ಕ್ರೈಂ

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಎಂದು ಬಿಂಬಿತವಾಗಿ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಸಿಬಿಐ ಆಕಸ್ಮಿಕ ಎಂದು ಹೇಳಿ ವರದಿ ಸಲ್ಲಿಸಿದೆ. ಇಂದು(ಅ. ೩) ಹೊನ್ನಾವರದ ಕೋರ್ಟ್ ಗೆ ವರದಿ ಸಲ್ಲಿಸಿರುವ ಸಿಬಿಐ ಪರೇಶ್ ಮೇಸ್ತಾ ಸಾವು ಆಕಸ್ಮಿಕವಾಗಿದ್ದು, ಇದು ಕೋಮುಹತ್ಯೆ ಅಲ್ಲ ಎಂದು ಹೇಳಿದೆ. ಏನಿದು ಪ್ರಕರಣ?ಕಳೆದ 2017ರ ಡಿಸೆಂಬರ್ ತಿಂಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. […]

ಪರೇಶ್ ಮೇಸ್ತಾ ಸಾವು ಆಕಸ್ಮಿಕ| ಸಿಬಿಐ ನಿಂದ ಕೋರ್ಟ್ ಗೆ ವರದಿ ಸಲ್ಲಿಕೆ Read More »

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ

ಸಮಗ್ರ ನ್ಯೂಸ್: ಇನ್ನೂ ಬಾಳಿ ಬದುಕಬೇಕಾದ ಆ ಬಾಲಕಿಯೋರ್ವಳು ವಿಚಿತ್ರವಾದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಈಕೆಯ ಡೆತ್ ನೋಟ್ ವೈರಲ್ ಅಗ್ತಿದೆ. ಜಿಲ್ಲೆಯ ಸಿಂಧನೂತಿನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಸಾರಿಕಾಳ ಸಾವಿನಿಂದ ಊರಿನವರೆಲ್ಲ ದಿಗ್ಭ್ರಮೆಗೆ ಒಳಗಾಗಿದ್ದರು. ಆಕೆಯ ಮನೆಯವರು ಮಗಳನ್ನು ಕಳೆದುಕೊಂಡ ಶೋಕದಲ್ಲಿದ್ದ ಸಂದರ್ಭದಲ್ಲಿ ಆಕೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ ನೋಟ್ ಸಿಕ್ಕಿದೆ. ಆ ಪತ್ರ ನೋಡಿ ಎಲ್ಲರೂ

ನನ್ನ ಶವ ನೋಡಲು ಬರದಿದ್ರೆ ದೆವ್ವವಾಗಿ ಬಂದು ಕಾಡ್ತೀನಿ| ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 15ರ ಬಾಲೆ Read More »

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ

ಸಮಗ್ರ ನ್ಯೂಸ್: ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಅ.2ರ ತಡರಾತ್ರಿ ಬೆಳಕಿಗೆ ಬಂದಿದೆ. ಸಿಕ್ಕಿಬಿದ್ದಾಕೆ ಮುಂದಿನ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ, ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮಗಳು ಎನ್ನಲಾಗಿದ್ದು, ವಿಷಯ ತಿಳಿದ ಮಹಿಳೆಯ ಗಂಡ ಬಂದು ಪೊಲೀಸ್ ಅಧಿಕಾರಿಗೆ ಹಿಗ್ಗಾ ಮುಗ್ಗ ಗೂಸಾ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಪೊಲೀಸಪ್ಪನೊಂದಿಗೆ ವಿವಾಹಿತ ಮಹಿಳೆಯ ಪಲ್ಲಂಗದಾಟ| ಗಂಡನಿಂದ ಹಿಗ್ಗಾಮುಗ್ಗ ಗೂಸಾ Read More »

ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು

ಸಮಗ್ರ ನ್ಯೂಸ್ : ಭಾರೀ ಮಳೆಯಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪರಮೇಶ್ (45), ಜಯಮ್ಮ (39) ಹಾಗೂ ಪುತ್ರ ಭರತ್ (5) ಸಾವನ್ನಪ್ಪಿದ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು Read More »

ಮಂಗಳೂರು: ಕಾನ್ಸ್ ಟೇಬಲ್ ಗೆ ಡಿಕ್ಕಿ ಹೊಡೆದ ಕಾರು ಪರಾರಿ

ಸಮಗ್ರ ನ್ಯೂಸ್: ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಕಾನ್ಸ್​ಟೇಬಲ್​ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಇಂದು ಸಂಜೆ ಸಂಭವಿಸಿದೆ. ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಕಾನ್ಸ್​ಟೇಬಲ್. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ. ತೊಕ್ಕೊಟ್ಟು ಕಡೆಯಿಂದ ಉಳ್ಳಾಲ ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್

ಮಂಗಳೂರು: ಕಾನ್ಸ್ ಟೇಬಲ್ ಗೆ ಡಿಕ್ಕಿ ಹೊಡೆದ ಕಾರು ಪರಾರಿ Read More »

ತಂಗಿಯ ಬೆತ್ತಲೆ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ| ಅವಳಣ್ಣ ಅವನನ್ನು ಮಾಡಿದ್ದೇನು?

ಸಮಗ್ರ ನ್ಯೂಸ್: ತಂಗಿಯ ಬೆತ್ತಲೆ ಫೋಟೋ ಇಟ್ಟುಕೊಂಡಿದ್ದ ಅಂತ ಬರ್ಬರವಾಗಿ ಕೊಂದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿ ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನಿಗೆ 50 ಬಾರಿ ಇರಿದು ಬರ್ಬರವಾಗಿ ಕೊಂದಿದ್ದಾನೆ. ದೊಡ್ಡಬಳ್ಳಾಫುರದ ನಂದಾ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡಿದ್ದ. ಅದೇ ವಿಚಾರಕ್ಕೆ ಕೊಲೆ ನಡೆದಿದೆ.

ತಂಗಿಯ ಬೆತ್ತಲೆ ಫೋಟೋ ಇಟ್ಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದ| ಅವಳಣ್ಣ ಅವನನ್ನು ಮಾಡಿದ್ದೇನು? Read More »

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….!

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್ಯ ಅಧಿಕಾರಿಗಳು ಜಿಲ್ಲೆ ಹಾಗೂ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಹೋರಾಟ ನಡೆಸಿದ್ದಾರೆ. ಬಲ್ಲಾಳರಾಯನದುರ್ಗದ ಸುತ್ತಮುತ್ತಲಿನ ಪ್ರದೇಶದ ಸೌಂದರ್ಯ ನೋಡೋ ಕಣ್ಗಳಿಗೆ ಹೊಸದೊಂದು ಪ್ರಪಂಚವನ್ನೇ ಉಣಬಡಿಸುವಂತಿದೆ. ಕಣ್ಣಿನ ದೃಷ್ಠಿ ಮುಗಿದರು ಹಚ್ಚಹಸಿರಿನ ಬೆಟ್ಟಗುಡ್ಡಗಳ ಸಾಲಿಗೆ ಕೊನೆ

ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….! Read More »

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಜಕಾರ್ತದಲ್ಲಿ ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಜಾವದ ಮಲಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿ, ಇಬ್ಬರು ಪೊಲೀಸರ ಸಹಿತ ಕನಿಷ್ಠ 127 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1ರ ಅರೆಮಾ ಎಫ್‌ಸಿ ಮತ್ತು ಪರ್ಸಬೆಯ ಸುರಬಯ ತಂಡದ ನಡುವೆ

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು Read More »

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ

ಸಮಗ್ರ ನ್ಯೂಸ್: ​​​​​​​ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸ್‌ವಾದ) ಪಕ್ಷದ ಹಿರಿಯ ಮುಖಂಡ, ಮಾಜಿ ರಾಜ್ಯ ಕಾರ್ಯದರ್ಶಿ ಕೋಡಿಯೇರಿ ಬಾಲಕೃಷ್ಣನ್‌ (68) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಬಾಲಕೃಷ್ಣನ್‌, 2019ರಿಂದಲೂ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೇರಳದ ಹಿರಿಯ ರಾಜಕೀಯ ನಾಯಕರಾಗಿದ್ದ ಬಾಲಕೃಷ್ಣನ್‌, ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯರಾಗಿದ್ದರು. ತಲಶ್ಯೇರಿ ವಿಧಾನಸಭೆಯಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಾಲಕೃಷ್ಣನ್‌, ವಿ. ಅಚ್ಯುತಾನಂದನ್‌ ಸರ್ಕಾರದಲ್ಲಿ (2006-11) ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಧಾನಸಭೆಯಲ್ಲಿ ಎರಡು ಬಾರಿ

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ Read More »

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸಮಗ್ರ ನ್ಯೂಸ್: ಎರಡು ವರ್ಷಗಳ ಕಾಲ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ ಕೇರಳ ಪೋಕ್ಸೊ ನ್ಯಾಯಾಲಯ 142 ವರ್ಷ ಜೈಲು ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ. ಅಪರಾಧಿಯು ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.ಅಂದರೆ ಸುಮಾರು 150 ವರ್ಷ ಜೈಲುವಾಸ ಅನುಭವಿಸಬೇಕಾಗುತ್ತದೆ. ಪೋಕ್ಸೊ ಕಾಯ್ದೆಯಡಿ ನೀಡಲಾದ ಗರಿಷ್ಠ ಶಿಕ್ಷೆ ಇದಾಗಿದೆ. ಅಪರಾಧಿ ಆನಂದನ್‌ ಪಿಆರ್‌

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »