ಕ್ರೈಂ

ಮಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದ್ದು, ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು Read More »

ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಮಡಿಕೇರಿ ತಾಲ್ಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯ ಕೊಕ್ಕ ಗ್ರಾಮದ ನದಿಯಲ್ಲಿ ಅರಣ್ಯ ವೀಕ್ಷಕ ವಿ.ತರುಣ್ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ‌. ನಾಲ್ಕು ದಿನಗಳ ಹಿಂದೆ ಅವರು ಗಸ್ತು ಕಾರ್ಯ ನಡೆಸುತ್ತಿರುವಾಗ ನಾಪತ್ತೆಯಾಗಿದ್ದರು. ನದಿಯಲ್ಲಿ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಎನ್ ಡಿ ಆರ್ ಎಫ್ ಸಿಬ್ಬಂದಿ ಹುಡುಕಾಟ ನಡೆಸಿ, ನದಿಯಿಂದ ಶವವನ್ನು ಹೊರತೆಗೆದರು.

ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ Read More »

“ನಿಮ್ಮನ್ನು ಕೇವಲ ಹತ್ತೇ ಸೆಕೆಂಡಿನಲ್ಲಿ ಮುಗಿಸುತ್ತೇವೆ” – ಆರ್ ಎಸ್ಎಸ್ ಗೆ ಬೆದರಿಕೆ ಹಾಕಿದ ಎಸ್ಡಿಪಿಐ ಮುಖಂಡ

ಸಮಗ್ರ ನ್ಯೂಸ್: ಪಿಎಫ್‌ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ ಪಿ ಐ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅಲ್ಲದೇ ಆರ್ ಎಸ್ ಎಸ್ ಮುಖಂಡರಿಗೆ ಬೆದರಿಕೆ ಹಾಕಿದ್ದಾರೆ. ಎನ್ ಐಎ ದಾಳಿ ಖಂಡಿಸಿ ಎರ್ನಾಕುಲಂನಲ್ಲಿ ಪ್ರತಿಭಟನೆ ನಡೆಸಿರುವ ಎಸ್ ಡಿ ಪಿ ಐ ಸಂಘಟನೆ, ಕೇಂದ್ರ ಸರ್ಕಾರ ಹಾಗೂ ಆರ್ ಎಸ್ ಎಸ್

“ನಿಮ್ಮನ್ನು ಕೇವಲ ಹತ್ತೇ ಸೆಕೆಂಡಿನಲ್ಲಿ ಮುಗಿಸುತ್ತೇವೆ” – ಆರ್ ಎಸ್ಎಸ್ ಗೆ ಬೆದರಿಕೆ ಹಾಕಿದ ಎಸ್ಡಿಪಿಐ ಮುಖಂಡ Read More »

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ‌ ಶಂಕಾಸ್ಪದ ಸಾವು| ”ಆತ್ಮಹತ್ಯೆಯಲ್ಲ ಕೊಲೆ” ಎಂದ ಪೋಷಕರು

ಸಮಗ್ರ ನ್ಯೂಸ್: ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನ (AFTC) 27 ವರ್ಷದ ವಿದ್ಯಾರ್ಥಿನಿ ಅಂಕಿತ್ ಕುಮಾರ್ ಝಾ ಸೆಪ್ಟೆಂಬರ್ 21ರಂದು ರಾಜಧಾನಿ ಬೆಂಗಳೂರಿನ ಜಾಲಹಳ್ಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಇದೊಂದು ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ. ಸಂತ್ರಸ್ತೆಯ ಸಹೋದರ ಅಮನ್ ಝಾ ನೀಡಿದ ದೂರಿನ ಆಧಾರದ ಮೇಲೆ ಉತ್ತರ ಬೆಂಗಳೂರಿನ ಯಶವಂತಪುರದ ಗಂಗಾಮಂಗುಡಿ ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರೆಲ್ಲರ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಉತ್ತರ ಬೆಂಗಳೂರು

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ‌ ಶಂಕಾಸ್ಪದ ಸಾವು| ”ಆತ್ಮಹತ್ಯೆಯಲ್ಲ ಕೊಲೆ” ಎಂದ ಪೋಷಕರು Read More »

ಸುಳ್ಯ: ಬೈಕ್-ರಿಕ್ಷಾ ನಡುವೆ ಭೀಕರ ಅಪಘಾತ| ಬೈಕ್ ಸವಾರ ಸಾವು, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ಬೈಕ್ ಮತ್ತು‌ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಜಖಂಗೊಂಡ ಘಟನೆ ಮಾಣಿ- ಮೈಸೂರು‌ ರಾ.ಹೆದ್ದಾರಿಯ ಸುಳ್ಯ‌ ಸಮೀಪದ ಪರಿವಾರಕಾನ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೆವಿಜಿ ಐಟಿಐ ವಿದ್ಯಾರ್ಥಿ ಪ್ರತೀಕ್ ಎಂದು ಗುರುತಿಸಲಾಗಿದೆ. ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಮಗ ಪ್ರತೀಕ್ ಇಂದು ಬೆಳಿಗ್ಗೆ ಕಲ್ಲುಗುಂಡಿಯಿಂದ ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ತೇಜಸ್ ಎಂಬ ಯುವಕನ ಜೊತೆ ಬೈಕ್‌ನಲ್ಲಿ ಸುಳ್ಯಕ್ಕೆ

ಸುಳ್ಯ: ಬೈಕ್-ರಿಕ್ಷಾ ನಡುವೆ ಭೀಕರ ಅಪಘಾತ| ಬೈಕ್ ಸವಾರ ಸಾವು, ಮತ್ತೊಬ್ಬ ಗಂಭೀರ Read More »

ವಿಜಯಪುರ: ಸಹೋದರಿಬ್ಬರು ನೀರು ಪಾಲು

ಸಮಗ್ರ ನ್ಯೂಸ್: ಸಹೋದರಿಬ್ಬರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ನಡೆದಿದೆ. ಸುನೀಲ ಕಲ್ಲಪ್ಪ ಮಾದರ್, ಅನಿಲ ಕಲ್ಲಪ್ಪ ಮಾದರ ನೀರುಪಾಲಾದವರು. ಇವರು ಜಮೀನಿಗೆ ನೀರು ಹಾಯಿಸಲು ಹೋದಾಗ ಈ ದುರ್ಘಟನೆ ಸಂಬಂಧಿಸಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ: ಸಹೋದರಿಬ್ಬರು ನೀರು ಪಾಲು Read More »

ಉಡುಪಿ: ಹೂಡೆ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು; ಮತ್ತೋರ್ವ ನಾಪತ್ತೆ

ಸಮಗ್ರ ನ್ಯೂಸ್: ಹೂಡೆ ಸಮೀಪದ ಬೀಚ್‌ನಲ್ಲಿ ರವಿವಾರ ಸಂಜೆ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಓರ್ವ ಸಮುದ್ರಪಾಲಾಗಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಬೆಂಗಳೂರಿನ ನಿಶಾಂತ್ (21) ಹಾಗೂ ಷಣ್ಮುಗ (21) ಎಂದು ಗುರುತಿಸಲಾಗಿದೆ.ಇನ್ನೋರ್ವ ವಿದ್ಯಾರ್ಥಿ ಶ್ರೀಕರ್ (21) ಎಂಬವರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಇವರೆಲ್ಲರು ಮಣಿಪಾಲದ ಐಸಿಎಎಸ್ ವಿದ್ಯಾರ್ಥಿಗಳಾಗಿದ್ದಾರೆ. ವಾರಾಂತ್ಯ ಹಿನ್ನೆಲೆಯಲ್ಲಿ ಮಣಿಪಾಲದ ಸುಮಾರು 15 ಮಂದಿ ವಿದ್ಯಾರ್ಥಿಗಳು ಹೂಡೆ ಬೀಚ್‌ನಲ್ಲಿ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಕೆಲವರು ಸಮುದ್ರದ ನೀರಿನಲ್ಲಿ ಆಡುತ್ತಿದ್ದ

ಉಡುಪಿ: ಹೂಡೆ ಬೀಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು; ಮತ್ತೋರ್ವ ನಾಪತ್ತೆ Read More »

ಲಂಚ, ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರದಿಂದ ತೇಪೆ ಕಾರ್ಯ| ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಕ್ತ ನಾಮಫಲಕ!

ಸಮಗ್ರ ನ್ಯೂಸ್: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ. ಅಕ್ಟೋಬರ್

ಲಂಚ, ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರದಿಂದ ತೇಪೆ ಕಾರ್ಯ| ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಕ್ತ ನಾಮಫಲಕ! Read More »

ರಾಷ್ಟ್ರ ರಾಜಧಾನಿಯಲ್ಲಿ‌ ಬಾಲಕರೂ ಸೇಫಲ್ಲ| 12 ವರ್ಷದ ಬಾಲಕನ ಮೇಲೆ‌ ನಾಲ್ವರಿಂದ ಅತ್ಯಾಚಾರ ಮಾಡಿ ಹಲ್ಲೆ!!

ಸಮಗ್ರ ನ್ಯೂಸ್: 12 ವರ್ಷದ ಬಾಲಕನ ಮೇಲೆ ನಾಲ್ವರು ಅತ್ಯಾಚಾರ ಎಸಗಿ ಬಳಿಕ ಅಪ್ರಾಪ್ರನನ್ನು ದೊಣ್ಣೆಗಳಿಂದ ಹೊಡೆದು ಅರೆಬೆಂದ ಸ್ಥಿತಿಯಲ್ಲಿ ಬಿಟ್ಟು ಹೋದಂತಹ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು, ದೆಹಲಿಯಲ್ಲಿ, ಹುಡುಗರು ಸಹ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ. ಮಹಿಳಾ ಸಮಿತಿಯು ಘಟನೆ ಸಂಬಂಧ ದೆಹಲಿ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿದೆ ಎಂದು ಸ್ವಾತಿ ಪಲಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ಹುಡುಗಿಯರು ಬಿಡಿ,

ರಾಷ್ಟ್ರ ರಾಜಧಾನಿಯಲ್ಲಿ‌ ಬಾಲಕರೂ ಸೇಫಲ್ಲ| 12 ವರ್ಷದ ಬಾಲಕನ ಮೇಲೆ‌ ನಾಲ್ವರಿಂದ ಅತ್ಯಾಚಾರ ಮಾಡಿ ಹಲ್ಲೆ!! Read More »

ಅಮವಾಸ್ಯೆಯಂದೇ ಮಾಂತ್ರಿಕೆಯ ಮನೆ ಮೇಲೆ ದಾಳಿ| ಪೊಲೀಸರ ಮುಂದೆ ಮಹಿಳಾ ಮಾಂತ್ರಿಕೆಯ ಹೈಡ್ರಾಮಾ

ಸಮಗ್ರ ನ್ಯೂಸ್: ದೇವರ ಹೆಸರಿನಲ್ಲಿ ಜನರಿಗೆ ಬೆದರಿಕೆ ಹಾಕುತ್ತಿದ್ದ‌ ಮಹಿಳಾ ಮಾಂತ್ರಿಕೆಯ ಮನೆ ಮೇಲೆ ಅಮವಾಸ್ಯೆಯಂದೇ ಪೊಲೀಸ್ ದಾಳಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದೆ. ಜೀಲಾನಿ ಅಬ್ದುಲ್ ವುಲ್ಲಾ ಪ್ರಕರಣದ ಆರೋಪಿ. ಈಕೆ ಮಾಟ ಮಂತ್ರ ಮಾಡುತ್ತೇನೆ ಎಂದು ನೂರಾರು ಜನರಿಗೆ ನಂಬಿಸಿ ಹಣ ಪೀಕುತಿದ್ದಳು. ಅಲ್ಲದೆ ದೇವರ ಹೆಸರಿನಲ್ಲಿ ಜನರಿಗೆ ಬೆದರಿಕೆ ಹಾಕುತ್ತಿದ್ದ‌ಳು. ಹೀಗಾಗಿ ಮಹಿಳೆಯ ಮೈದುನ ಶಮೀರ್ ಅಬ್ದುಲ್ ವುಲ್ಲಾರಿಂದ ದೂರು ದಾಖಲಾಗಿತ್ತು. ದೂರು ಹಿನ್ನೆಲೆ ಮತ್ತು

ಅಮವಾಸ್ಯೆಯಂದೇ ಮಾಂತ್ರಿಕೆಯ ಮನೆ ಮೇಲೆ ದಾಳಿ| ಪೊಲೀಸರ ಮುಂದೆ ಮಹಿಳಾ ಮಾಂತ್ರಿಕೆಯ ಹೈಡ್ರಾಮಾ Read More »