ಕ್ರೈಂ

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!!

ಸಮಗ್ರ ನ್ಯೂಸ್: ಹಾಸ್ಟೆಲ್ ನಲ್ಲಿನ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ರೀತಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ವೈದ್ಯನೊಬ್ಬನ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮಧುರೈನ ಪಿಜಿಯಲ್ಲಿ ವಾಸವಿದ್ದು, ಇದೇ ಪಿಜಿಯಲ್ಲಿದ್ದ ಇತರ ಮಹಿಳೆಯರ ಸ್ನಾನ ಮಾಡುವ, ಬಟ್ಟೆ ಬದಲಿಸುವ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿ ಅದನ್ನು ತನ್ನ ಪ್ರಿಯಕರನಾಗಿದ್ದ ವೈದ್ಯನಿಗೆ ಕಳುಹಿಸಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ರಾಮನಾಥಪುರಂನ ವೈದ್ಯ ಆಶಿಕ್ […]

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!! Read More »

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ತೀರ್ಥಪ್ರಸಾದ್(25) ಎಂದು ಗುರುತಿಸಲಾಗಿದೆ. ಬಾಲಕಿಗೆ ಕಳೆದ 4 ತಿಂಗಳ ಹಿಂದೆ ವಾಟ್ಸಪ್ ಗ್ರೂಪ್‌ನಲ್ಲಿ ಉಬರಡ್ಕದ ತೀರ್ಥಪ್ರಸಾದ್ ಎಂಬವನ ಪರಿಚಯವಾಗಿದ್ದು, ಬಾಲಕಿಗೆ ತೀರ್ಥಪ್ರಸಾದ್ ಕರೆ ಮಾಡಿ ಇಬ್ಬರು ಪರಸ್ಪರ ಮಾತನಾಡಿಕೊಂಡಿದ್ದು ಜೂ.30 ರಂದು ಸುಳ್ಯಕ್ಕೆ ಬಾ ಮಾತನಾಡಲಿಕ್ಕಿದೆ ಎಂದು ಹೇಳಿದ

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು Read More »

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ

ಸುರತ್ಕಲ್: ಇಲ್ಲಿನ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತು ಆತನ ಪತ್ನಿ ಪರಿಸರದ ಜನರಿಗೆ ಕೋಟ್ಯಂತರ ರೂಪಾಯಿಗೂ ಅಧಿಕ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು, ಸುರತ್ಕಲ್ ನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್, ಪತ್ನಿ ವಿದ್ಯಾವತಿ ಭಟ್, ಮಗಳು ಪ್ರಿಯಾಂಕಾ ಭಟ್ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ Read More »

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

ಸಮಗ್ರ ನ್ಯೂಸ್: ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಹೋದ ಲಾರಿಯೊಂದು ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅತಿವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ. ಈ ವೇಳೆ ಲಾರಿಯಲ್ಲಿ ಮರದ ದಿಮ್ಮಿಗಳು ತುಂಬಿದ್ದರಿಂದ ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ ಕುಸಿದಿದೆ. ಈ ಮನೆಯಲ್ಲಿ ಯಾರೂ

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ Read More »

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ

ತಿರುವನಂತಪುರಂ: ಕೇರಳ ರಾಜ್ಯ ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ, ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು ದೇವರ ನಾಡು ತೀವ್ರವಾದಿ ಅಂಶಗಳಲ್ಲಿ ‘ಹಾಟ್‌ ಸ್ಪಾಟ್‌‘ ಆಗಿದೆ. ಇಲ್ಲಿ ನಾಗರಿಕರ ಬದುಕು ಸುರಕ್ಷಿತವಾಗಿಲ್ಲ ಎಂದು ನಡ್ಡಾ ಹೇಳಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬ ಕೂಡ ಸರ್ಕಾರದಲ್ಲಿ ತೊಡಗಿಕೊಂಡಿದೆ. ಅವರ ಮಗಳು ಮತ್ತು ಅಳಿಯ ಸರ್ಕಾರದಲ್ಲಿ ಹಸ್ತಾಕ್ಷೇಪ

ಕೇರಳ ಭಯೋತ್ಪಾದನೆಯ ‘ಹಾಟ್ ಸ್ಪಾಟ್‘: ಜೆ.ಪಿ ನಡ್ಡಾ Read More »

ಪ್ರಧಾನಿ ಮೋದಿ ಹತ್ಯೆಗೆ ಸ್ಕೆಚ್ ಹಾಕಿತ್ತಾ ಪಿಎಫ್ಐ!? | ವಿಚಾರಣೆ ಸಂದರ್ಭದಲ್ಲಿ ಆ ಮುಖಂಡ ಬಾಯ್ಬಿಟ್ಟ ಸತ್ಯಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ…

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದಷ್ಟೇ ಎನ್.ಐ.ಎ, ಇ.ಡಿ ಮತ್ತು ಸ್ಥಳೀಯ ಪೊಲೀಸರ ತಂಡ 15 ದೇಶದ ವಿವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಪಿ.ಎಫ್.ಐ ಸಂಘಟನೆಯ ಮುಖಂಡರು, ಚಟುವಟಿಕೆಗಳು, ಸ್ವತ್ತುಗಳನ್ನು‌ ಗುರಿಯಾಗಿಸಿ ದಾಳಿ ನಡೆಸಿತ್ತು‌. ಆಪರೇಶನ್ ಆಕ್ಟೋಪಸ್ ಹೆಸರಿನಲ್ಲಿ ಸುಮಾರು 90 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಿದ ಈ ದಾಳಿಯಲ್ಲಿ ಸಂಘಟನೆಯ ಮುಖಂಡರನ್ನು ಬಂಧಿಸಲಾಗಿತ್ತು. ಈ ಬಂಧಿತರ ವಿಚಾರಣೆ ಸಂದರ್ಭ ಸ್ಫೋಟಕ ಮಾಹಿತಿಯೊಂದು ಹೊರ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಹಾರ ಭೇಟಿ ವೇಳೆ ಕೋಮು ದಂಗೆ ಸೃಷ್ಟಿಸಿ

ಪ್ರಧಾನಿ ಮೋದಿ ಹತ್ಯೆಗೆ ಸ್ಕೆಚ್ ಹಾಕಿತ್ತಾ ಪಿಎಫ್ಐ!? | ವಿಚಾರಣೆ ಸಂದರ್ಭದಲ್ಲಿ ಆ ಮುಖಂಡ ಬಾಯ್ಬಿಟ್ಟ ಸತ್ಯಗಳೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ… Read More »

ವಿಧವೆಗೆ ಬಾಳು ಕೊಡಲು ಬಂದಾತ ನೇಣಿಗೆ ಶರಣಾದ| ಕಂಟ್ರೋಲ್ ಗೆ ಸಿಗದ ಪ್ರೀತಿಗೆ ಮತ್ತೊಬ್ಬನಾದನೇ ವಿಲನ್?

ಸಮಗ್ರ ನ್ಯೂಸ್: ವಿಧವೆಯ ಮನೆಗೆ ಬಂದ ಗಂಡನ ಸ್ನೇಹಿತನೋರ್ವ, ಆಕೆಗೆ ಬಾಳು ನೀಡುತ್ತೇನೆ ಅಂತ ಆಕೆಯನ್ನು ಪ್ರೀತಿಸಿ ಕೊನೆಗೆ ಆಕೆಯನ್ನು ಕಂಟ್ರೋಲ್ ಮಾಡಲು ನೋಡಿದಾಗ ಆಕೆ ಆತ ಹೇಳಿದ ಹಾಗೆ ಕೇಳಲಿಲ್ಲ ಅಂತ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ 15 ನೇ ವಾರ್ಡ್ ಬಡಾವಣೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರ ಸಭೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸುಮಾ ಎಂಬಾಕೆಯ ಪತಿ ಕಳೆದ ವರ್ಷ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ನಂತರ ಗಂಡ ಸತ್ತ ಮೇಲೆ ಸುಮಾಗೆ

ವಿಧವೆಗೆ ಬಾಳು ಕೊಡಲು ಬಂದಾತ ನೇಣಿಗೆ ಶರಣಾದ| ಕಂಟ್ರೋಲ್ ಗೆ ಸಿಗದ ಪ್ರೀತಿಗೆ ಮತ್ತೊಬ್ಬನಾದನೇ ವಿಲನ್? Read More »

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ!

ಸಮಗ್ರ ನ್ಯೂಸ್: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದೆ. ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸುತ್ತಿದರು. ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿದರು.ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳಕ್ಕೆ

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ! Read More »

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅವಿಭಜಿತ ದ.ಕ ಜಿಲ್ಲೆಯ ಹಲವು ಕಡೆಗಳಲ್ಲಿ ತಡರಾತ್ರಿ ಎನ್ಐಎ ದಾಳಿ ನಡೆಸಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107,

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ Read More »

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ ಸಂಘಟನೆ ಮೇಲೆ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಉಗ್ರ ಕೃತ್ಯ, ಕೋಮುಗಲಭೆಗಳಲ್ಲಿ ತೊಡಗಿರುವ ಪಿಎಫ್‌ಐ ಸಂಘಟನೆಗೆ ರಾಷ್ಟ್ರೀಯ ತನಿಖಾ ದಳ ಶಾಕ್ ನೀಡಿದೆ. ದಕ್ಷಿಣ ಕನ್ನಡ, ಮಂಗಳೂರು, ಚಿತ್ರದುರ್ಗ, ಬೆಳಗಾವಿ, ವಿಜಯಪುರ ಜಮಖಂಡಿ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಹಲವರನ್ನು ವಶಕ್ಕೆ ಪಡೆಯಲಾಗಿದೆ. ಎನ್ ಐ ಎ ಮಾಹಿತಿ ಆಧರಿಸಿ ರಾಜ್ಯ ಪೊಲೀಸರಿಂದ ಪಿಎಫ್‌ಐ ಸಂಘಟನೆ ಮುಖಂಡರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ Read More »