುರ್ಗದ ಸುತ್ತಮುತ್ತಲಿನ ಪ್ರದೇಶದ ಸೌಂದರ್ಯ ನೋಡೋ ಕಣ್ಗಳಿಗೆ ಹೊಸದೊಂದು ಪ್ರಪಂಚವನ್ನೇ ಉಣಬಡಿಸುವಂತಿದೆ. ಕಣ್ಣಿನ ದೃಷ್ಠಿ ಮುಗಿದರು ಹಚ್ಚಹಸಿರಿನ ಬೆಟ್ಟಗುಡ್ಡಗಳ ಸಾಲಿಗೆ ಕೊನೆ

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….! Read More »