ಕ್ರೈಂ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ

ಸಮಗ್ರ ನ್ಯೂಸ್: ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವಕಾಶಿ ಯು.ಆರ್ ಹೇಳಿದರು. ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ […]

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ Read More »

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ

ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ನೇಮಕಾತಿಯಲ್ಲೂ ವಿಜಯಪುರ ಜಿಲ್ಲೆಗೂ ನಂಟು ಹೊಂದಿದ್ದು,ಅಕ್ರಮವಾಗಿ ನೇಮಕಾತಿಯಾಗಿರೋ ಮತ್ತೋರ್ವ ಶಿಕ್ಷಕನ ಬಂಧನವಾಗಿದೆ. ಬಂಧಿತರ ಸಂಖ್ಯೆ ಇದೀಗ ಮೂರಕ್ಕೇರಿದೆ. ವಿಜಯಪುರ ಜಿಲ್ಲಾ ಮೂಲದ ಅಶೋಕ ಚವ್ಹಾಣ್ ಬಂಧಿತ ಮತ್ತೋರ್ವ ಶಿಕ್ಷಕರಾಗಿದ್ದಾರೆ. ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ್ ಇವರ ವಿರುದ್ಧ ಸೂಕ್ತ ಮಾಹಿತಿ ಕಲೆ ಹಾಕಿ ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿರೋ ಸಿಓಡಿ ಅಧಿಕಾರಿಗಳು ಇದೀಗ

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ Read More »

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ ರಿಲೇ ಚಿನ್ನದ ಪದಕ ವಿಜೇತೆ ಎಂ.ಆರ್.ಪೂವಮ್ಮ ಅವರಿಗೆ ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕ ಮೇಲ್ಮನವಿ ಸಮಿತಿಯು ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. ಕೇವಲ ಮೂರು ತಿಂಗಳ ನಿಷೇಧವನ್ನು ನೀಡಿದ ಶಿಸ್ತಿನ ಸಮಿತಿಯ ನಿರ್ಧಾರವನ್ನು ಈ ಪ್ಯಾನೆಲ್‌ ರದ್ದು ಮಾಡಿದೆ. ಈ ನಿಷೇಧದ ಕಾರಣದಿಂದಾಗಿ ಎಂಆರ್‌ ಪೂವಮ್ಮ ಮುಂದಿನ ವರ್ಷ ನಡೆಯಲಿರುವ ವಿಶ್ವ ಚಾಂಪಿಯನ್‌ಷಿಪ್‌ ಹಾಗೂ ಏಷ್ಯನ್‌ ಗೇಮ್ಸ್‌ನಿಂದ ಹೊರಬಿದ್ದಂತಾಗಿದೆ. 2021ರ ಫೆಬ್ರವರಿ 18 ರಂದು ಪಟಿಯಾಲಾದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್

ಉದ್ದೀಪನ ಮದ್ದು ಸೇವನೆ ಪ್ರಕರಣ| ಎಂ.ಆರ್ ಪೂವಮ್ಮಗೆ ಎರಡು ವರ್ಷ ನಿಷೇಧ Read More »

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಉಡುಪಿ: ಮೀನಿನ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆಯೊಂದು ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ Read More »

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು

ಸಮಗ್ರ ನ್ಯೂಸ್ : ಅಪಾರ್ಟ್‌ ಮೆಂಟ್‌ ಕಟ್ಟಡದ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟ ಘಟನೆಯೊಂದು ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ನೋಯ್ಡಾದ ಸೆಕ್ಟರ್‌ ೨೧ರಂದು ವಸತಿ ಸಂಕೀರ್ಣ ಜಲ್‌ ವಾಯು ವಿಹಾರದಲ್ಲಿ ಈ ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ

ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಕುಸಿದು 4 ಮಂದಿ ಸಾವು Read More »

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಸಮಗ್ರ ನ್ಯೂಸ್: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಮೂವರು ಸಂಬಂಧಿಕರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಜಲಪುರ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಫಿರಾಪೂರ ಹಲ್ಲೆಗೊಳಗಾದ ಮಹಿಳೆ. ಆನಂದ್ ಬಿರಾದಾರ, ಶ್ರೀಶೈಲ ಬಿರಾದಾರ, ನಾನಾಗೌಡ ಬಿರಾದಾರ ಎಂಬುವರಿಂದ ಮಹಾದೇವಿ ಮೇಲೆ ಹಲ್ಲೆಗೈದವರು. ಜಲಪುರ ಗ್ರಾಮದಲ್ಲಿ 1ಎಕರೆ ಜಮೀನಿದ್ದು,1 ಎಕರೆ ಜಮೀನಿನ ಮೇಲೆ ಹಲ್ಲೆಕೋರರು ಕಣ್ಣಿಟ್ಟಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ಮಹಾದೇವಿ ಮೇಲೆ ಹಲ್ಲೆ ಮಾಡಲಾಗಿದೆ.

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ Read More »

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರ ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಲಾಪುರದಲ್ಲಿ ನಡೆದಿದೆ. ORB NRG ಎಂಬ ಕಂಪನಿ ರೈತರ ಜಮೀನಿನ ಮೇಲೆ ಸೋಲಾರ್ ವಿದ್ಯುತ್ ತಂತಿಯನ್ನು ಅಳವಡಿಕೆಗೆ ಪ್ಲಾನ್ ಮಾಡಲಾಗಿತ್ತು. ಇದರಿಂದ ರೈತರಿಗೆ ತೊಂದರೆ ಉಂಟಾಗಿದ್ದು, ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಇದರಿಂದ ನಮಗೆ ನಯಾ ಪೈಸೆ ಪರಿಹಾರ ನೀಡಲಿಲ್ಲ, ನಾವು ಮನೆ ಕಟ್ಟಬೇಕು, ನೀವು ತಂತಿ ಹೇಗೆ ಎಳೆದ್ರಿ? ನಮಗೆ ಪರಿಹಾರವನ್ನು ನೀಡದೇ ಯಾಕೆ

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ Read More »

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು

ಸಮಗ್ರ‌ ನ್ಯೂಸ್:‌ ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು ಪತ್ತೆಯಾದ ಘಟನೆಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ನಡೆದಿದೆ. ಗುಡ್ಡ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನಿದ್ದು ಇದರಿಂದ ಸಾರ್ವಜನಿಕರು ಸಂಶಯಗೊಂಡಿದ್ದಾರೆ. ಮುಸ್ಲಿಂ ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದವರು ಎಂದು ಕೂಡ ಹೇಳಲಾಗುತ್ತಿದೆ. ಇವರನ್ನು ಹಿಡಿದ ಅಲ್ಲಿನ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು Read More »

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್

ಸಮಗ್ರ ನ್ಯೂಸ್: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಬಂಧಿತ ಬಸ್​ ಚಾಲಕನನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಬಸ್​ ನಿರ್ವಾಹಕ ಅಂಬ್ಲಮೊಗರು ನಿವಾಸಿ ದಂಶೀರ್ (30) ಎಂದು ಗುರುತಿಸಲಾಗಿದೆ. ಸೆ 7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್(16) ಎಂಬ ವಿದ್ಯಾರ್ಥಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ. 44 ಡಿ ನಂಬರಿನ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್ Read More »