ಕ್ರೈಂ

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನನ್ನು ಪೊಲೀಸರು ಬಂಧಿಸಿದ್ದಾರೆ. ಗಬ್ಬೂರು ಹೋಬಳಿಯ ಬೂರಿನಾಳ ಗ್ರಾಮದ ರೈತ ಸಿದ್ದಯ್ಯ ಪೂಜಾರಿ ತನ್ನ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಮಾಹಿತಿ ಪಡೆದ ಪೋಲಿಸರು ದಾಳಿ ನಡೆಸಿ ಸುಮಾರು 1.49 ಕೆ.ಜಿ ಒಣ ಗಾಂಜಾ, 760 ಗ್ರಾಂ ಹಸಿ ಗಾಂಜಾ ಮತ್ತು 2750 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಗಬ್ಬೂರು ಠಾಣೆಯ ಪೊಲೀಸರು ಆರೋಪಿ […]

ಸ್ವಂತ ಜಮೀನಿನಲ್ಲಿ ಗಾಂಜಾ ನಾಟಿ ಮಾಡಿದ್ದ ರೈತನ ಬಂಧಿಸಿದ ಪೋಲಿಸರು Read More »

ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್/ಕಿಡಿಗೇಡಿಗಳಿಂದ ಅಶ್ಲೀಲ ವೀಡಿಯೋ ಅಪ್‍ ಲೋಡ್

ಚಾಮರಾಜನಗರ: ಅಪಾರ ಭಕ್ತ ಸಾಗರವನ್ನೇ ಹೊಂದಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್ ಮಾಡಿ ಅಶ್ಲೀಲ ವೀಡಿಯೋಗಳನ್ನು ಅಪ್‍ಲೋಡ್ ಮಾಡುವ ಮೂಲಕ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. 2013ರಲ್ಲಿ ಕೊಳ್ಳೆಗಾಲದ ಸಂಜಯ್ ಎಂಬುವರು ಕ್ರಿಯೇಟ್ ಮಾಡಿದ್ದ ಶ್ರೀ ಮಲೆಮಹದೇಶ್ವರ ಸ್ವಾಮಿ ಫೇಸ್‍ಬುಕ್ ಪೇಜ್‍ನಲ್ಲಿ 17 ಸಾವಿರ ಫಾಲೋವರ್ಸ್ ಇದ್ದಾರೆ. ಶ್ರೀ ಮಲೆಮಹದೇಶ್ವರ ಸ್ವಾಮಿಯ ಮಹಿಮೆ, ಪೂಜೆ ಪುನಸ್ಕಾರಗಳ ಬಗ್ಗೆ ಮಾಹಿತಿ ಅಪ್ಲೋಡ್ ಆಗುತ್ತಿದ್ದ ಪೇಜ್‍ನಲ್ಲಿಗ ದುಷ್ಕರ್ಮಿಗಳು ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದಾರೆ.  ಕಳೆದ ಎರಡು ತಿಂಗಳ ಹಿಂದೆ

ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್/ಕಿಡಿಗೇಡಿಗಳಿಂದ ಅಶ್ಲೀಲ ವೀಡಿಯೋ ಅಪ್‍ ಲೋಡ್ Read More »

ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ

ಸಮಗ್ರ ನ್ಯೂಸ್: ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ವಾಮದಪದವು ನಿವಾಸಿಯೋರ್ವರಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈತ ಸೋಶಿಯಲ್ ಮಿಡಿಯಾದಲ್ಲಿ ಕಳೆದ ಹಲವು ದಿನಗಳಿಂದ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡುತ್ತಿದ್ದ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುಂಜಾಲಕಟ್ಟೆ ಪೊಲೀಸರು ಕಳೆದ ಫೆಬ್ರವರಿ ತಿಂಗಳಿನಲ್ಲಿ ಈತನ ಮೇಲೆ ತಹಶೀಲ್ದಾರ್ ಅವರಿಗೆ ಪಿ.ಎ.ಆರ್. ವರದಿಯೊಂದನ್ನು ಸಲ್ಲಿಸಿದ್ದರು. ಈತನ ಮೇಲೆ ಇಂತಹ 5 ಪ್ರಕರಣಗಳಿದ್ದು,

ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ Read More »

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ Read More »

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ Read More »

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ

ಆಗ್ರಾ : ತಾಜ್​ಮಹಲ್​ನಲ್ಲಿ ಮಂಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಇತ್ತೀಚೆಗೆ ತಾಜ್ ಮಹಲ್ ನೋಡಲು ಬಂದಿದ್ದ ಸ್ಪೇನ್ ಮಹಿಳೆಯ ಮೇಲೆ ಮಂಗಗಳು ದಾಳಿ ನಡೆಸಿದ್ದವು. ಇಂದು ತಾಜ್​ಮಹಲ್​ನ ಈಸ್ಟ್ ಗೇಟ್‌ನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಮಂಗಗಳು ದಾಳಿ ಮಾಡಿವೆ. ಮಂಗಗಳ ಗುಂಪೊಂದು ಈಸ್ಟ್ ಗೇಟ್‌ನಲ್ಲಿ ಟಿಕೆಟ್​ಗಾಗಿ ನಿಂತಿದ್ದ ಸ್ಪ್ಯಾನಿಷ್ ಪ್ರವಾಸಿ ಯುವತಿ ಕ್ರಿಸ್ಟಿನಾ ಮೇಲೆ ದಾಳಿ ಮಾಡಿವೆ. ಕೂಡಲೇ ಅವರರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಟಿಕೆಟ್​ ಪಡೆಯಲು ಕ್ರಿಸ್ಟಿನಾ ನಿಂತಿದ್ದಾಗ ಸುತ್ತುವರೆದ

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ Read More »

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್ ನಗರ ತಾಲೂಕಿನ ಭೇರ್ಯ ಸಮೀಪದ ಸಂಬ್ರವಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಬ್ರವಳ್ಳಿ ಗ್ರಾಮದಲ್ಲಿ ಬೆಟ್ಟಪ್ಪ (50) ಮತ್ತು ರುಕ್ಮಿಣಿ(43) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಭೇರ್ಯ ಗ್ರಾಮದ ಜಮೀರ್ ಸಾಹೇಬ್ ಅವರ ತೋಟದಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಕ್ಕಳ ಮದುವೆ ಮಾಡಿ, ಅಲ್ಲದೆ ಮನೆ ಕಟ್ಟಿ ಕೈ ತುಂಬ ಸಾಲ ಮಾಡಿದ್ದರು. ಇದೀಗ ಮಾಡಿದ ಸಾಲಕ್ಕೆ ಹೆದರಿ ಅದೇ ತೋಟದ ಬಾವಿಯಲ್ಲಿ ಇಬ್ಬರು

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ Read More »

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ

ಸಮಗ್ರ ನ್ಯೂಸ್: ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವಕಾಶಿ ಯು.ಆರ್ ಹೇಳಿದರು. ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರಲ್ಲದೇ ಇರುವವರು ಅನಧಿಕೃತವಾಗಿ ವಾಹನಗಳಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಮತ್ತು ಯೆಲ್ಲೋ ಬೋರ್ಡ್ ವಾಹನದಲ್ಲಿ ಪ್ರೆಸ್ ಬೋರ್ಡ್ ಹಾಕಿಕೊಂಡು ಪತ್ರಕರ್ತರೆಂದು ಓಡಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಾಲ್ಲೂಕು ಕರ್ನಾಟಕ

ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಿ Read More »

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ

ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ನೇಮಕಾತಿಯಲ್ಲೂ ವಿಜಯಪುರ ಜಿಲ್ಲೆಗೂ ನಂಟು ಹೊಂದಿದ್ದು,ಅಕ್ರಮವಾಗಿ ನೇಮಕಾತಿಯಾಗಿರೋ ಮತ್ತೋರ್ವ ಶಿಕ್ಷಕನ ಬಂಧನವಾಗಿದೆ. ಬಂಧಿತರ ಸಂಖ್ಯೆ ಇದೀಗ ಮೂರಕ್ಕೇರಿದೆ. ವಿಜಯಪುರ ಜಿಲ್ಲಾ ಮೂಲದ ಅಶೋಕ ಚವ್ಹಾಣ್ ಬಂಧಿತ ಮತ್ತೋರ್ವ ಶಿಕ್ಷಕರಾಗಿದ್ದಾರೆ. ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ್ ಇವರ ವಿರುದ್ಧ ಸೂಕ್ತ ಮಾಹಿತಿ ಕಲೆ ಹಾಕಿ ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿರೋ ಸಿಓಡಿ ಅಧಿಕಾರಿಗಳು ಇದೀಗ

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ Read More »