ಕ್ರೈಂ

ದಲಿತ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ
ಬಲವಂತವಾಗಿ ಮತಾಂತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳಿ: ಅಂಬೇಡ್ಕರ್ ರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ದಲಿತ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದವ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪೊಲೀಸ್ ಇಲಾಖೆಯವರಿಗೆ ಮನವಿ ಮಾಡಲಾಯಿತು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ (26) ಎಂಬವರು ಮತಾಂತರಕ್ಕೆ ಒಳಗಾಗಿರುವವರು. ಇವರನ್ನು ಬಲವಂತವಾಗಿ ಮಸೀದಿಯಲ್ಲಿ ಬಂಧಿಸಿ ಮುಸ್ಲಿಂ ಸಮುದಾಯಕ್ಕೆ ಮತಾಂತರ ಮಾಡಲಾಗಿತ್ತು. ಹಾಗಾಗಿ ಮತಾಂತರ ಮಾಡಿದ 11 ಜನರ ಮೇಲೆ ಎಫ್ ಐ ಆರ್ ದಾಖಲು ಮಾಡಿ ಕಠಿಣ ಕ್ರಮ […]

ದಲಿತ ಯುವಕನನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ
ಬಲವಂತವಾಗಿ ಮತಾಂತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳಿ: ಅಂಬೇಡ್ಕರ್ ರಕ್ಷಣಾ ವೇದಿಕೆ
Read More »

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ

ಸಮಗ್ರ ನ್ಯೂಸ್: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾದ ಘಟನೆಯೊಂದು ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗಿದ್ದು, ಪಾಪನಾಸಿನಿ ನದಿಗೆ ಕಟ್ಟಲಾಗಿರುವ ಸೇತುವೆ ಬಳಿ ಬೈಕ್ ಪತ್ತೆಯಾಗಿದ್ದು, ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಯುವಕನಿಗಾಗಿ ಸ್ಥಳೀಯ ಮುಳುಗು ತಜ್ಞರಿಂದ ಶೋಧ ನಡೆಸಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ Read More »

ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಹಾವು ಕಡಿದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಿವನೂರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿ ದೀಪಾ ಅಪ್ಪಾಸಾಬ ಮೇತ್ರಿ ಹಾವು ಕಚ್ಚಿ ಸಾವನ್ನಪ್ಪಿದ್ದ ದುರ್ದೈವಿ. ಶನಿವಾರ ಶಾಲೆ ಮುಗಿಸಿ ಮನೆಗೆ ಬಂದು ಮನೆಯಲ್ಲಿ ಮಲಗಿದಾಗ ಹಾವು ಕಚ್ಚಿದೆ. ತಕ್ಷಣ ಎಚ್ಚರಗೊಂಡು ಗಮನಿಸಿದಾಗ ಮನೆಯವರಿಗೆ ಹಾವು ಕಚ್ಚಿರುವ ವಿಷಯ ಗೊತ್ತಾಗಿದೆ. ನಂತರ ಚಿಕಿತ್ಸೆ ಕರೆದುಕೊಂಡು ಹೋಗುವ ಸಮಯದಲ್ಲಿ ನಡುದಾರಿಯಲ್ಲಿ ದಾರಿಯಲ್ಲಿ ಸಾವನ್ನಪ್ಪಿದ್ದು ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹಾವು ಕಚ್ಚಿ ವಿದ್ಯಾರ್ಥಿನಿ ಸಾವು Read More »

ಸುಳ್ಯ: ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಶಂಕಾಸ್ಪದ ವ್ಯಕ್ತಿಗಳ ತಿರುಗಾಟ; ಮಾಹಿತಿ ತಿಳಿಸಲು ಠಾಣಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ,ಮುರೂರು, ಬಡ್ಡಡ್ಕ, ಕನ್ನಡಿ ತೋಡು ಚೆಕ್ ಪಾಯಿಂಟ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ನೀಡಿರುವ ಮಾಹಿತಿಯಂತೆ ನಂಬರ್ ಪ್ಲೇಟ್ ಇಲ್ಲದೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಅನುಮಾನಾಸ್ಪದ ವ್ಯಕ್ತಿಗಳು ಚೆಕ್ ಪಾಯಿಂಟ್ ನಲ್ಲಿ ಕಂಡು ಬಂದರೆ ಅವರನ್ನು ಚೆಕ್ ಪಾಯಿಂಟ್ ನಲ್ಲಿ ತಡೆದು ನಿಲ್ಲಿಸಲು ಸುಳ್ಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ: ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಶಂಕಾಸ್ಪದ ವ್ಯಕ್ತಿಗಳ ತಿರುಗಾಟ; ಮಾಹಿತಿ ತಿಳಿಸಲು ಠಾಣಾಧಿಕಾರಿ ಸೂಚನೆ Read More »

ಶಿರಾಡಿ: ಕೆ.ಎಸ್.ಆರ್.ಟಿ.ಸಿ ಹಾಗೂ ಕಾರು ನಡುವೆ ಡಿಕ್ಕಿ; ಪ್ರಯಾಣಿಕರು ಜಖಂ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಶಿರಾಡಿ ಹೊರಠಾಣೆಯ

ಶಿರಾಡಿ: ಕೆ.ಎಸ್.ಆರ್.ಟಿ.ಸಿ ಹಾಗೂ ಕಾರು ನಡುವೆ ಡಿಕ್ಕಿ; ಪ್ರಯಾಣಿಕರು ಜಖಂ Read More »

ಕುವೈತ್ ನಲ್ಲಿ ಅಪಘಾತಕ್ಕೆ ಮಂಗಳೂರು ಮೂಲದ ಯುವಕ ಬಲಿ

ಸಮಗ್ರ ನ್ಯೂಸ್: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ. ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ.

ಕುವೈತ್ ನಲ್ಲಿ ಅಪಘಾತಕ್ಕೆ ಮಂಗಳೂರು ಮೂಲದ ಯುವಕ ಬಲಿ Read More »

ಮಗ ಉಗ್ರನೆಂದು ತಿಳಿಯುತ್ತಿದ್ದಂತೆ ಮಾಝ್ ತಂದೆಗೆ ಹೃದಯಾಘಾತವಾಯಿತೇ? ಅಂತ್ಯ ಸಂಸ್ಕಾರಕ್ಕೆ ಬಂದವನಿಗೆ ತಾಯಿ‌ ಹೇಳಿದ್ದೇನು?

ಸಮಗ್ರ ನ್ಯೂಸ್: ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿ ಹಲವು ವಿಧ್ವಂಸಕ ಕೃತ್ಯಗಳಿಗೆ ಸ್ಕೆಚ್​ ಹಾಕಿದ ಆರೋಪದ ಮೇಲೆ ಶಿವಮೊಗ್ಗದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮುನೀರ್​ ಅಲಿಯಾಸ್ ಮಾಝ್ ​​​ ತಂದೆ ಮನೀರ್ ಅಹಮದ್​(57) ನಿನ್ನೆ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟರು. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು‌. ಆದರೆ ತಮ್ಮ ಮಗ ಮಾಝ್, ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಅವರಿಗೆ ತಡೆದುಕೊಳ್ಳಲು ಆಗದೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ

ಮಗ ಉಗ್ರನೆಂದು ತಿಳಿಯುತ್ತಿದ್ದಂತೆ ಮಾಝ್ ತಂದೆಗೆ ಹೃದಯಾಘಾತವಾಯಿತೇ? ಅಂತ್ಯ ಸಂಸ್ಕಾರಕ್ಕೆ ಬಂದವನಿಗೆ ತಾಯಿ‌ ಹೇಳಿದ್ದೇನು? Read More »

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಯುವಕನೊಬ್ಬ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆರಿಯ ಗ್ರಾಮದ ಚಂದ್ರಶೇಖರ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಈತ , ಗೆಳೆಯರ ಜೊತೆಗೆ ಸೇರಿ ಶಬರಿ ಎಂಬ ಸ್ವಸಹಾಯ ಸಂಘ ರಚಿಸಿದ್ದು, ಈ ಸಂಘದ ಮೂಲಕ ಉಜಿರೆಯ ಖಾಸಗಿ ಬ್ಯಾಂಕಿನಿಂದ 4 ಲಕ್ಷ ರೂ. ಸಾಲ ಪಡೆದಿದ್ದರು. ಈ ಹಣವನ್ನು ಎಂಟು ಜನ ಹಂಚಿಕೊಂಡಿದ್ದರು. ಆದರೆ ಚಂದ್ರಶೇಖರ್ ತೆಗೆದ

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು Read More »

ಭಟ್ಕಳ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉನೈಜ್ ಹಮ್ಜದ ಖತೀಬ್ (20) ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಕಾರು ಚಲಾಸಿಕೊಂಡು ಬರುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು

ಭಟ್ಕಳ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ಸ್ಥಳದಲ್ಲೇ ಸಾವು Read More »

ಉಪ್ಪಿನಂಗಡಿ: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಹೊಡೆದಾಟ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ್ದ ವಿದ್ಯಾರ್ಥಿಗಳ ಎರಡು ತಂಡಗಳು ಸಂಘರ್ಷಕ್ಕೆ ಸಿದ್ಧವಾಗಿ ಅನಪೇಕ್ಷಿತ ಘಟನಾವಳಿಗೆ ಕಾರಣವಾಗುವ ಸಾಧ್ಯತೆಯನ್ನು ಪೊಲೀಸರ ಸಕಾಲಿಕ ಮಧ್ಯೆ ಪ್ರವೇಶದಿಂದಾಗಿ ತಡೆಗಟ್ಟಿದ ಘಟನೆ ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ. ಗುರುವಾರ ಸಂಜೆ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯೋರ್ವ ದ್ವಿತೀಯ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿ ಶುಕ್ರವಾರ ಉಭಯ ವಿದ್ಯಾರ್ಥಿಗಳ ಬೆಂಬಲಿಗರು ಜಮಾಯಿಸಿ ಹೊಡೆದಾಟಕ್ಕೆ ಸಿದ್ಧರಾಗಿದ್ದರು. ಇದರ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ಎಸ್ಸೆ„

ಉಪ್ಪಿನಂಗಡಿ: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಹೊಡೆದಾಟ Read More »