ಸುಳ್ಯ: ಅಂಬೇಡ್ಕರ್ ಧ್ವಜ ತೆರವುಗೊಳಿಸಿದ ಪಿಡಿಒ/ಸರಿಗೊಳಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯಿಂದ ಪ್ರತಿಭಟನೆ ಎಚ್ಚರಿಕೆ
ಸಮಗ್ರ ನ್ಯೂಸ್: ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಧ್ವಜವನ್ನು ಪಿಡಿಒ ತೆರವುಗೊಳಿಸಿದ್ದು ಹಾಗಾಗಿ ಇದನ್ನು ತಕ್ಷಣ ಸರಿಗೊಳಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆಯಿಂದ ಪ್ರತಿಭಟನೆ ಎಚ್ಚರಿಕೆ ನೀಡಲಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಲಾದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಇತ್ತೀಚಿಗೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯವರು ಕಾರ್ಯಕ್ರಮಯೊಂದರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಧ್ವಜವನ್ನು ಆ ಸಮುದಾಯ ಕಟ್ಟಡದಲ್ಲಿ ಅಳವಡಿಸಿದ್ದರು. ಹೀಗೆ ಅಳವಡಿಸಿದಂತ ಧ್ವಜವನ್ನು ಏಕಾಏಕಿ ಅಜ್ಜಾವಾರ ಗ್ರಾಮ ಪಂಚಾಯತ್ ನ ಪಿಡಿಒ ತೆರವುಗೊಳಿಸಿದರೆ ಎಂದು ಆರೋಪ […]










