ಕ್ರೈಂ

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ

ಸಮಗ್ರ ನ್ಯೂಸ್:  ಪಂಜಾಬಿನ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ಆಸ್ಟ್ರೇಲಿಯಾದ ಡಿಗ್ಗರ್ಸ್ ರೆಸ್ಟ್ ನಲ್ಲಿರುವ ಬುಲ್ಲಾ ಡಿಗ್ಗರ್ಸ್ ರೆಸ್ಟ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೆಲ್ಬೋರ್ನ್ ಬಳಿ ಒಟ್ಟು ಮೂರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 42 ವರ್ಷ ವಯಸ್ಸಿನ ನಿರ್ವೈರ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪಂಜಾಬ್ ಸಂಗೀತ […]

ರಸ್ತೆ ಅಪಘಾತ ದಲ್ಲಿ ಪಂಜಾಬಿನ ಜನಪ್ರಿಯ ಗಾಯಕ ನಿಧನ Read More »

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ

ಸಮಗ್ರ ನ್ಯೂಸ್: ಅಸ್ಸಾಂನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಹೊಟ್ಟೆನೋವಿನಿಂದ ಬಳಲುತ್ತಿದ್ದ ಏಳು ತಿಂಗಳ ಗರ್ಭಿಣಿ ಅಸ್ಸಾಂನ ಬರಾಕ್ ಕಣಿವೆಯಲ್ಲಿರುವ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಆಶಿಶ್ ಕುಮಾರ್ ಬಿಸ್ವಾಸ್ ಅವರು ಯಾವುದೇ ಪರೀಕ್ಷೆ ನಡೆಸದೆ 12 ದಿನಗಳ ಹಿಂದೆ ಆಸ್ಪತ್ರೆಗೆ ಬಂದಾಗ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆದರೆ ಭ್ರೂಣವು ಬೆಳವಣಿಗೆಯಾಗದಿರುವುದನ್ನು ಕಂಡು ಮತ್ತು ಗಾತ್ರದಲ್ಲಿ ತುಂಬಾ ಚಿಕ್ಕದಾಗಿದೆ ಎಂದು ತಿಳಿದ ತಕ್ಷಣ ಮತ್ತೆ ಭ್ರೂಣವನ್ನು ಗರ್ಭದೊಳಗೆ ಇರಿಸಿ ಹೊಲಿಗೆ ಹಾಕಿದ್ದಾರೆ. ಬುಧವಾರದಂದು ಮಹಿಳೆಯ

ಸರ್ಕಾರಿ ಆಸ್ಪತ್ರೆ ಯಡವಟ್ಟು; ಮಗುವನ್ನು ಹೊರತೆಗೆದು ಬೆಳವಣಿಗೆಯಾಗಿಲ್ಲವೆಂದು ಪುನಃ ಗರ್ಭದಟ್ಟಿದ್ದು ಹೊಲಿಗೆ Read More »

ಬಂಟ್ವಾಳ: ಹೆಜ್ಜೇನು ದಾಳಿ ಬಾಲಕ ಮೃತ್ಯು

ಬಂಟ್ವಾಳ: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ. ಸೆ.1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಂಟ್ವಾಳ: ಹೆಜ್ಜೇನು ದಾಳಿ ಬಾಲಕ ಮೃತ್ಯು Read More »

ಅರಂತೋಡು – ಎಲಿಮಲೆ ನಿತ್ಯ ಅವಘಡ| ರಸ್ತೆ ಅಭಿವೃದ್ಧಿ ಮಾಡಲಾಗದಿದ್ದರೇ ಒಂದು ಕ್ರೇನ್ ಕೊಡಿ; ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ

ಸಮಗ್ರ ನ್ಯೂಸ್: ಸುಮಾರು 30 ವರ್ಷಗಳಿಂದ ಅರಂತೋಡಿನಿಂದ ಎಲಿಮಲೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಯಾಗದೇ ಇರುವುದರಿಂದ ಈ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಹಾಗಾಗಿ ಈ ಭಾಗಕಕ್ಕೆ ಒಂದು ಕ್ರೇನ್ ಮತ್ತು ಆಂಬ್ಯುಲೆನ್ಸ್ ಅನ್ನು ಕೊಟ್ಟು ಸಹಕರಿಸಿ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ. ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಸಿಗುವ ಈ ಅರಂತೋಡು ಎಲಿಮಲೆ ರಸ್ತೆ ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ ಹತ್ತಿರದ ರಸ್ತೆಯಾಗಿದೆ. ಅರಂತೋಡಿನಿಂದ ಸುಮಾರು 20 ಕಿ.ಮೀ. ಸಂಚರಿಸಿದರೆ ಎಲಿಮಲೆ ತಲುಪಿ ಅಲ್ಲಿಂದ ಶ್ರೀ

ಅರಂತೋಡು – ಎಲಿಮಲೆ ನಿತ್ಯ ಅವಘಡ| ರಸ್ತೆ ಅಭಿವೃದ್ಧಿ ಮಾಡಲಾಗದಿದ್ದರೇ ಒಂದು ಕ್ರೇನ್ ಕೊಡಿ; ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ Read More »

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ. ಸದ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಈ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ Read More »

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ

ಸಮಗ್ರ ನ್ಯೂಸ್: ತೋಟದಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಸಮೀಪದ ಬಿಳಗಲ್‍ನ ಕಾಫಿತೋಟದಲ್ಲಿ ನಡೆದಿದೆ. ಕರಡಿ ದಾಳಿಗೊಳಗಾದ ಕೂಲಿ ಕಾರ್ಮಿಕನನ್ನ ಬೆಳ್ಳಪ್ಪ ಎಂದು ಗುರುತಿಸಲಾಗಿದೆ. ಕಾರ್ಮಿಕ ಬೆಳ್ಳಪ್ಪ ತೋಟದಲ್ಲಿ ಕೆಲಸ ಮಾಡುವ ವೇಳೆ ಮರಿಗಳೊಂದಿಗೆ ತೋಟಕ್ಕೆ ಬಂದ ಕರಡಿ ಏಕಾಏಕಿ ದಾಳಿ ಮಾಡಿದೆ. ಕೂಡಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇತರೆ ಕಾರ್ಮಿಕರು ಅವರನ್ನ ಆಸ್ಪತ್ರೆಗೆ ಸೇರಿದ್ದಾರೆ. ಆದರೆ, ಕರಡಿ ದಾಳಿಯಿಂದ ಬೆಳ್ಳಪ್ಪನವರ ಒಂದು ಕಾಲು

ಕೊಟ್ಟಿಗೆಹಾರ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ Read More »

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ

ರಕ್ತಸ್ರಾವದಿಂದ ಹಸು ಸಾವು 29 ವರ್ಷದ ವ್ಯಕ್ತಿ ಬಂಧನ ಕೋಲ್ಕತ್ತಾ: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ 29 ವರ್ಷದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್‍ಖಾನಾ ಬ್ಲಾಕ್‍ನ ಉತ್ತರ ಚಂದನ್‍ಪಿಡಿ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಪ್ರದ್ಯುತ್ ಭೂಯಾ ಎಂದು ಗುರುತಿಸಲಾಗಿದೆ. ಇದೀಗ ಗರ್ಭಿಣಿ ಹಸುವಿನ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕೆಲವು ದಿನಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಪ್ರದ್ಯುತ್, ತಮ್ಮ ಮನೆಯ ಹಿಂದೆ ಇರುವ ದನದ

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ Read More »

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ರೈಲಿನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ನಡೆದಿದೆ. ಕಾರವಾದ ಮೂಲದ ಶಿಕ್ಷಕ ರಮೇಶ್‌ ಮತ್ತು ನಿರ್ಮಲಾ ದಂಪತಿ ರೈಲಿನಲ್ಲಿ ರಾತ್ರಿ ಕಾರವಾರಕ್ಕೆ ರೈಲಿನಲ್ಲಿ ಹೊರಟಿದ್ದರು.ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗ್‌ ತೆಗೆದುಕೊಂಡು ಪರಾರಿಯಾಗಿದ್ದಾನೆ. ನಂತರ ಆತ ರೈಲಿನಿಂದ ಹಾರಲು ಯತ್ನಿಸಿದ್ದಾನೆ. ಕೂಡಲೇ ಮಹಿಳೆ ತುರ್ತು ಸಂದರ್ಭ ರೈಲು ನಿಲ್ಲಿಸುವ ಚೈನ್‌ ಎಳೆದಿದ್ದಾರೆ. ಅದರಂತೆ ರೈಲಿನ ವೇಗ

ಮಂಗಳೂರು ರೈಲಿನಲ್ಲಿ ಭಾರೀ ರಾಬರಿ Read More »

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ Read More »

ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ

ಸಮಗ್ರ ನ್ಯೂಸ್ ​:  ಜಾರ್ಖಂಡ್​ನ ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಅನುತೀರ್ಣ ಆದ ವಿದ್ಯಾರ್ಥಿಗಳು ಸಭೆ ನಡೆಸುವ ನೆಪದಲ್ಲಿ ಶಿಕ್ಷಕರನ್ನು ಕರೆದು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಜಾರ್ಖಂಡ್​ನ ದುಮ್ಕಾದ ಹಳ್ಳಿಯೊಂದರ ಶಾಲಾ ವಿದ್ಯಾರ್ಥಿಗಳು ಈ ನೀಚ ಕೃತ್ಯ ಎಸಗಿದವರು. ತಮಗೆ ಶಿಕ್ಷಕರು ಕಡಿಮೆ ಅಂಕಗಳನ್ನು ನೀಡಿದರು ಎಂದು ಎಲ್ಲ ಶಿಕ್ಷಕರನ್ನು ಕರೆದು ಬಳಿಕ ಅವರನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ನಂತರ ಎಲ್ಲರ ಮೇಲೆ ಹಲ್ಲೆ ನಡೆಸಿದ್ದರಿಂದ ಗುರುಗಳು

ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ Read More »