ಕ್ರೈಂ

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು

ಸಮಗ್ರ‌ ನ್ಯೂಸ್: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದ ಬಳಿಯ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟವನನ್ನು ತಡಲಗಿ ಗ್ರಾಮದ ರೈತ ಹನುಮಂತ ಈರಪ್ಪ ಹಡಪದ (45) ಎಂದು ಗುರುತಿಸಲಾಗಿದೆ. ಈತ ಅ.5 ರಂದು ಮನೆಯಿಂದ ಕುರಿಗಳನ್ನು ಮೇಯಿಸಲು ಹೋಗುವುದಾಗಿ ಹೇಳಿ ಕುರಿಗಳನ್ನು ದಡ್ಡಿಯಲ್ಲಿ ಬಿಟ್ಟು ಮರಳಿ ಬರುವಾಗ ಈ ಘಟನೆ ಸಂಭವಿಸಿದ್ದು, ಈತ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಕಾಲುವೆಯಲ್ಲಿ ನೀರು ಕುಡಿಯಲು ಹೋದ ವೇಳೆ ಮೂರ್ಛೆ ಬಂದು ಕಾಲು […]

ವಿಜಯಪುರ: ಕಾಲುವೆಯಲ್ಲಿ ‌ಮುಳುಗಿ ವ್ಯಕ್ತಿ ಸಾವು Read More »

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿರುವ ಶಿರಗುಪ್ಪಿ ಶುಗರ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಬಿದ್ದ ಪರಿಣಾಮವಾಗಿ ಕಾರ್ಮಿಕನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ದೀಲಿಪ ಚೋಟಿಲಾಲ ಯಾದವ್ ಎಂದು ತಿಳಿದು ಬಂದಿದೆ ಕಾಗವಾಡ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಕಾಗವಾಡ ಪೋಲಿಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕ್ರೇನ್ ಬಿದ್ದು ಸಕ್ಕರೆ ಕಾರ್ಖಾನೆ ಕಾರ್ಮಿಕ ಸಾವು Read More »

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಸಮಗ್ರ ನ್ಯೂಸ್: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆಯಾದ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾ ರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಎಂಬವರ ಮನೆಯ ಎದುರುಗಡೆ ಗೇಟಿನ ಹೊರಗಡೆ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿ ಮಗು ಪತ್ತೆಯಾಗಿದೆ. ಮನೆಮಂದಿ ಬೆಳಿಗ್ಗೆ ಏಳುವಾಗ ಮಗು ಕೂಗುತ್ತಿರುವುದನ್ನು ಗಮನಿಸಿ ಹೊರಹೋದಾಗ ಕಾರಿನ ಕೆಳಗಡೆ ಬಿಳಿ ಬಟ್ಟೆ ಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಒಂದು ದಿನದ ಮಗು ಪತ್ತೆಯಾಗಿದೆ. ಕೂಡಲೇ ಮನೆಮಂದಿ ಉಪಚರಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ

ಮಂಗಳೂರು: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ Read More »

ಹುಣಸೂರು: ಹಾವು ಕಚ್ಚಿ ರೈತ ಸಾವು

ಸಮಗ್ರ ನ್ಯೂಸ್: ಹುಣಸೂರು ತಾಲ್ಲೂಕಿನ ಉದ್ದೂರು ಗ್ರಾಮದ ನಂಜುಂಡೇಗೌಡ ಎಂಬವರು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಜುಂಡೇಗೌಡರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಮೃತರು ಪತ್ನಿಯರು, ಪುತ್ರರನ್ನು ಅಗಲಿದ್ದಾರೆ.

ಹುಣಸೂರು: ಹಾವು ಕಚ್ಚಿ ರೈತ ಸಾವು Read More »

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಆಯುಧ ಪೂಜೆಯಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದು, ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರಿನ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಈ ಪೂಜೆ ನಡೆದಿದೆ ಎನ್ನಲಾಗಿದ್ದು, ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪೂಜೆಯಲ್ಲಿ ಲಾಂಗ್, ಕತ್ತಿ, ಏರ್ ಗನ್ ಮೊದಲಾದವುಗಳನ್ನು ಇರಿಸಿ ಪೂಜೆ ಸಲ್ಲಿಸಲಾಗಿದ್ದು, ಇವುಗಳನ್ನು ಯಾರು ಬಳಸುತ್ತಿದ್ದರು ? ವಿಡಿಯೋ ನೋಡಿಯೂ ಪೊಲೀಸರು ಸುಮ್ಮನಿರುವುದು ಏಕೆ ಎಂಬ

ಆಯುಧ ಪೂಜೆಯಂದು ಮಾರಕಾಸ್ತ್ರಗಳಿಗೆ ಭಜರಂಗದಳದಿಂದ ಪೂಜೆ| ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಜನಪ್ರಿಯ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ದಿವ್ಯಾ ಶ್ರೀಧರ್ ಇದೀಗ ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ‘ಸೇವಂತಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಚೆಲುವೆ ವೈವಾಹಿಕ ಜೀವನದ ಗುಟ್ಟು ರಟ್ಟು ಮಾಡಿದ್ದಾರೆ. ಪತಿ ಮೋಸ ಮಾಡುತ್ತಿದ್ದಾನೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮಿಳು ಸೀರಿಯಲ್‌ನಲ್ಲಿ ನಟಿಸುವಾಗ ದಿವ್ಯಾ ಶ್ರೀಧರ್‌ಗೆ ಆರ್ನವ್ ಪರಿಚಯ ಆಗಿದೆ. ದಿವ್ಯಾಳನ್ನು ಪ್ರೀತಿಸಬೇಕು ಎಂದು ಅಮ್ಜದ್ ​ಖಾನ್ ಎಂದು ನಿಜವಾದ ಹೆಸರನ್ನು ಹೇಳದೇ

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್ Read More »

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ!

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಇಂದಿಗೆ ಏಳು ದಿನಗಳಾಗಿವೆ. ಮೊದಲನೇ ದಿನದಿಂದಲೂ ಈವರೆಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೂಲಗಳ ಪ್ರಕಾರ 25 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಆಗಿದೆ ಎಂದು ಹೇಳಲಾಗುತ್ತಿದೆ. ಪ್ರತಿ ಪ್ರೇಕ್ಷಕನೂ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದರೆ, ಶಿವಮೊಗ್ಗದಲ್ಲಿ ವಿಕೃತ ಮನಸ್ಸಿನವರು ಅವಹೇಳನ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಕಾಂತಾರ ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದ್ದು, ಶಿವಮೊಗ್ಗದ ಗೋಡೆ ಗೋಡೆಗಳ ಮೇಲೆ ಕಾಂತಾರ ಸಿನಿಮಾದ ಪೋಸ್ಟರ್ ರಾರಾಜಿಸುತ್ತಿದೆ.

‘ಕಾಂತಾರ’ ಸಿನಿಮಾ ಪೋಸ್ಟರ್ ಮೇಲೆ ವಿಕೃತ ಕೃತ್ಯ ಎಸಗಿದ ಕಿಡಿಗೇಡಿಗಳು| ಶಿವಮೊಗ್ಗದಲ್ಲಿ ದೇವರಿಗೆ ಆಯ್ತು ಅವಹೇಳನ! Read More »

ಬರ್ಬರವಾಗಿ ಕೊಲೆಯಾದ ಗ್ರಾ.ಪಂ ಪಿಡಿಒ| ಬೈಕ್ ತಡೆದು ಕಡಿದು ಕೊಂದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ‌ಲಿಂಗಸಗೂರು ತಾಲೂಕಿನ ಕೋಠಾ‌ ಗ್ರಾಮದಲ್ಲಿ ನಡೆದಿದೆ. ಪಿಡಿಓ ಗಜದಂಡಯ್ಯ ಸ್ವಾಮಿ ಅವರು ಬೈಕ್‌ನಲ್ಲಿ ಹೋಗಿದ್ದ ವೇಳೆ ತಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಹಂತಕರು ಬನ್ನಿ ಕೊಡುವ ನೆಪದಲ್ಲಿ ಗಜ ದಂಡಯ್ಯ ಸ್ವಾಮಿ ಅವರನ್ನು ನಿಲ್ಲಿಸಿ ಕೊಲೆ ಮಾಡಿರುವ ಶಂಕೆ ಇದೆ. ಗಜ ದಂಡಯ್ಯ ಅವರು ಬೈಕನ್ನು ರಸ್ತೆಯಲ್ಲಿ

ಬರ್ಬರವಾಗಿ ಕೊಲೆಯಾದ ಗ್ರಾ.ಪಂ ಪಿಡಿಒ| ಬೈಕ್ ತಡೆದು ಕಡಿದು ಕೊಂದ ದುಷ್ಕರ್ಮಿಗಳು Read More »

84 ಲಕ್ಷ ವಂಚಿಸಿ ಮ್ಯಾನೇಜರ್ ಎಸ್ಕೇಪ್; ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಕ್ಯಾಶಿಯರ್ ಆತ್ಮಹತ್ಯೆ!!

ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್​ನ ಕ್ಯಾಷಿಯರ್ ಕಲ್ಲೂಡಿ ಗ್ರಾಮದ ಸುನಿಲ್ ಕುಮಾರ್ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ವಾಟದಹೊಸಳ್ಳಿಯ ಕೆರೆ ಬಳಿ ನಡೆದಿದೆ. ಕಲ್ಲೂಡಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್​ ಮ್ಯಾನೇಜರ್ 84 ಲಕ್ಷ ರೂಪಾಯಿ ವಂಚಿಸಿ ಎಸ್ಕೇಪ್ ಆಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಎಸ್ಕೇಪ್ ಆಗಿರುವ ಮ್ಯಾನೇಜರ್ ಜೊತೆ ಸುನಿಲ್ ಬಾಗಿಯಾಗಿರುವ ಶಂಕೆ ಶುರುವಾಗಿದೆ. ವಂಚನೆ ಪ್ರಕರಣ ತನ್ನ ಮೇಲೆ ಬರುತ್ತೆ ಅಂತ

84 ಲಕ್ಷ ವಂಚಿಸಿ ಮ್ಯಾನೇಜರ್ ಎಸ್ಕೇಪ್; ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಕ್ಯಾಶಿಯರ್ ಆತ್ಮಹತ್ಯೆ!! Read More »

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ

ಸಮಗ್ರ ನ್ಯೂಸ್: ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಟೂರಿಸ್ಟ್ ಬಸ್‌ನಲ್ಲಿ ಒಟ್ಟು 42 ವಿದ್ಯಾರ್ಥಿಗಳಿದ್ದರು ಮತ್ತು ಕೆಎಸ್‌ಆ​ರ್​ಟಿಸಿ ಬಸ್​ನಲ್ಲಿ 49 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್

ಪಾಲಕ್ಕಾಡ್: ಭೀಕರ ಅಪಘಾತಕ್ಕೆ 9 ಮಂದಿ ಬಲಿ| ಹಲವರು ಗಂಭೀರ Read More »