ಕ್ರೈಂ

ಕಾಬೂಲ್ ಮಸೀದಿ ಬಳಿ ಭಾರೀ ಸ್ಪೋಟ; 10ಕ್ಕೂ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಮಸೀದಿಯೊಂದರ ಬಳಿ ಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ. ನಿಖರವಾದ ಸಂಖ್ಯೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಸೀದಿ ಬಳಿಯ ಮುಖ್ಯ ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸ್ ತಂಡಗಳು ಸ್ಥಳದಲ್ಲಿದ್ದು, ತನಿಖೆ ನಡೆಯುತ್ತಿವೆ ಎಂದು ಆಂತರಿಕ ಸಚಿವ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದರು. ಪ್ರಾರ್ಥನೆಯ ನಂತರ ಜನರು ಮಸೀದಿಯಿಂದ ಹೊರ ಬರುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು […]

ಕಾಬೂಲ್ ಮಸೀದಿ ಬಳಿ ಭಾರೀ ಸ್ಪೋಟ; 10ಕ್ಕೂ ಹೆಚ್ಚು ಮಂದಿ ಸಾವು Read More »

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಮುರುಘಾ ಶ್ರೀ ಜಾಮೀನು ಅರ್ಜಿ ವಜಾ; ಜೈಲುವಾಸ ಕಂಟಿನ್ಯೂ…

ಸಮಗ್ರ ನ್ಯೂಸ್: ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪದಡಿ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಇದರಿಂದ ಮುರಾಘ ಶ್ರೀಗಳ ಜೈಲುವಾಸ ಮತ್ತೆ ಮುಂದುವರೆದಿದೆ. ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸದ್ಯ ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟೆಂಬರ್ 19ಕ್ಕೆ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಮುರುಘಾ ಶ್ರೀ ಜಾಮೀನು ಅರ್ಜಿ ವಜಾ; ಜೈಲುವಾಸ ಕಂಟಿನ್ಯೂ… Read More »

ಚಿಕ್ಕಮಂಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ/ಕಿಡಿಗೇಡಿಗಳನ್ನು ತಕ್ಷಣ ಬಂಧಿಸದಿದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ: ಪಿ.ಸುಂದರ ಪಾಟಾಜೆ,

ಸಮಗ್ರ ನ್ಯೂಸ್: ಚಿಕ್ಕಮಂಗಳೂರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ತಪ್ಪಿದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ. ಚಿಕ್ಕಮಂಗಳೂರು ನಗರದ ಹನುಮಂತ ವೃತ್ತದಲ್ಲಿ ಹಾಕಿರುವಂತ ಪ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡಿಸುತ್ತದೆ. ಆದ್ದರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದಂತ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು, ಇಲ್ಲದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಧ್ಯಮ ಮೂಲಕ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರು

ಚಿಕ್ಕಮಂಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ/ಕಿಡಿಗೇಡಿಗಳನ್ನು ತಕ್ಷಣ ಬಂಧಿಸದಿದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ: ಪಿ.ಸುಂದರ ಪಾಟಾಜೆ, Read More »

ಏರ್ ಫೋರ್ಸ್ ತರಬೇತಿ ಗೆ ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಏರ್‌ಫೋರ್ಸ್‌ ತರಬೇತಿಗೆ ಬಂದಿದ್ದ ಯುವಕ ತನ್ನನ್ನು ಕೈಬಿಟ್ಟದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆಯೊಂದು ನಡೆದಿದೆ. ಅಂಕಿತ್ ಕುಮಾರ್ (27) ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ. ಅಂಕಿತ್‌ ಕುಮಾರ್‌ ದೆಹಲಿ ಮೂಲದವನಾಗಿದ್ದು, ಇಲ್ಲಿಗೆ ಏರ್‌ಫೋರ್ಸ್‌ ತರಬೇತಿಗೆ ಬಂದಿದ್ದ. ಕಾರಣಾಂತರಗಳಿಂದ ತರಬೇತಿಯಿಂದ ಅಂಕಿತ್‌ನನ್ನು ಕೈಬಿಡಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆ‌ ಖಿನ್ನತೆಗೊಳಗಾದ ಯುವಕ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಅಂಕಿತ್ ಸಾವಿನ ಕುರಿತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಕೊಲೆಯೆಂದು ಆರೋಪಿಸಿ

ಏರ್ ಫೋರ್ಸ್ ತರಬೇತಿ ಗೆ ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು Read More »

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು

ಸಮಗ್ರ ನ್ಯೂಸ್: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು,‌‌ಪತ್ನಿಗೆ ಪತಿ ಕೈಕೊಟ್ಟಿರುವ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರಿನಿಂದ ವರದಿಯಾಗಿದೆ. ಹೆತ್ತವರು ಹಾಗೂ ಸಂಬಂಧಿಕರ ಮಾತು ಕೇಳಿ ಪತಿ ಕೈಕೊಟ್ಟಿದ್ದು, ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ಪತ್ನಿಯನ್ನ ದೂರ ಮಾಡಿದ ಹಿನ್ನಲೆ ವಂಚನೆಗೆ ಒಳಗಾದ ವಿವಾಹಿತೆ ನ್ಯಾಯಕ್ಕಾಗಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಗಂಡ ಸೇರಿದಂತೆ ಒಂದೇ ಕುಟುಂಬದ 16 ಮಂದಿ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ

ಮದುವೆ ಆಗಿ ಒಂದು ವರ್ಷಕ್ಕೆ ಕೈಕೊಟ್ಟ ಪತಿ| ದಿಕ್ಕೆಟ್ಟ ಪತ್ನಿಯಿಂದ ಪತಿ ಸೇರಿ 16 ಮಂದಿ ವಿರುದ್ದ ದೂರು Read More »

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..!

ದೆಹಲಿ: ತನ್ನ ಪತಿ ಹೋಟೆಲ್ ಕೋಣೆಯೊಂದರಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿರುವುದನ್ನು ಕಂಡ ಪತ್ನಿ ಪಾದರಕ್ಷೆಯಿಂದ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆಗ್ರಾದ ದೆಹಲಿ ಗೇಟ್ ಸಮೀಪ ನಡೆದಿರುವುದಾಗಿ ವರದಿ ತಿಳಿಸಿದೆ. ತಂದೆಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯವನ್ನು ಮಗಳು ಸೆರೆಹಿಡಿದಿದ್ದು,ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ. ಮಹಿಳೆಯನ್ನು ನೀಲಂ ಎಂದು ಗುರುತಿಸಲಾಗಿದ್ದು, ಪತಿ ದಿನೇಶ್ ಗೋಪಾಲ್ ಎಂಬುದಾಗಿ ವರದಿ ತಿಳಿಸಿದೆ. ತನ್ನ ಪತಿ ದೀರ್ಘಕಾಲದಿಂದಲೂ ಇದೇ ರೀತಿ ವರ್ತಿಸುತ್ತಿರುವುದಾಗಿ ನೀಲಂ ಸುದ್ದಿಗಾರರ ಜತೆ ಮಾತನಾಡುತ್ತ

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..! Read More »

ಬಂಟ್ವಾಳ: ನಾವೂರಲ್ಲಿ ಶಂಕಿತ ಉಗ್ರರ ಮಹಜರು-ಸದನದಲ್ಲಿ ರಾಜೇಶ್ ನಾಯ್ಕ್ ಪ್ರಸ್ತಾಪ

ಸಮಗ್ರ ನ್ಯೂಸ್: ಶಾಸಕ ರಾಜೇಶ್ ನಾಯ್ಕ್ ಅವರು ಅಧಿವೇಶನದಲ್ಲಿ ನಾವೂರ ದಲ್ಲಿ ಶಿವಮೊಗ್ಗ ದ ಆರೋಪಿಯನ್ನು ಮಹಜರು ಮಾಡಿದ ವಿಚಾರವಾಗಿ ಶೂನ್ಯ ವೇಳೆಯಲ್ಲಿ ಪ್ರಶ್ನೆ ಎತ್ತಿದ್ದಾರೆ. ಶೂನ್ಯ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿದ ಅವರು, ಈ ಪ್ರಕರಣಕ್ಕೆ ಆತನಿಗೆ ಸ್ಥಳೀಯರು ಯಾರು ಸಹಕಾರ ನೀಡಿದ್ದಾರೆ ಎಂಬುವುದನ್ನು ಸಮರ್ಪಕ ಮಾಹಿತಿ ವಿಚಾರಣೆ ನಡೆಸಿ ಬಹಿರಂಗಗೊಳಿಸಬೇಕು. ಮತ್ತು ಆರೋಪಿಗಳಿಗೆ ಸ್ಥಳಾವಕಾಶ ನೀಡಿದ್ದಾರೆಯೇ ಎಂಬುದರ ಕುರಿತು ಕೂಲಂಕಷವಾಗಿ ಪರಿಶೀಲಿಸಿ ತನಿಖೆ ನಡೆಸುವಂತೆ ಒತ್ತಾಯ ಸದನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮನವಿ ಮಾಡಿದ್ದಾರೆ.

ಬಂಟ್ವಾಳ: ನಾವೂರಲ್ಲಿ ಶಂಕಿತ ಉಗ್ರರ ಮಹಜರು-ಸದನದಲ್ಲಿ ರಾಜೇಶ್ ನಾಯ್ಕ್ ಪ್ರಸ್ತಾಪ Read More »

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಪೊಲೀಸರ ದಾಳಿ ನಡೆದ ಬಳಿಕ ಎಲ್ಲ ಕಡೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಪೊಲೀಸ್‌ ಕಮೀಷನರ್‌ಗಳು, ಎಲ್ಲ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದ

ರಾಜ್ಯದಲ್ಲಿ ಕಟ್ಟೆಚ್ಚರವಹಿಸಿ, ಸಂಘಟನೆಗಳ ಮುಖಂಡರು ಎಚ್ಚರದಿಂದಿರಿ| ಅಹಿತಕರ ಘಟನೆ ಸಾಧ್ಯತೆ ಹಿನ್ನಲೆ ಪೊಲೀಸರಿಂದ ಹೈ ಅಲರ್ಟ್ Read More »

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ Read More »

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್ Read More »