ಕ್ರೈಂ

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ

ಸಮಗ್ರ ನ್ಯೂಸ್ : ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿದ ಘಟನೆಯೊಂದು ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ವೇಳೆ ನಿಯಂತ್ರಣ ತಪ್ಪಿ […]

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ Read More »

ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್

ಸಮಗ್ರ ನ್ಯೂಸ್ : ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ವಿಶ್ ಮಾಡುತ್ತಲೇ ಸಾಕಷ್ಟು ಖ್ಯಾತಿ ಗಳಿಸಿದ ಕಾಫಿ ನಾಡು ಚಂದುಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ಚಿಕ್ಕಮಗಳೂರಿನಲ್ಲಿ ಆಟೋ ಓಡಿಸಿಕೊಂಡು ಸ್ವತಃ ಪ್ರತಿಭೆಯಿಂದಲೇ ಮೇಲೆ ಬಂದಿರೋ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ನಾನು ಶಿವಣ್ಣ ಪುನೀತ್ ಅಣ್ಣನ ಅಭಿಮಾನಿ ಎಂದು ವೀಡಿಯೋ ಶುರು ಮಾಡುತ್ತಿದ್ದ ಚಂದು ಅವರ ಇನ್ಸ್ಟಾಗ್ರಾಂ ಅಕೌಂಟ್ ಕಾಣೆಯಾಗಿದೆ. ಬರ್ತ್‌ಡೇ ವಿಶ್ ಮಾಡುವ ಮೂಲಕ 4 ಲಕ್ಷಕ್ಕೂ ಅಧಿಕ ಫ್ಯಾನ್ಸ್

ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ Read More »

ಪ್ರವೀಣ್ ನೆಟ್ಟಾರು ಕನಸಿನ ಮನೆಯನ್ನು ನನಸಾಗಿಸಲು ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಸ್ಥರ ಜೊತೆ ಮಾತುಕತೆ

ಸಮಗ್ರ ನ್ಯೂಸ್ : ದುಷ್ಕರ್ಮಿಗಳ ದಾಳಿಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಜೊತೆ ಕುಂಜಾಡಿಯಲ್ಲಿ ಮಾತುಕತೆ ನಡೆಸಿದರು. ಮೊನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಆಜ್ಞೆ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಪ್ರವೀಣ್ ಅವರ ಸ್ವಗೃಹ

ಪ್ರವೀಣ್ ನೆಟ್ಟಾರು ಕನಸಿನ ಮನೆಯನ್ನು ನನಸಾಗಿಸಲು ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಸ್ಥರ ಜೊತೆ ಮಾತುಕತೆ Read More »

ಹೆಸ್ಕಾಂ ನೌಕರ ನೇಣಿಗೆ ಶರಣು

ಸಮಗ್ರ ನ್ಯೂಸ್ : ಹೆಸ್ಕಾಂ ನೌಕರ ನೇಣಿಗೆ ಶರಣಾದ ಘಟನೆಯೊಂದು ಅಥಣಿ(ಬೆಳಗಾವಿ) ಪಟ್ಟಣದ ಹಲ್ಯಾಳ ಸರ್ಕಲ್‌ಗೆ ಹೊಂದಿಕೊಂಡಿರುವ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ನಡೆದಿದೆ. ಮಂಜುನಾಥ ಮುತ್ತಗಿ (35) ಮೃತರೆಂದು ಗುರುತಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಅಥಣಿ ವಿದ್ಯುತ್ ಇಲಾಖೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‌ಗೆ ಬೈಕ್ ಸಹಾಯದಿಂದ ನೇಣು ಬಿಗಿದುಕೊಂಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಸ್ಕಾಂ ನೌಕರ ನೇಣಿಗೆ ಶರಣು Read More »

ಮುರುಘಾ ಶ್ರೀ ಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಸಮಗ್ರ ನ್ಯೂಸ್ : ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್‌ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ

ಮುರುಘಾ ಶ್ರೀ ಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ Read More »

ಕೊಲ್ಲೂರು ಕ್ಷೇತ್ರದ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆ ಮೃಹದೇಹ ಪತ್ತೆ

ಸಮಗ್ರ ನ್ಯೂಸ್: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್‌ ಅವರ ಪತ್ನಿ ಶಾಂತಿ ಶೇಖರನ್‌(42) ಅವರ ಮೃತದೇಹ ಸೆ. 11ರ ಸಂಜೆ ಪತ್ತೆಯಾಗಿದೆ. ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ

ಕೊಲ್ಲೂರು ಕ್ಷೇತ್ರದ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆ ಮೃಹದೇಹ ಪತ್ತೆ Read More »

ಕಾಸರಗೋಡಿನಲ್ಲಿ ಸುಳ್ಯ ಮೂಲದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾಸರಗೋಡಿನ ಬೋವಿಕಾನದಲ್ಲಿ ಸುಳ್ಯ ತಾಲೂಕಿನ ವಳಲಂಬೆಯ ಯುವಕನೋರ್ವ ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಥಾಮಸ್(31) ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಬೋವಿಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಾಸರಗೋಡಿನಲ್ಲಿ ಸುಳ್ಯ ಮೂಲದ ಯುವಕ ಆತ್ಮಹತ್ಯೆ Read More »

ಸುಳ್ಯ: ಆತ್ಮಹತ್ಯೆಗೆ ಶರಣಾದ ಯುವಕ; ಕಾರಣ ನಿಗೂಢ

ಸಮಗ್ರ ನ್ಯೂಸ್ : ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಯಲ್ಲಿ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32) ಮನೆಯವರು ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಈತ ಸದ್ಯ ವರ್ಕ್ ಪ್ರಂ ಹೋಂ ನಲ್ಲಿ ಇದ್ದನೆಂದು ತಿಳಿದುಬಂದಿದೆ. ಸ್ಥಳದಲ್ಲಿ

ಸುಳ್ಯ: ಆತ್ಮಹತ್ಯೆಗೆ ಶರಣಾದ ಯುವಕ; ಕಾರಣ ನಿಗೂಢ Read More »

ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ

ಸಮಗ್ರ ನ್ಯೂಸ್: ಮೈಸೂರು ಡಿಸಿ ಆಗಿದ್ದಾಗ ಐಎಎಸ್ ಅಧಿಕಾರಿ ರೋಹಿಣಿಯಿಂದ ಹಲವು ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಸಂಬಂಧ ರೋಹಿಣಿ ವಿರುದ್ಧ ಮಾನನಷ್ಟ ಕೇಸ್ ದಾಖಲು ಮಾಡುವುದಾಗಿ ಜೆಡಿಎಸ್​​ ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ನಗರದಲ್ಲಿ ಶಾಸಕ ಸಾ. ರಾ ಮಹೇಶ್, ವಕೀಲ್ ಅರುಣ್ ಕುಮಾರ್ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ ಐಶಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರಿ ಹಣ ರ್ದುವಿನಿಯೋಗ, ಕೋವಿಡ್ ಸಂದರ್ಭದ ಕಾರ್ಯವೈಖರಿ

ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ Read More »

ಸಿಡಿಲು ಬಡಿದು ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಸತತವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ನಲುಗಿ ಹೋಗಿದೆ ಅತಿವೃಷ್ಟಿ ಹಾಗೂ ನೆರೆ ಭೀತಿ ಜನರನ್ನು ತಲ್ಲಣಗೊಳಿಸಿದೆ. ಶನಿವಾರ ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯ ನಂದಮ್ಮ (35) ಹಾಗೂ ದೇವತ್ಕಲ್ ಗ್ರಾಮದ ರಾಜು ಸಿಂಗ್ (38) ಮೃತರು. ತಮ್ಮ ಭತ್ತದ ಜಮೀನಿನಲ್ಲಿನ ಕಳೆ ತೆಗೆದು ವಾಪಸ್ ಬರುವಾಗ ಸಿಡಿಲು ಬಡಿದು ನಂದಮ್ಮ ಮೃತಪಟ್ಟರೆ, ಮನೆ ಮುಂದೆ ನಿಂತಿದ್ದಾಗ ಸಿಡಿಲು ಬಡಿದು ರಾಜು ಸಿಂಗ್ ಕೊನೆಯುಸಿರೆಳೆದರು.

ಸಿಡಿಲು ಬಡಿದು ಇಬ್ಬರು ದುರ್ಮರಣ Read More »