ಕ್ರೈಂ

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಜಕಾರ್ತದಲ್ಲಿ ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಜಾವದ ಮಲಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿ, ಇಬ್ಬರು ಪೊಲೀಸರ ಸಹಿತ ಕನಿಷ್ಠ 127 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1ರ ಅರೆಮಾ ಎಫ್‌ಸಿ ಮತ್ತು ಪರ್ಸಬೆಯ ಸುರಬಯ ತಂಡದ ನಡುವೆ […]

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು Read More »

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ

ಸಮಗ್ರ ನ್ಯೂಸ್: ​​​​​​​ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸ್‌ವಾದ) ಪಕ್ಷದ ಹಿರಿಯ ಮುಖಂಡ, ಮಾಜಿ ರಾಜ್ಯ ಕಾರ್ಯದರ್ಶಿ ಕೋಡಿಯೇರಿ ಬಾಲಕೃಷ್ಣನ್‌ (68) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಬಾಲಕೃಷ್ಣನ್‌, 2019ರಿಂದಲೂ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೇರಳದ ಹಿರಿಯ ರಾಜಕೀಯ ನಾಯಕರಾಗಿದ್ದ ಬಾಲಕೃಷ್ಣನ್‌, ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯರಾಗಿದ್ದರು. ತಲಶ್ಯೇರಿ ವಿಧಾನಸಭೆಯಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಾಲಕೃಷ್ಣನ್‌, ವಿ. ಅಚ್ಯುತಾನಂದನ್‌ ಸರ್ಕಾರದಲ್ಲಿ (2006-11) ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಧಾನಸಭೆಯಲ್ಲಿ ಎರಡು ಬಾರಿ

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ Read More »

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸಮಗ್ರ ನ್ಯೂಸ್: ಎರಡು ವರ್ಷಗಳ ಕಾಲ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ ಕೇರಳ ಪೋಕ್ಸೊ ನ್ಯಾಯಾಲಯ 142 ವರ್ಷ ಜೈಲು ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ. ಅಪರಾಧಿಯು ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.ಅಂದರೆ ಸುಮಾರು 150 ವರ್ಷ ಜೈಲುವಾಸ ಅನುಭವಿಸಬೇಕಾಗುತ್ತದೆ. ಪೋಕ್ಸೊ ಕಾಯ್ದೆಯಡಿ ನೀಡಲಾದ ಗರಿಷ್ಠ ಶಿಕ್ಷೆ ಇದಾಗಿದೆ. ಅಪರಾಧಿ ಆನಂದನ್‌ ಪಿಆರ್‌

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »

ಸುಳ್ಯ: ಅಂಬೇಡ್ಕರ್ ಧ್ವಜ ತೆರವುಗೊಳಿಸಿದ ಪಿಡಿಒ/ಸರಿಗೊಳಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯಿಂದ ಪ್ರತಿಭಟನೆ ಎಚ್ಚರಿಕೆ

ಸಮಗ್ರ ನ್ಯೂಸ್: ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಧ್ವಜವನ್ನು ಪಿಡಿಒ ತೆರವುಗೊಳಿಸಿದ್ದು ಹಾಗಾಗಿ ಇದನ್ನು ತಕ್ಷಣ ಸರಿಗೊಳಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯಿಂದ ಪ್ರತಿಭಟನೆ ಎಚ್ಚರಿಕೆ ನೀಡಲಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಲಾದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಇತ್ತೀಚಿಗೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯವರು ಕಾರ್ಯಕ್ರಮಯೊಂದರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಧ್ವಜವನ್ನು ಆ ಸಮುದಾಯ ಕಟ್ಟಡದಲ್ಲಿ ಅಳವಡಿಸಿದ್ದರು. ಹೀಗೆ ಅಳವಡಿಸಿದಂತ ಧ್ವಜವನ್ನು ಏಕಾಏಕಿ ಅಜ್ಜಾವಾರ ಗ್ರಾಮ ಪಂಚಾಯತ್ ನ ಪಿಡಿಒ ತೆರವುಗೊಳಿಸಿದರೆ ಎಂದು ಆರೋಪ

ಸುಳ್ಯ: ಅಂಬೇಡ್ಕರ್ ಧ್ವಜ ತೆರವುಗೊಳಿಸಿದ ಪಿಡಿಒ/ಸರಿಗೊಳಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯಿಂದ ಪ್ರತಿಭಟನೆ ಎಚ್ಚರಿಕೆ Read More »

ದ.ಕ ಜಿಲ್ಲೆಯಲ್ಲಿ ಪಿಎಫ್ಐನಿಂದ ಉಗ್ರ ತರಬೇತಿ| ಮಾಹಿತಿ ಬಿಚ್ಚಿಟ್ಟ ಎನ್ಐಎ ಅಧಿಕಾರಿಗಳು

ಸಮಗ್ರ ನ್ಯೂಸ್: ಪಿಎಫ್‌ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ಮುಸ್ಲಿಂ ಯುವಕರಿಗೆ ಪಿಎಫ್‌ಐನಿಂದ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದ್ದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ‌ವಿವಿಧ ಕಡೆಗಳಲ್ಲಿ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸಮೀಪದ ಮಿತ್ತೂರಿನಲ್ಲಿರುವ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ

ದ.ಕ ಜಿಲ್ಲೆಯಲ್ಲಿ ಪಿಎಫ್ಐನಿಂದ ಉಗ್ರ ತರಬೇತಿ| ಮಾಹಿತಿ ಬಿಚ್ಚಿಟ್ಟ ಎನ್ಐಎ ಅಧಿಕಾರಿಗಳು Read More »

ಸುಳ್ಯ: ಕುರುಂಜಿಗುಡ್ಡೆ ಪಾರ್ಕ್ ನಲ್ಲಿ ಅವ್ಯವಸ್ಥೆ; ಪೊಲೀಸರಿಂದ ಗಸ್ತು

ಸಮಗ್ರ ನ್ಯೂಸ್: ಸುಳ್ಯ ನ.ಪಂ ವ್ಯಾಪ್ತಿಯ ಕುರುಂಜಿಗುಡ್ಡೆ ಪಾರ್ಕ್ ನಲ್ಲಿ ಅವ್ಯವಸ್ಥೆ ಕುರಿತು ‘ಸಮಗ್ರ ಸಮಾಚಾರ.ಕಾಂ’ ವರದಿ ಬೆನ್ನಲ್ಲೇ ಸುಳ್ಯ ಪೊಲೀಸರು ಗಸ್ತು ತಿರುಗಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಪಾರ್ಕ್ ನಲ್ಲಿ ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಸಮಾಚಾರವು ಸಾಕ್ಷಾತ್‌ವರದಿ ಮಾಡಿತ್ತು. ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಪಾರ್ಕ್ ಗೆ ಭೇಟಿ ನೀಡಿದೆ.

ಸುಳ್ಯ: ಕುರುಂಜಿಗುಡ್ಡೆ ಪಾರ್ಕ್ ನಲ್ಲಿ ಅವ್ಯವಸ್ಥೆ; ಪೊಲೀಸರಿಂದ ಗಸ್ತು Read More »

ಚಿಕ್ಕಮಗಳೂರು: ಆರ್.ಎಸ್.ಎಸ್ ಕಾರ್ಯಕರ್ತನ ಕಾರಿನ ಮೇಲೆ ಬರಹ| ಇಬ್ಬರು ಅಪ್ರಾಪ್ತರ ಬಂಧನ

ಸಮಗ್ರ ನ್ಯೂಸ್: ಆರ್ ಎಸ್ಎಸ್‌ ಕಾರ್ಯಕರ್ತ ಕಡೂರಿನ ಡಾ. ಶಶಿಧರ್ ಚಿಂದಿಗೆರೆ ಅವರ ಕಾರಿನ ಮೇಲೆ ಕ್ಷುಲ್ಲಕ ಬರವಣಿಗೆ ಬರೆದ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸರು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ. ಕಾರಿನ ಮೇಲೆ ‘ಕಿಲ್ ಯೂ, ಜಿಹಾದಿ ಹಾಗೂ ಇನ್ನಿತರ ಅಶ್ಲೀಲ ಬರಹಗಳನ್ನು ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಸೆ.29ರಂದು ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೂತನ ಮಾದರಿಯ ಕಾರು ಇದಾಗಿದ್ದು, ಇಂತಹ ಕಾರು ಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲ್ಲಿನಲ್ಲಿ ಬರಹ ಗೀಚಿರುವುದಾಗಿ ಪ್ರಾಥಮಿಕ ತನಿಖೆಯಿಂದ

ಚಿಕ್ಕಮಗಳೂರು: ಆರ್.ಎಸ್.ಎಸ್ ಕಾರ್ಯಕರ್ತನ ಕಾರಿನ ಮೇಲೆ ಬರಹ| ಇಬ್ಬರು ಅಪ್ರಾಪ್ತರ ಬಂಧನ Read More »

ಕೊಟ್ಟಿಗೆಹಾರ: ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸ್ ದಾಳಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಎಂಬಲ್ಲಿ ಬಾಳೂರು ಪೊಲೀಸರು ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು ಕಳ್ಳಬಟ್ಟಿ ಹಾಗೂ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮಲೆ ಮನೆ ಗ್ರಾಮದ ಸುರೇಶ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಬಾಳೂರು ಠಾಣಾಧಿಕಾರಿ ಪವನ್ ಹಾಗೂ ಸಿಬ್ಬಂದಿ ಸುರೇಶ ಎಂಬವರು ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.ಈ ವೇಳೆ 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಬಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂದಿಸಿದ್ದಾರೆ.

ಕೊಟ್ಟಿಗೆಹಾರ: ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸ್ ದಾಳಿ Read More »

ಕ್ಷುಲ್ಲಕ ಕಾರಣಕ್ಕೆ ಗೆಳತಿಯ ಗುಂಡಿಕ್ಕಿ ಕೊಂದ| ಪರಾರಿಯಾಗಲು ಯತ್ನಿಸಿದವನ ಪ್ರಾಣ ಕಸಿದ ವಿಧಿ

ಸಮಗ್ರ ನ್ಯೂಸ್: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಂದ ಘಟನೆ ಮುಂಬೈನ ಬೋಯ್ಸರ್ ಎಂಬಲ್ಲಿ ನಡೆದಿದ್ದು, ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಟೀಮಾ ಆಸ್ಪತ್ರೆಯ ಬಳಿ ಶ್ರೀಕೃಷ್ಣ ಯಾದವ್‌ ಮತ್ತವನ ಪ್ರೇಯಸಿ ನೇಹಾ ಮಹತೋ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಸಿಟ್ಟಿಗೆದ್ದ ಯಾದವ್‌ ತನ್ನ ಜೇಬಿನಿಂದ ಪಿಸ್ತೂಲ್‌ ತೆಗೆದು ನೇಹಾಗೆ ಗುಂಡು ಹಾರಿಸಿದ್ದಾನೆ. ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ಸಾರ್ವಜನಿಕರ ಕೈಗೆ ಸಿಕ್ಕಿ ಬೀಳುವ ಭಯದಲ್ಲಿ ಆರೋಪಿ ಶ್ರೀಕೃಷ್ಣ ಯಾದವ್‌ ಅಲ್ಲಿಂದ

ಕ್ಷುಲ್ಲಕ ಕಾರಣಕ್ಕೆ ಗೆಳತಿಯ ಗುಂಡಿಕ್ಕಿ ಕೊಂದ| ಪರಾರಿಯಾಗಲು ಯತ್ನಿಸಿದವನ ಪ್ರಾಣ ಕಸಿದ ವಿಧಿ Read More »

ಮಂಗಳೂರು: ಇನ್ನೂ ಪತ್ತೆಯಾಗದ ಕಾಲೇಜು ಡೀನ್

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನ ಡೀನ್ ಅವರು ಸೆಪ್ಟೆಂಬರ್ 25ರಂದು ನಾಪತ್ತೆಯಾಗಿದ್ದರು. ಆದರೆ ಅವರು ಇನ್ನೂ ಪತ್ತೆ ಆಗಿಲ್ಲ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಾ.ಅರ್ಬನ್ ಜೆ ಅರ್ನಾಲ್ಡ್ ಡಿಸೋಜಾ ಅವರು ಭಾನುವಾರ ಬೇಗನೆ ಮನೆಗೆ ಬುರುತ್ತೇನೆ ಎಂದು ಹೇಳಿ ಹಿಂತಿರುಗಿ ಬರಲೇ ಇಲ್ಲ ಎಂದು ದೂರಿನಲ್ಲಿ ದಾಖಲಾಗಿದೆ. ವೆಲೆನ್ಸಿಯಾದಲ್ಲಿನ ಅವರ ಮನೆಯಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ವಿವಿಧ ಮೂಲಗಳ ಪ್ರಕಾರ, ಡಾ.ಡಿಸೋಜಾ ಅವರು ತಮ್ಮ ಹೆಂಡತಿಗೆ ಹತ್ತಿರದ

ಮಂಗಳೂರು: ಇನ್ನೂ ಪತ್ತೆಯಾಗದ ಕಾಲೇಜು ಡೀನ್ Read More »