ಕ್ರೈಂ

ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್

ಸಮಗ್ರ ನ್ಯೂಸ್: ಜಮೀನಿನ ವಿವಾದವನ್ನು ಬಗೆಹರಿಸಲು ಮಾತುಕತೆ ನಡೆಸಲು ತೆರಳಿದವರ ಮೇಲೆ ರೈತಸಂಘದ ಮುಖಂಡ ಶೂಟ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯನ್ನು ನಾರಾಯಣ್ ರಾಜ್ ಎಂದು ಗುರುತಿಸಲಾಗಿದೆ. ಮಾಕೋನಹಳ್ಳಿ ಗ್ರಾಮದ ರೈತ ಸಂಘದ ದುಗ್ಗಪ್ಪಗೌಡ ಹಾಗೂ ಮಂಚೇಗೌಡ ನಡುವೆ ಜಮೀನು ವಿವಾದವಿದ್ದು, ಮಂಚೇಗೌಡ ತಮ್ಮ ಜಮೀನನ್ನ ಮನೋಜ್ ಎಂಬುವರಿಗೆ ಮಾರಾಟ ಮಾಡಿದ್ದರು. ಮಂಚೇಗೌಡ ಅವರ ಜಮೀನು ಖರೀದಿಸಿದ ಮನೋಜ್ ಜಮೀನಿನ ಸರ್ವೇ ಕಾರ್ಯ ಮುಗಿಸಿದ್ದರು. […]

ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್ Read More »

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಯುವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಕಂಕನಾಡಿ‌ ಎಂಬಲ್ಲಿ ನಡೆದಿದೆ. ಇಲ್ಲಿನ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ. ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಯುವದಂಪತಿ ನೇಣು ಬಿಗಿದ‌ ಸ್ಥಿತಿಯಲ್ಲಿ ಪತ್ತೆ Read More »

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಸಮಗ್ರ ನ್ಯೂಸ್: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ(ಅ10) ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು. ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜವಾದಿ ಪಕ್ಷ ಸಂಸ್ಥಾಪಕ, ಉ.ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ Read More »

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!!

ಸಮಗ್ರ ನ್ಯೂಸ್: ರಜೆಯ ಮಜಾ ಸವಿಯಲು ಗೋವಾಕ್ಕೆ ಬಂದಿದ್ದ ಉಡುಪಿಯ ಯುವಕ ಆದಿತ್ಯ ಶೆಟ್ಟಿ (28) ಪಾಡಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.ಆದಿತ್ಯ ಶೆಟ್ಟಿ ಮೂಲತಃ ಉಡುಪಿಯವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಬಂದಿದ್ದು, ಪಾಡಿ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯುವಕನ ಶವವನ್ನು ಹೊರತೆಗೆದಾಗ ಆದಿತ್ಯ ಕಾಲಿಗೆ ಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ನೀರಿಗೆ ಇಳಿದ ಸಂದರ್ಭದಲ್ಲಿ ಕಾಲಿಗೆ ಹಾವು ಕಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಈ ಯುವಕರು

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!! Read More »

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ಮಾರುತಿ 800 ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ.ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ‌. ವೀರಯ್ಯ ಹಿರೇಮಠ್ ,ಸುಳ್ಯ ಪಿ.ಎಸ್.ಐ. ದಿಲೀಪ್ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದರು ಎನ್ನಲಾಗಿದ್ದು ಪತ್ನಿ, 1 ಗಂಡು ಹಾಗೂ 1 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಗೌರೀಶ ಪತ್ನಿ ಕಳೆದ ಎರಡು ತಿಂಗಳಿಂದ

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ Read More »

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್

ಸಮಗ್ರ ನ್ಯೂಸ್: ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ಜೆ.ಪಿ.ನಗರ 1ನೇ ಹಂತ,ಆಕ್ಸ್‌ಫರ್ಡ್ ಮೈದಾನದ ಬಳಿ ಸಾಗಾಟ ಮಾಡಿಕೊಂಡು ಬಂದು ಅನಧಿಕೃತವಾಗಿ ದ್ವಿಚಕ್ರ ವಾಹನದಲ್ಲಿ ಬಂದು ನಿದ್ರಾಜನಕ ಸಿರಪ್ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ಜಪ್ತಿ

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್ Read More »

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!!

ಸಮಗ್ರ ನ್ಯೂಸ್: ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾಗಿದ್ದು ಯಾಕೆ?: ಕ್ಯಾಬ್ ಚಾಲಕನಾಗಿದ್ದ

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!! Read More »

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ Read More »

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ?

ಸಮಗ್ರ ನ್ಯೂಸ್: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಕಮೀಷನರೇಟ್ ನ್ಯಾಯಾಲಯಕ್ಕೆ 840 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆಎಂಎಫ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಚಾರ್ಜ್ ಶೀಟ್ ನಲ್ಲಿನ ರಹಸ್ಯವೇನು?ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ

ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ‌ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ? Read More »

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ

ಸಮಗ್ರ ನ್ಯೂಸ್: ಚಿರತೆಯ ಮುಖವನ್ನು ಬಳಸಿ ಗರ್ಭಿಣಿಯರಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಬಜಿಲಕೇರಿ ಅವರು ಫೇಸ್‌ಬುಕ್‌ನಲ್ಲಿ ಗರ್ಭಿಣಿಯ ಫೋಟೋಗೆ ಚೀತಾದ ಮುಖ ಎಡಿಟ್ ಮಾಡಿ ‌’ನಮೀಬಿಯಾ ಚೀತಾಗೆ ಸೀಮಂತ ಯಾವಾಗ?’ ಎಂದು ಪೋಸ್ಟ್ ಹಾಕಿದ್ದರು. ಇದು ಗರ್ಭಿಣಿಯರಿಗೆ ಮತ್ತು ಭಾರತೀಯ ಸಂಸ್ಕೃತಿಗೆ ಮಾಡುವ ಅವಮಾನವಾಗಿದೆ ಎಂದು ಎಡಪದವು ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿಂದೆ ಸುನೀಲ್ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ

ಮಂಗಳೂರು: ಗರ್ಭಿಣಿಯರಿಗೆ ಅವಹೇಳನ| ಮತ್ತೊಮ್ಮೆ ಸುನಿಲ್ ಬಜಿಲಕೇರಿ ಬಂಧನ Read More »