ಕ್ರೈಂ

ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದ ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣ ಕೊಲೆ ಎಂದು ಇದೀಗ ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದು, ಕೊಲೆ ಆರೋಪದಲ್ಲಿ ಮಹಿಳೆಯ ಪತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಮೋಹಿನಿ(36) ಮೃತಪಟ್ಟವರಾಗಿದ್ದು, ಕೊಲೆ ಆರೋಪದಲ್ಲಿ ಆಕೆಯ ಪತಿ ಗಣೇಶ್‌(48)ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆ ನಿವಾಸಿಯಾಗಿರುವ ಗಣೇಶ್‌ ಸುಳ್ಯ ತಾಲೂಕು ಕೊಲ್ಲಮೊಗ್ರುವಿನ ಮೋಹಿನಿ ಅವರನ್ನು 8 ವರ್ಷಗಳ ಹಿಂದೆ ಮದುವೆಯಾಗಿದ್ದು, ಬಳಿಕ ಪತಿ, ಪತ್ನಿ ಬೆಳ್ತಂಗಡಿ ತಾಲೂಕಿನ […]

ಬೆಳ್ತಂಗಡಿ: ಆ ಮಹಿಳೆಯದ್ದು ಬರೀ ಸಾವಲ್ಲ, ಅದೊಂದು ಕೊಲೆ| ಪತಿಯೇ ಕೊಲೆ ಆರೋಪಿ Read More »

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ

ಸಮಗ್ರ ನ್ಯೂಸ್: ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಾಗ್ದಾಳಿ

ಶಿಕ್ಷಣ ಇಲಾಖೆಯಲ್ಲೂ ಲಂಚಾವತಾರ| ಸರಣಿ ಟ್ವೀಟ್ ಮೂಲಕ ಸಿದ್ದು ಆಕ್ರೋಶ| ಮಾಧ್ಯಮ ವರದಿ ಕುರಿತು ಪ್ರಸ್ತಾಪ Read More »

ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ

ಸಮಗ್ರ ನ್ಯೂಸ್: ಟಾಟಾ ಸನ್ಸ್‌ನ ಮಾಜಿ ಚೇರ್ಮನ್‌ ಹಾಗೂ ವಿವಾದಿತವಾಗಿ ಚೇರ್ಮನ್‌ ಸ್ಥಾನದಿಂದ ಹೊರಬಿದ್ದಿದ್ದ ಕೈಗಾರಿಕೋದ್ಯಮಿ ಸೈರಸ್‌ ಮಿಸ್ತ್ರಿ ಭಾನುವಾರ ಮುಂಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಾಲ್ಗಾರ್‌ ಜಿಲ್ಲೆಯ ಈ ಅಪಘಾತ ಸಂಭವಿಸಿದ್ದು, ಸೈರಸ್‌ ಮಿಸ್ತ್ರಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ ಎಂದು ಪಾಲ್ಘಾರ್‌ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಘರ್ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಅಪಘಾತದ ನಂತರ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ Read More »

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ

ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ. ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡವರು. ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ದಂದು ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ Read More »

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿದ ಘಟನೆಯೊಂದು ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಲೋಕೇಶ್ ಅವರ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ತಮ್ಮ ಜಮೀನಿನಲ್ಲಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೂಪ(38) ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ (4) ಸಾವನ್ನಪ್ಪಿದ್ದಾರೆ.

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ತಾಯಿ ಆತ್ಮಹತ್ಯೆ Read More »

ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು,ಹಲವರಿಗೆ ಗಾಯ

ಸಮಗ್ರ ನ್ಯೂಸ್ : ದರ್ಶನಕ್ಕೆ ಭಕ್ತರ ಭಾರ ತಾಳದೇ ಜಿಲ್ಲೆಯ ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು, ಹಲವರಿಗೆ ಗಾಯಗಳಾದ ಘಟನೆಯೊಂದು ಸಿಂದಗಿ ಪಟ್ಟಣದಲ್ಲಿ ಶನಿವಾರ ಸಂಭವಿಸಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಗೋಪುರ ಸಹಿತ ಸ್ವರ್ಣ ವರ್ಣದ ದೇವಾಲಯ ಮಾದರಿಯಲ್ಲಿ ಗಣೇಶೋತ್ಸವ ಮಂಟಪ ನಿರ್ಮಿಸಲಾಗಿತ್ತು. ಗಣೇಶ ಮಂಟಪ ಇದೇ ಕಾರಣಕ್ಕೆ ಜನಾಕರ್ಷಣೆಗೆ ಕಾರಣವಾಗಿತ್ತು. ಆಕರ್ಷಕ ಅಲಂಕೃತ ಮಂಟಪ ವೀಕ್ಷಿಸಲು ಶನಿವಾರ ಭಾರಿ ಸಂಖ್ಯೆಯಲ್ಲಿ ಜನ ಸಾಗರವೇ ಮಂಟಪಕ್ಕೆ ಆಗಮಿಸಿತ್ತು. ಇದರಿಂದ ಭಾರ ತಾಳಲಾರದೇ ದೇವಾಲಯ

ಸಾರ್ವಜನಿಕ ಗಣೇಶ ಮಂಟಪ ಕುಸಿದು ಬಿದ್ದು,ಹಲವರಿಗೆ ಗಾಯ Read More »

ಮಂಗಳೂರು: ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ| ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಸಮಗ್ರ ನ್ಯೂಸ್: ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದೂ ಕಾರ್ಯಕರ್ತ ಮಂಗಳೂರಿನ‌ ಜಯಂತ್ ಎಸ್. ಕುಂಪಲ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ಆತ್ಮಹತ್ಯೆಗೆ ಶರಣಾಗಿದ್ದು, ಮನೆಯ ಹಾಲ್ ನಲ್ಲಿ ಶಾಲ್ ನಲ್ಲಿ ಕತ್ತಿಗೆ ಬಿಗಿದು ಪ್ರಾಣ ಬಿಟ್ಟಿದ್ದಾರೆ. ಜಯಂತ್ ಅವರು ಸಕ್ರಿಯ ಈ ಹಿಂದೆ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು

ಮಂಗಳೂರು: ಹಿಂದೂ ಯುವಸೇನೆ ಕಾರ್ಯಕರ್ತ ಆತ್ಮಹತ್ಯೆ| ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Read More »

ತನ್ನ ಪತ್ನಿ ದಪ್ಪಗಾಗಿದ್ದಾಳೆ ಎಂದ ಪತಿ ಮಾಡಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಮದುವೆಯಾದ ಬಳಿಕ ತನ್ನ ಪತ್ನಿ ದಪ್ಪಗಾಗಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ತಲಾಕ್ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಬೆಳಕಿಗೆ ಬಂದಿದೆ. ಮೀರತ್ ನ ಮಹಮ್ಮದ್ ಸಲ್ಮಾನ್ ಎಂಬಾತ ಎಂಟು ವರ್ಷಗಳ ಹಿಂದೆ ನಜ್ಮಾರನ್ನು ವಿವಾಹವಾಗಿದ್ದು, ದಂಪತಿಗೆ ಏಳು ವರ್ಷದ ಮಗ ಕೂಡ ಇದ್ದಾನೆ. ಮದುವೆ ನಂತರ ಪತ್ನಿ ದಪ್ಪಗಾಗಿದ್ದರು ಎನ್ನಲಾಗಿದೆ. ಹೀಗಾಗಿ ಪದೇಪದೇ ಆಕೆಯನ್ನು ಮೂದಲಿಸುತ್ತಿದ್ದ ಮೊಹಮ್ಮದ್ ಸಲ್ಮಾನ್, ಇನ್ನಿಲ್ಲದಂತೆ ಕಿರುಕುಳ ನೀಡಿದ್ದಲ್ಲದೆ ಕಳೆದ ತಿಂಗಳು ಆಕೆಯನ್ನು ಮನೆಯಿಂದ ಹೊರ ಹಾಕಿದ್ದ

ತನ್ನ ಪತ್ನಿ ದಪ್ಪಗಾಗಿದ್ದಾಳೆ ಎಂದ ಪತಿ ಮಾಡಿದ್ದೇನು ಗೊತ್ತಾ? Read More »

ಬೆಳ್ತಂಗಡಿ: ಅಪ್ರಾಪ್ತೆಯ ಮನೆಯಲ್ಲಿ ನೈಟ್ ಡ್ಯೂಟಿ ಮಾಡ್ತಿದ್ದ ಯುವಕ| ಕಾದು ಕುಳಿತು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!!

ಸಮಗ್ರ ನ್ಯೂಸ್: ಮನೆಗೆ ರಾತ್ರಿ ಬಂದ ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿ‌ ನಡೆದಿದೆ. ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಯಲ್ಲಿ ನೈಟ್ ಡ್ಯೂಟಿ ಮಾಡ್ತಿದ್ದ ಯುವಕ| ಕಾದು ಕುಳಿತು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!! Read More »

ಮೂಡಿಗೆರೆ: ಅಪರಿಚಿತ ವಾಹನ ಡಿಕ್ಕಿಯಿಂದ ರಸ್ತೆಯಲ್ಲಿ ಮಲಗಿದ್ದ ದನಗಳ ಭೀಕರ ಸಾವು

ಸಮಗ್ರ ನ್ಯೂಸ್: ಅಪರಿಚಿತ ವಾಹನಗಳು ಡಿಕ್ಕಿಯಿಂದ ರಸ್ತೆ ಮಧ್ಯದಲ್ಲಿ ಮಲಗಿದ್ದ ದನಗಳ ಭೀಕರ ಸಾವನಪ್ಪಿದ ಘಟನೆ ಶನಿವಾರ ಬೆಳೆಗ್ಗೆ ಮೂಡಿಗೆರೆ ತಾಲೂಕಿನ ಬಗ್ಗಸಗೊಡು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ದೇಹ ಛಿದ್ರಗೊಂಡು ಸ್ಥಳದಲ್ಲೇ ಮೂರು ದನಗಳು ಮೃತಪಟ್ಟಿವೆ. ಇನ್ನೂ ದಿನಾ ಹಗಲು ರಾತ್ರಿ ವಾಹನ ಸಂಚಾರ ಮಾಡುವವರಿಗೆ ಭಾರೀ ತೊಂದರೆ ಯಾಗುತ್ತಿದೆ. ಇದು ಧರ್ಮಸ್ಥಳ ಹಾಗೂ ಮಂಗಳೂರು ಮತ್ತು ಹೊರನಾಡು , ಶೃಂಗೇರಿ ಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಯಾಗಿದ್ದು ಸಾವಿರಾರು

ಮೂಡಿಗೆರೆ: ಅಪರಿಚಿತ ವಾಹನ ಡಿಕ್ಕಿಯಿಂದ ರಸ್ತೆಯಲ್ಲಿ ಮಲಗಿದ್ದ ದನಗಳ ಭೀಕರ ಸಾವು Read More »