ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳ ಕಚೇರಿಗಳ ಮೇಲೆ ಎನ್ಐಎ ಹಾಗೂ ಪೊಲೀಸರ ದಾಳಿ ನಡೆದ ಬಳಿಕ ಎಲ್ಲ ಕಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಪೊಲೀಸ್ ಕಮೀಷನರ್ಗಳು, ಎಲ್ಲ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ […]










