ಕ್ರೈಂ

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು

ಸಮಗ್ರ ನ್ಯೂಸ್: “ನೀರು ಕೊಡೋ ಮಗನೇ’ ಎಂದು ಏಕವಚನದಲ್ಲಿ ಕೇಳಿದ ವಿಚಾರಕ್ಕೆ ಇಬ್ಬರು ಆಟೋ ಚಾಲಕರ ನಡುವೆ ನಡೆದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‌.ಟಿ.ನಗರ ನಿವಾಸಿ ಸಿದ್ದಿಕ್‌ (23) ಕೊಲೆಯಾದ ಆಟೋ ಚಾಲಕ. ಈ ಸಂಬಂಧ ಅಜಯ್‌ ಎಂಬ ಆಟೋ ಚಾಲಕನನ್ನು ಬಂಧಿಸಲಾಗಿದೆ. ಜಾಲಹಳ್ಳಿ ಕ್ರಾಸ್‌ನಲ್ಲಿರುವ ಆಟೋ ನಿಲ್ದಾಣದಲ್ಲಿ ರಾತ್ರಿ 11.30ರ ಸುಮಾರಿಗೆ ಅಜಯ್‌ ಎಂಬಾತ ಆಟೋ ನಿಲ್ಲಿಸಿಕೊಂಡು ನಿಂತಿದ್ದ. ಅದೇ ವೇಳೆಯಲ್ಲಿ ಸಿದ್ದಿಕ್‌ ಆಟೋ ನಿಲ್ದಾಣಕ್ಕೆ ಬಂದಿದ್ದಾನೆ. ಆಗ […]

” ನೀರು ಕೊಡೋ ಮಗನೇ ಏಕವಚನದಲ್ಲಿ ಕೇಳಿದಕ್ಕೆ ಎರಡು ಆಟೋ ಚಾಲಕರ ಗಲಾಟೆಯಲ್ಲಿ ಓರ್ವ ಸಾವು Read More »

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ ಪ್ರಮುಖರಾಗಿದ್ದಾರೆ.

ಕನ್ನಡದ ಖ್ಯಾತ ಲೇಖಕ, ಸಮಾಜಸೇವಕ ಡಾ.ರಾಮಕೃಷ್ಣ ರಾವ್ ನಿಧನ Read More »

ಹೊಸ ತಿರುವು ತೆಗೆದುಕೊಂಡ ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ ! /ಮೇಲಾಧಿಕಾರಿ, ಲೈನಮನ್ ಕಿರುಕುಳದಿಂದ ಆತ್ಮಹತ್ಯೆ, ಡೆತ್ ನೋಟ್‌ನಲ್ಲಿ ಉಲ್ಲೇಖ.

ಅಥಣಿ : ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಮೇಲಾಧಿಕಾರಿ, ಲೈನ್ ಮನ್ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಹೊಸತಿರುವು ಪಡೆದುಕೊಂಡಿದೆ. ಕಳೆದ ಸೋಮವಾರ ಮಂಜುನಾಥ ಗಂಗಾಧರ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೆಸ್ಕಾಂ ಗುತ್ತಿಗೆ ಕಾರ್ಮಿಕ. ಮೂಲತಃ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ನಿವಾಸಿಯಾಗಿದ್ದು. ಸಧ್ಯ ಅಥಣಿ ಹೆಸ್ಕಾಂ ಕಚೇರಿಯಲ್ಲಿ 07 ವರ್ಷದಿಂದ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸ್ಥಳಕ್ಕೆ ಅಥಣಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸ ತಿರುವು ತೆಗೆದುಕೊಂಡ ಅಥಣಿ ಹೆಸ್ಕಾಂ ನೌಕರನ ಆತ್ಮಹತ್ಯೆ ! /ಮೇಲಾಧಿಕಾರಿ, ಲೈನಮನ್ ಕಿರುಕುಳದಿಂದ ಆತ್ಮಹತ್ಯೆ, ಡೆತ್ ನೋಟ್‌ನಲ್ಲಿ ಉಲ್ಲೇಖ. Read More »

ತವರಿನಿಂದ ಬರಲೊಪ್ಪದ ಪತ್ನಿಯ ಕರೆತರಲು ಗುಂಡು ಹಾರಿಸಿದ ಭೂಪ

ಸಮಗ್ರ ನ್ಯೂಸ್: ತವರಿನಿಂದ ವಾಪಸ್ ಬರಲೊಪ್ಪದ ಪತ್ನಿಯ ಮೇಲೆ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂಧಗಿಯ ಶಿವಾನಂದ ಕಾಲೆಬಾಗ ಗುಂಡು ಹಾರಿಸಿದ ಆರೋಪಿ. ಘಟನೆಗೆ ಸಂಬಂಧಿಸಿದಂತೆ ಈತನ ಪತ್ನಿ ಪ್ರೀತಿ ಅಥಣಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಥಣಿಯ ಪ್ರೀತಿ ಎಂಬಾಕೆಯನ್ನು ಸಿಂಧಗಿಯ ಶಿವಾನಂದನಿಗೆ 4 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಕೆಲವು ತಿಂಗಳು ಚೆನ್ನಾಗಿ ಜೀವನ ಮಾಡಿಕೊಂಡಿದ್ದ ಆರೋಪಿ ಬಳಿಕ ಬೇರೊಂದು

ತವರಿನಿಂದ ಬರಲೊಪ್ಪದ ಪತ್ನಿಯ ಕರೆತರಲು ಗುಂಡು ಹಾರಿಸಿದ ಭೂಪ Read More »

ಹೋಟೆಲ್ ನಲ್ಲಿ ಅಗ್ನಿ ದುರಂತ ; 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ : ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಹೈದಾರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ. ಸಿಕಂದರಾಬಾದ್ ನ ರೂಬಿ ಹೋಟೆಲ್ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ರೂಬಿ ಎಲೆಕ್ಟ್ರಿಕ್ ವೆಹಿಕಲ್ ಶೋರಂ ನಲ್ಲಿ ಬ್ಯಾಟರಿ ಸ್ಪೋಟಗೊಂಡು, ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಹೋಟೆಲ್ ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೋಟೆಲ್ ನಲ್ಲಿ ಅಗ್ನಿ ದುರಂತ ; 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ Read More »

ಸಿಸಿ ಕ್ಯಾಮರಾ ಮತ್ತು ತಂತಿ ತಡೆಬೇಲಿ ಧ್ವಂಸ ನಾಲ್ವರ ಬಂಧನ

ಮಂಗಳೂರು: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿದ್ದ ಹಿನ್ನೆಲೆ ಹಾಕಿದ್ದ ಸಿಸಿ ಕ್ಯಾಮರ ಮತ್ತು ತಂತಿ ತಡೆಬೇಲಿ ಧ್ವಂಸಗೈದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು ಕೃತ್ಯಕ್ಕೆ ಬಳಸಿದ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಡ್ಯಾರ್ ಸಾಯಿ ನಗರ ನಿವಾಸಿ ಸೂರಜ್ , ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್ ,ತಲಪಾಡಿ ನಿವಾಸಿ ಅಖಿಲ್ ,ಸೋಮೇಶ್ವರ ನಿವಾಸಿ ಪ್ರಜ್ವಲ್ ಬಂಧಿತರು ಅವರು ಕೃತ್ಯಕ್ಕೆ ಬಳಸಿದ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸೋಮೇಶ್ವರ ದೇವಸ್ಥಾನ ಬಳಿಯಿಂದ ಮತ್ತು ಗಡಿಭಾಗ ಮೂಡ

ಸಿಸಿ ಕ್ಯಾಮರಾ ಮತ್ತು ತಂತಿ ತಡೆಬೇಲಿ ಧ್ವಂಸ ನಾಲ್ವರ ಬಂಧನ Read More »

ಮಂಗಳೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾ.ಮಂಡಳಿ ಸದಸ್ಯರಾಗಿ ಪಿ.ಬಿ ಹರೀಶ್ ರೈ

ಸಮಗ್ರ ನ್ಯೂಸ್: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ. ಇವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.

ಮಂಗಳೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾ.ಮಂಡಳಿ ಸದಸ್ಯರಾಗಿ ಪಿ.ಬಿ ಹರೀಶ್ ರೈ Read More »

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ

ಸುಳ್ಯ: ಬಿಜೆಪಿ ಕಾರ್ಯಕರ್ತ ನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಸಫ್ರೀದ್ ಎಂಬಾತನನ್ನು ಜಾಮೀನಿನ ಮೇಲೆ ಹೊರಬಂದಿದ್ದಾನೆ. ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ಎಂಬಾತ ಪ್ರಶಾಂತ್ ಎಂಬವರಿಗೆ, ಜೀವ ಬೆದರಿಕೆ ಒಡ್ಡಿರುವುದಾಗಿ ಶನಿವಾರ ಪೊಲೀಸ್ ದೂರು ನೀಡಲಾಗಿತ್ತು. ಪೊಲೀಸರು ಬಜ್ಪೆಯಲ್ಲಿ ಆರೋಪಿ ಸಫ್ರೀದ್ ನನ್ನು ಬಂಧಿಸಿದ್ದರು. ರವಿವಾರ ಆತನನ್ನು ಶರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ Read More »

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ

ಸಮಗ್ರ ನ್ಯೂಸ್ : ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿದ ಘಟನೆಯೊಂದು ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ವೇಳೆ ನಿಯಂತ್ರಣ ತಪ್ಪಿ

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ Read More »

ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್

ಸಮಗ್ರ ನ್ಯೂಸ್ : ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ವಿಶ್ ಮಾಡುತ್ತಲೇ ಸಾಕಷ್ಟು ಖ್ಯಾತಿ ಗಳಿಸಿದ ಕಾಫಿ ನಾಡು ಚಂದುಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ಚಿಕ್ಕಮಗಳೂರಿನಲ್ಲಿ ಆಟೋ ಓಡಿಸಿಕೊಂಡು ಸ್ವತಃ ಪ್ರತಿಭೆಯಿಂದಲೇ ಮೇಲೆ ಬಂದಿರೋ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ನಾನು ಶಿವಣ್ಣ ಪುನೀತ್ ಅಣ್ಣನ ಅಭಿಮಾನಿ ಎಂದು ವೀಡಿಯೋ ಶುರು ಮಾಡುತ್ತಿದ್ದ ಚಂದು ಅವರ ಇನ್ಸ್ಟಾಗ್ರಾಂ ಅಕೌಂಟ್ ಕಾಣೆಯಾಗಿದೆ. ಬರ್ತ್‌ಡೇ ವಿಶ್ ಮಾಡುವ ಮೂಲಕ 4 ಲಕ್ಷಕ್ಕೂ ಅಧಿಕ ಫ್ಯಾನ್ಸ್

ದುಷ್ಕರ್ಮಿಗಳಿಂದ ಕಾಫಿ ನಾಡು ಚಂದು ಅವರ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ Read More »