ಕ್ರೈಂ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ […]

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ

ಮಂಗಳೂರು: ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸಾದ ಶಿಕ್ಷಕ ಹಲ್ಲೆ ನಡೆಸಿದ ಘಟನೆಯೊಂದು  ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ Read More »

60 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ 55 ವರ್ಷದ ಮಹಿಳೆ..!!

ಆಂಧ್ರಪ್ರದೇಶ: ಮಧ್ಯ ವಯಸ್ಕ ಮಹಿಳೆ, ತನ್ನ ಮಧ್ಯ ವಯಸ್ಕ ಪ್ರಿಯತಮನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಘಟನೆ ಆಂಧ್ರದಲ್ಲಿ ನಡೆದಿದೆ. ನಡೆದ ಘಟನೆ ಏನು?ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಂಡಪಿ ಮಂಗಲದ ಮುಂಗಚೇತಲ ಎಂಬಲ್ಲಿ 60 ವರ್ಷದ ವ್ಯಕ್ತಿಯ ಮರ್ಮಾಂಗವನ್ನು ಆತನ 55 ವರ್ಷದ ಪ್ರಿಯತಮೆ ಕತ್ತರಿಸಿ ಹಾಕಿದ್ದಾಳೆ ಎಂಬ ಬಗ್ಗೆ ವರದಿಯಾಗಿದೆ. ಈ ಇಬ್ಬರ ನಡುವೆ 10 ವರ್ಷಗಳಿಂದ ಅಕ್ರಮ ಸಂಬಂಧ ಇತ್ತು ಎನ್ನವಾಗಿದೆ. ಭೇಟಿಗೆ ಅಂತ ಕರೆಸಿ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ.ಆ ಮಹಿಳೆ ಹಾಗೂ ಪುರುಷನ

60 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ 55 ವರ್ಷದ ಮಹಿಳೆ..!! Read More »

ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ?

ಡಬ್ಲಿನ್ : 66 ವರ್ಷದ ಮಹಿಳೆಯ ಹೊಟ್ಟೆ ಹಾಗೂ ಕರುಳಿನಿಂದ ಬರೋಬ್ಬರಿ 55 ಬ್ಯಾಟರಿಗಳನ್ನು ವೈದ್ಯರು ಹೊರ ತೆಗೆದಿರುವ ವಿಚಿತ್ರ ಘಟನೆ ಐರ್ಲೆಂಡಿನಲ್ಲಿ ನಡೆದಿದೆ. ಮಹಿಳೆ ಉದ್ದೇಶಪೂರ್ವಕವಾಗಿಯೇ ತನ್ನನ್ನು ತಾನು ಘಾಸಿಗೊಳಿಸುವ ಉದ್ದೇಶದಿಂದ ಬ್ಯಾಟರಿಗಳನ್ನು ನುಂಗಿದ್ದಾಳೆ ಎಂದು ತಿಳಿದುಬಂದಿದೆ. ಮಹಿಳೆ ಕೈಗೆ ಸಿಕ್ಕ ಬ್ಯಾಟರಿಗಳನ್ನೆಲ್ಲಾ ನುಂಗಿರುವುದಾಗಿ ತಿಳಿಸಿದ್ದಾಳೆ. ಆದರೆ ಎಷ್ಟು ಬ್ಯಾಟರಿಗಳನ್ನು ನುಂಗಿದ್ದಾಳೆ ಎಂಬ ಲೆಕ್ಕ ಆಕೆಯೂ ಇಟ್ಟುಕೊಂಡಿರಲಿಲ್ಲ. ಆಕೆ ಆಸ್ಪತ್ರೆಗೆ ದಾಖಲಾದ ಬಳಿಕ ಆಕೆಯ ಹೊಟ್ಟೆಯ ಭಾಗದ ಎಕ್ಸ್-ರೇ ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಹಾಗೂ ಕರುಳಿನಲ್ಲಿ

ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ? Read More »

ರಾಮಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ನಿಧನ

ರಾಜಸ್ಥಾನ: ರಾಮ ಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ಅವರು ರಾಜಸ್ಥಾನದ ಜೈಪುರ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಸವಾಯಿ ಮಾನ್‌ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಇನ್ನು ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕ ಮಂಡಳಿಯಲ್ಲಿದ್ದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ

ರಾಮಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ನಿಧನ Read More »

ಉಳ್ಳಾಲ: ಬೈಕ್ ಸ್ಕಿಡ್ | ಸವಾರ ಮೃತ್ಯು, ಸಹ ಸವಾರ ಗಂಭೀರ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್, ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿರುವ ಪ್ರತಾಪ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಇನ್ನು ಪ್ರತಾಪ್ ಶೆಟ್ಟಿ ಅವರ ಚಿಕ್ಕಮ್ಮನ ಮಗ, ವೈನ್ ಆ್ಯಂಡ್ ಡೈನ್ ಬಾರ್ ಕೌಂಟರ್

ಉಳ್ಳಾಲ: ಬೈಕ್ ಸ್ಕಿಡ್ | ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಹುಣಸೂರು: ನಗರದ ಹಲವೆಡೆ ಕಳ್ಳತನ

ಸಮಗ್ರ ನ್ಯೂಸ್: ತಾಲೂಕಿನಲ್ಲಿ ಕಳ್ಳರು ಕೈಚಳಕ ಆರಂಭಿಸಿದ್ದು, ನಗರದ ಬಜಾರ್ ರಸ್ತೆಯ ಅಂಗಡಿ, ಬಾರ್‌ಗಳ ಬೀಗ ಮುರಿದು ಹಣಕ್ಕಾಗಿ ತಡಕಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದರೆ, ನಗರಕ್ಕೆ ಸಮೀಪದ ಬೆಳ್ತೂರಿನ ಐದು ಪಂಪ್ ಸೆಟ್‌ಗಳ ಕೇಬಲ್ ಕಳ್ಳತನವಾಗಿದೆ. ನಗರದ ಜನನಿಭಿಡ ಪ್ರದೇಶವಾದ ತಾ.ಪಂ.ಕಚೇರಿ ಮುಂಭಾಗದ ರೇಣುಕಾ ಬಾರ್ ಮತ್ತು ಬಜಾರ್ ರಸ್ತೆಯ ಚಾಮುಂಡೇಶ್ವರಿ ಬಾರ್ ಅಂಡ್ ರೆಸ್ಟೋರೆಂಟ್, ಟಿ.ಪಿ.ಸ್ಟೋರ್, ಇದರ ಪಕ್ಕದ ಟೀ ಅಂಗಡಿಗಳ ಬೀಗ ಒಡೆದ ಕಳ್ಳರು ಹಣಕಾಸಿಗಾಗಿ ತಡಕಾಡಿ ಬೀಡಿ-ಸಿಗರೇಟು, 800ರೂ. ಕದ್ದು ಪರಾರಿಯಾಗಿದ್ದರೆ,ಇನ್ನು

ಹುಣಸೂರು: ನಗರದ ಹಲವೆಡೆ ಕಳ್ಳತನ Read More »

ಚಿಕ್ಕಮಗಳೂರು: ಚಿಕಿತ್ಸೆಗಾಗಿ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು| ರಸ್ತೆ ಮನವಿಗೆ ಸ್ಪಂದಿಸದ ಸಚಿವರು, ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ರಸ್ತೆ ಇಲ್ಲದೆ ವೃದ್ಧೆಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ. ವೃದ್ಧೆ ವೆಂಕಮ್ಮ(85) ಇವರು ಅನಾರೋಗ್ಯಕ್ಕೆ ಒಳಗಾದವರು. ಇವರು ಮನೆ ರಸ್ತೆ ಇಲ್ಲದೆ ತಮ್ಮ ಕೆಲಸ ಕಾರ್ಯಗಳಿಗೆ ಕಾಲು ದಾರಿಯಲ್ಲಿ ಓಡಾಡುತ್ತಿದ್ದ ಆದಿವಾಸಿ ಕುಟುಂಬವಾಗಿದೆ. ಇದೀಗ ಇವರಿಗೆ ಅನಾರೋಗ್ಯ ಉಂಟಾಗಿದ್ದು ಆಸ್ಪತ್ರೆಗೆ ಸಾಗಿಸಲು ವಾಹನ ಬಾರದೆ ಮನೆಯಿಂದ ಜಮೀನಿನ ಕಾಲು ದಾರಿಯಲ್ಲಿಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದಿದ್ದಾರೆ. 2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು

ಚಿಕ್ಕಮಗಳೂರು: ಚಿಕಿತ್ಸೆಗಾಗಿ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು| ರಸ್ತೆ ಮನವಿಗೆ ಸ್ಪಂದಿಸದ ಸಚಿವರು, ಜಿಲ್ಲಾಧಿಕಾರಿ Read More »

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ ಮಾಡಿದ ಘಟನೆ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದಲ್ಲಿ ನಡೆದಿದೆ. ಈಚಿಕೆರೆಯ ರೋಷನ್ ಎಂಬುವರ ಮನೆಯಲ್ಲಿ ಮಗಳ ನಿಶ್ಚಿತಾರ್ಥಕ್ಕೆ ಮನೆಯಲಿದ್ದ ಹಸುವನ್ನು ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ಈ ವೇಳೆ ಹತ್ಯೆ ಮಾಡಿದ ಹಸುವಿನ ಮಾಂಸ ಬೇರ್ಪಡಿಸುತ್ತಿದ್ದರ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಇಬ್ಬರನ್ನು ವಶಕ್ಕೆಪಡೆದಿದ್ದಾರೆ, ತಲೆಮರೆಸಿಕೊಂಡಿರೋ ಮೂವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ Read More »