ಕ್ರೈಂ

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವನೆ ಮಾಡಲು ಹಣ ಸಿಗಲಿಲ್ಲ ಎಂಬ ಕೋಪದಲ್ಲಿ ವ್ಯಕ್ತಿ ತನ್ನ ಒಂದು ವರ್ಷದ ಮಗಳನ್ನು ಬಾವಿಗೆ ಎಸೆದು ಕೊಲೆ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಹತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಖೇಮಚಂದ್ ಎಂಬಾತನೇ ಈ ಕೃತ್ಯ ಎಸೆದ ಪಾಪಿ ತಂದೆ. ಆರೋಪಿ ಖೇಮಚಂದ್ ಮದ್ಯ ಕುಡಿಯಲು ಹಣಬೇಕೆಂದು ತನ್ನ ಹೆಂಡತಿಯಲ್ಲಿ ಕೇಳಿದನು. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದರಿಂದ ಇಬ್ಬರ ನಡುವೆ ಜಗಳವಾಗಿತ್ತು. ಇದೇ ಸಿಟ್ಟಿನಲ್ಲಿ ಖೇಮಚಂದ್ ತನ್ನ ಒಂದು ವರ್ಷದ […]

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ Read More »

ಕೆಜಿಎಫ್ ಚಿತ್ರದಂತೆ ಡಾನ್ ಆಗಲು ನಾಲ್ವರು ಸೆಕ್ಯೂರಿಟಿ ಗಾರ್ಡ ಗಳ ಕೊಲೆ ಮಾಡಿದ ಯುವಕ| ಮುಂದಿನ ಟಾರ್ಗೆಟ್​ ಪೊಲೀಸರು!!

ಮಧ್ಯಪ್ರದೇಶ: ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್​ನನ್ನು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್​ ಪೊಲೀಸರ ಹತ್ಯೆಯಾಗಿತ್ತಂತೆ!ಕೆಜಿಎಫ್​​ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ಕೊಲೆ ಮಾಡಿದ ವ್ಯಕ್ತಿಯೊಬ್ಬನಿಂದ ಕದ್ದಿದ್ದ ಮೊಬೈಲ್​ ಫೋನ್​ ಟ್ರ್ಯಾಕ್​

ಕೆಜಿಎಫ್ ಚಿತ್ರದಂತೆ ಡಾನ್ ಆಗಲು ನಾಲ್ವರು ಸೆಕ್ಯೂರಿಟಿ ಗಾರ್ಡ ಗಳ ಕೊಲೆ ಮಾಡಿದ ಯುವಕ| ಮುಂದಿನ ಟಾರ್ಗೆಟ್​ ಪೊಲೀಸರು!! Read More »

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..?

ಸಮಗ್ರ ನ್ಯೂಸ್ : ಮನೆಯಲ್ಲಿದ್ದ ಕುರಿ ಮಾರಿದಳು ಎಂಬ ಸಿಟ್ಟಿನಿಂದ ಮಗನೇ ತಾಯಿಯನ್ನು ಕೊಂದ ಘಟನೆಯೊಂದು ರಾಜಸ್ಥಾನದ ಜಲ್ವಾರ ಜಿಲ್ಲೆಯಲ್ಲಿ ನಡೆದಿದೆ. ಸೆಮ್ಲಿಯಾ ಗ್ರಾಮದ ನೊದಯಾಂಭಿ ಮೇಘ್ವಾಲ್‌(40) ಮೃತ ಮಹಿಳೆ. ಆಕೆಯ ಪುತ್ರ 12ನೇ ತರಗತಿಯಲ್ಲಿ ಓದುತ್ತಿದ್ದು, ಅಮ್ಮ ಮನೆಯಲ್ಲಿದ್ದ ಕುರಿಯನ್ನು ಮಾರಿದ್ದರಿಂದಾಗಿ ಸಿಟ್ಟಾಗಿದ್ದ ಆತ ಗುರುವಾರ ಸಂಜೆ ಅಮ್ಮನಿಗೆ ಚಾಕು ಚುಚ್ಚಿದ್ದಾನೆ.ನಂತರ ಆಕೆಯ ಶವವನ್ನು ಬಾಕ್ಸ್‌ ಒಂದರಲ್ಲಿ ಮುಚ್ಚಿಟ್ಟಿದ್ದಾನೆ. ಮನೆಗೆ ಬಂದ ತಂದೆಯು ತಾಯಿಯ ಬಗ್ಗೆ ವಿಚಾರಿಸಿದಾಗ ಆಕೆ ಹೊಲಕ್ಕೆ ತೆರಳಿದ್ದಾಳೆ ಎಂದು ಹೇಳಿದ್ದಾನೆ. ಗದರಿಸಿ ಕೇಳಿದಾಗ

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..? Read More »

ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ವಿಧಿವಶ

ಸಮಗ್ರ ನ್ಯೂಸ್ : ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ. ಕೋಡಿ ಕುಶಾಲಪ್ಪ ಗೌಡ(92ವ) ಅವರು ಸೆ.29ರಂದು ರಾತ್ರಿ ಪುತ್ತೂರಿನ ಮಗಳು ಮಾಲಿನಿ ಅವರ ಮನೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನಲ್ಲಿ ಮಗಳ ಮನೆಯಲ್ಲಿದ್ದ ಅವರನ್ನು ತೀವ್ರ ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ಸುಳ್ಯದ ಜಟ್ಟಿಪಳ್ಳದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗಿದೆ.

ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ವಿಧಿವಶ Read More »

ಬಂಟ್ವಾಳ; ಕಾರು ಡಿಕ್ಕಿ, ಎಲ್.ಕೆ.ಜಿ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಕಾರು ಡಿಕ್ಕಿ ಯಾಗಿ ಬಾಲಕ ಮೃತಪಟ್ಟ ಘಟನೆಯೊಂದು ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಲ್ಲಿನ ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ. ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ

ಬಂಟ್ವಾಳ; ಕಾರು ಡಿಕ್ಕಿ, ಎಲ್.ಕೆ.ಜಿ ವಿದ್ಯಾರ್ಥಿ ಬಲಿ Read More »

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಭಾಷಾ ವಿಜ್ಞಾನಿ, ವಿದ್ವಾಂಸರಾದ ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ್ಪ ಗೌಡ ಹಾಗೂ ಗೌರಮ್ಮನವರ ಪುತ್ರರಾಗಿ 1931 ಮೇ 30 ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ ಕಾಲೇಜಿನಲ್ಲಿ ಬಿ.ಎ. ಮಾಡಿ 1956ರಲ್ಲಿ ಮದರಾಸು

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ Read More »

ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ

ರಾಮನಗರ: ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು. ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು. ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ

ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ
Read More »

ಮುರುಘಾ ಶ್ರೀ ಲೈಂಗಿಕ ಕಿರುಕುಳ ಆರೋಪದ ಎರಡನೇ ಆರೋಪಿ ಬಂಧನ

ಮುರುಘಾ ಶ್ರೀಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಾರ್ಡನ್‌ ರಶ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪೋಕ್ಸೋ, ಸುಮೋಟೋ ಕೇಸ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನು ಪೊಲೀಸರ ಬಂಧನದಲ್ಲಿರುವ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಕರೆದೊಯ್ಯಲಾಗಿದೆ. A- 2 ಲೇಡಿ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು

ಮುರುಘಾ ಶ್ರೀ ಲೈಂಗಿಕ ಕಿರುಕುಳ ಆರೋಪದ ಎರಡನೇ ಆರೋಪಿ ಬಂಧನ Read More »

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಬಗ್ಗೆ ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ದೀಪು ಹಾಗೂ ಅಖಿಲೇಶ್ ಎಂದು ಗುರುತಿಸಲಾಗಿದೆ. ಯುವತಿಗೆ ಕಂಠಪೂರ್ತಿ ಕುಡಿಸಿದ ಯುವಕರು ಆಕೆಯನ್ನು ಕರೆದುಕೊಂಡು ಹೋಗಿ ಹೆಚ್ ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ. ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನು ಯುವಕರು ಕರೆದುಕೊಂಡು ಹೋಗಿದ್ದಾರೆ. ನಂತರ ಯುವತಿಯನು ಯುವಕರು ರೇಪ್ ಮಾಡಿದ್ದಾರೆ. ಅಲ್ಲದೆ ಅತ್ಯಾಚಾರದ ವಿಷಯ ಯಾರಿಗಾದ್ರು ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಾರೆ.

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ Read More »