ಕ್ರೈಂ

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯರೊಬ್ಬರ ಹೆಸರು ತನಿಖೆಯಲ್ಲಿ ತಳುಕು ಹಾಕಿಕೊಂಡಿದೆ, ಅನಾಮಿಕ ದೂರುದಾರ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ತನಿಖಾ ತಂಡದ ಮುಂದೆ ಹೇಳಿದ್ದೇನೆ. ಎಸ್‌ಐಟಿ ವಿಚಾರಣೆಯಲ್ಲಿ ಈ ದೂರುದಾರ ನೀಡಿದ ಮಾಹಿತಿಯ ಪ್ರಕಾರ, ಶವಗಳನ್ನು ಹೂತಿಟ್ಟ ಕಾರ್ಯದಲ್ಲಿ ಅಂದು ಪೊಲೀಸ್ ಅಧಿಕಾರಿಯೂ ಸಾಥ್ ನೀಡಿದ್ದರು. ಪ್ರಕರಣ ಸಂಬಂಧ ಈಗ ಆ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವಿಷಯ ಬಹಿರಂಗವಾಗುತ್ತಿದ್ದಂತೆ, […]

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು? Read More »

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ ಎಂದು ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ Read More »

ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಸತತ 2 ನೇ ದಿನವೂ ಶವಗಳ ಹುಡುಕಾಟ ಮುಂದುವರಿದಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಅನಾಮಿಕ ದೂರುದಾರ, 13 ಸ್ಥಳಗಳನ್ನು ಗುರುತಿಸಿದ ಬೆನ್ನಲ್ಲೇ ಮಂಗಳವಾರದಿಂದ ಶವಗಳನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದ್ದು ಎಸ್‌ಐಟಿ ಅಧಿಕಾರಿಗಳ ನೇತ್ರಾವತಿ ದಂಡೆಯ ಆಸುಪಾಸಿನಲ್ಲಿ ಶೋಧಕಾರ್ಯ ಚುರುಕುಗೊಳಿಸಲಾಗಿದೆ. ಮಂಗಳವಾರ ಸುಮಾರು 6 ತಾಸಿಗೂ ಹೆಚ್ಚು ಕಾಲ ಅಗೆದರೂ ಯಾವುದೇ ರೀತಿಯ ಕುರುಹು ಪತ್ತೆಯಾಗಿಲ್ಲ. ಈ ಬೆನ್ನಲ್ಲೇ

ಧರ್ಮಸ್ಥಳ: ಎರಡನೇ ದಿನವೂ ಮುಂದುವರಿದ ಬುರುಡೆ ಹುಡುಕಾಟ| ಏಕಕಾಲದಲ್ಲಿ ಮೂರು ಕಡೆ ಶೋಧ ಕಾರ್ಯಾಚರಣೆ Read More »

ಧರ್ಮಸ್ಥಳ: ಶವ ಹೂತಿಟ್ಟ ಜಾಗದಲ್ಲಿ ‌ಸಿಗದ ಕಳೆಬರ| ನಿನ್ನೆ ಏನೇನಾಯ್ತು ಗೊತ್ತಾ?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪ ಮಾಡಿದ್ದ ದೂರುದಾರ ಮಹಜರು ವೇಳೆ ಹಲವು ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಇಂದು ಎಸ್‌ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ದೂರುದಾರ ಗುರುತಿಸಿದ ಸಮಾಧಿ ಪೈಕಿ ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲೇ ಗುರುತಿಸಿದ್ದ ಸಮಾಧಿ ಸ್ಥಳ ಅಗೆದಿದ್ದಾರೆ. ಕಾರ್ಮಿಕರ ಮೂಲಕ 4 ಅಡಿ ಅಗೆದ ಬಳಿಕ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಹೀಗಾಗಿ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ.

ಧರ್ಮಸ್ಥಳ: ಶವ ಹೂತಿಟ್ಟ ಜಾಗದಲ್ಲಿ ‌ಸಿಗದ ಕಳೆಬರ| ನಿನ್ನೆ ಏನೇನಾಯ್ತು ಗೊತ್ತಾ? Read More »

ಧರ್ಮಸ್ಥಳ ಪ್ರಕರಣ| ಮೊದಲ ಜಾಗದಲ್ಲಿ ಅಗೆದರೂ ಸಿಗದ ಕಳೆಬರ| ಜೆಸಿಬಿ ಮೂಲಕ ಕಾರ್ಯಾಚರಣೆಗೆ ಸಿದ್ಧತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೊದಲ ಸ್ಥಳ ಅಗೆದಲ್ಲಿ ಯಾವುದೇ ಕಳೆಬರಹ ದೊರೆತಿಲ್ಲ ಎಂದು ತನಿಖಾಧಿಕಾರಿ ಅನುಚೇತ್ ಸ್ಪಷ್ಟಪಡಿಸಿದ್ದಾರೆ‌. ಸಾಕ್ಷಿದಾರ ಗುರುತಿಸಿರುವ ಸ್ಥಳವನ್ನು ಕಾರ್ಮಿಕರ ಸಹಾಯದಿಂದ ತೆರವುಕಾರ್ಯ ಮುಂಜಾನೆಯಿಂದ ಆರಂಭಗೊಂಡಿದ್ದು ಸತತ 3 ತಾಸು ಅಗೆಯುವ ಕೆಲಸ ನಡೆದಿದೆ. ಸ್ಥಳದಲ್ಲಿ ಯಾವುದೇ ಕುರುಹು ದೊರೆತಿಲ್ಲ. ಸುಮಾರು ನಾಲ್ಕು ಅಡಿ ಆಳ, 6 ಅಡಿ ಉದ್ದ ಆಳ ಕೊರೆದಿದ್ದು, ಆದರೆ

ಧರ್ಮಸ್ಥಳ ಪ್ರಕರಣ| ಮೊದಲ ಜಾಗದಲ್ಲಿ ಅಗೆದರೂ ಸಿಗದ ಕಳೆಬರ| ಜೆಸಿಬಿ ಮೂಲಕ ಕಾರ್ಯಾಚರಣೆಗೆ ಸಿದ್ಧತೆ Read More »

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮ ವ್ಯಾಪ್ತಿಯ ಹಲವೆಡೆ ಶವಗಳನ್ನು ಹೂತಿರುವುದಾಗಿ ಅನಾಮಿಕ ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‌.ಐ.ಟಿ. (ವಿಶೇಷ ತನಿಖಾ ದಳ) ಅಧಿಕಾರಿಗಳ ಮುಂದೆ ಹಾಜರಾದ ಅನಾಮಿಕ ವ್ಯಕ್ತಿ, 13 ಸ್ಥಳಗಳನ್ನು ಗುರುತಿಸಿದಂತೆ ಸ್ಥಳ ಮಹಜರು ನಡೆಸಲಾಗಿದೆ. ಜು.27 ರಂದು ಮಂಗಳೂರಿನಲ್ಲಿ ಅನಾಮಿಕನ ಸಂಪೂರ್ಣ ಹೇಳಿಕೆ ಪಡೆದು ಪ್ರಕರಣವನ್ನು ಚುರುಕುಗೊಳಿಸಿದ ತನಿಖಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಎಸ್ಪಿ ಸಿ.ಎ.ಸೈಮನ್‌ ಹಾಗೂ ಅಧಿಕಾರಿಗಳ ತಂಡವು ಬೆಳಗ್ಗೆಯೇ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಎಸ್‌.ಐ.ಟಿ. ಕಚೇರಿಗೆ ಆಗಮಿಸಿದ್ದರು. ಅನಾಮಿಕ ತನ್ನ

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ Read More »

ಧರ್ಮಸ್ಥಳ ತಲೆಬುರುಡೆ ಪ್ರಕರಣ| ಬೆಳ್ತಂಗಡಿ ಬಂದಿಳಿದ ಎಸ್ಐಟಿ| ಇಂದು ಸ್ಥಳ ಮಹಜರು ಪ್ರಕ್ರಿಯೆ ಶುರು

ಸಮಗ್ರ ನ್ಯೂಸ್: ಧರ್ಮಸ್ಥಳ ದೂರು ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ 28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು, ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಮಹಜರಿಗೆ ತಯಾರಿ ನಡೆಸುತ್ತಿದ್ದಾರೆ. ಮೊದಲು ಬೆಳ್ತಂಗಡಿ ಕಚೇರಿಗೆ ಬಂದ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು, ಕೆಲವು ದಾಖಲೆಗಳಿಗೆ

ಧರ್ಮಸ್ಥಳ ತಲೆಬುರುಡೆ ಪ್ರಕರಣ| ಬೆಳ್ತಂಗಡಿ ಬಂದಿಳಿದ ಎಸ್ಐಟಿ| ಇಂದು ಸ್ಥಳ ಮಹಜರು ಪ್ರಕ್ರಿಯೆ ಶುರು Read More »

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ

ಸಮಗ್ರ ನ್ಯೂಸ್: ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಅಧಿಕಾರಿಗಳು ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ Read More »

ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅವರನ್ನು ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ. ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ

ಧರ್ಮಸ್ಥಳ: ಹೂತಿಟ್ಟ ಶವ ಹೊರತೆಗೆಯಲು ಸ್ವಯಂಪ್ರೇರಿತವಾಗಿ ಮುಂದೆ ಬಂದ ಇಂಜಿನಿಯರ್ ಗಳು, ವಿಜ್ಞಾನಿಗಳು Read More »

ಉಪ್ಪಿನಂಗಡಿ: ಹಾರ್ನ್ ಹಾಕಿ ದಾರಿ‌ ಬಿಡಲು ಹೇಳಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆಗೈದ‌ ಬೈಕ್ ಸವಾರರು| ಇಬ್ಬರ ಮೇಲೆ ಕೇಸು ದಾಖಲು

ಸಮಗ್ರ ನ್ಯೂಸ್: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್‌ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿ

ಉಪ್ಪಿನಂಗಡಿ: ಹಾರ್ನ್ ಹಾಕಿ ದಾರಿ‌ ಬಿಡಲು ಹೇಳಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆಗೈದ‌ ಬೈಕ್ ಸವಾರರು| ಇಬ್ಬರ ಮೇಲೆ ಕೇಸು ದಾಖಲು Read More »