ಕ್ರೈಂ

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು

ಸಮಗ್ರ ನ್ಯೂಸ್: ರೈಲು ಹಳಿಯಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್‌ ಇಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಮಹಿಳೆಯೋರ್ವಳನ್ನು ರೈಲ್ವೆ ಭದ್ರತಾ ಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ ( 22) ಬಂಧಿತ ಮಹಿಳೆ. ಗುಜರಿ ಹೆಕ್ಕುವ ಕಾಯಕ ನಡೆಸುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳಿನಿಂದ ಸಿಮೆಂಟ್ ಬೇರ್ಪಡುವ ಉದ್ದೇಶದಿಂದ ರೈಲು ಹಳಿಯಲ್ಲಿ ಇಟ್ಟಿದ್ದಾಗಿ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಹಳಿಯಲ್ಲಿ ನಡೆದುಕೊಂಡು […]

ಕಾಸರಗೋಡು: ರೈಲು ಹಳಿಯಲ್ಲಿ ಕಬ್ಬಿಣದ ಬೀಮ್ ಇಟ್ಟ ಮಹಿಳೆ ಬಂಧನ| ಈಕೆಯ ಉದ್ದೇಶ ಕೇಳಿ ರೈಲ್ವೆ ಪೊಲೀಸರೇ ಸುಸ್ತು Read More »

ಚಿಕ್ಕಮಗಳೂರು: ಮಾಂಸಕ್ಕಾಗಿ ಗರ್ಭಿಣಿ ಹಸುವಿನ ಹತ್ಯೆ| ಕರುವನ್ನು ಕಾಡಲ್ಲಿ ಬಿಸಾಡಿ ದುಷ್ಕೃತ್ಯ

ಸಮಗ್ರ ನ್ಯೂಸ್: ಮಾಂಸಕ್ಕಾಗಿ ಹಸುವನ್ನ ಕೊಂದ ದುರುಳರು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಬಿಸಾಡಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಳೆಕಡುಬಗೆರೆ ಗ್ರಾಮದಲ್ಲಿ ನಡೆದಿದೆ. ಮೇವಿಗೆ ಹೋಗಿದ್ದ ಹಳೆಕಡುಬಗೆರೆ ಗ್ರಾಮದ ರವೀಂದ್ರ ಎಂಬುವರಿಗೆ ಸೇರಿದ ಹಸು ಮನೆಗೆ ಬಂದಿರಲಿಲ್ಲ. ಹಸು ಗಬ್ಬದ ಹಸುವಾಗಿದ್ದು, ಮನೆಗೆ ಬಾರದ ಕಾರಣ ರವೀಂದ್ರ ಹಸುವನ್ನ ಹುಡುಕೊಂಡು ಹೋಗಿದ್ದರು. ಈ ವೇಳೆ, ಕಾಡಿನಲ್ಲಿ ಹಸುವಿನ ತಲೆ ಪತ್ತೆಯಾಗಿದೆ. ಮಗುವಂತೆ ಸಾಕಿದ್ದ ಗಬ್ಬದ ಹಸುವಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಮಾಂಸಕ್ಕಾಗಿ ಹಸುವನ್ನ

ಚಿಕ್ಕಮಗಳೂರು: ಮಾಂಸಕ್ಕಾಗಿ ಗರ್ಭಿಣಿ ಹಸುವಿನ ಹತ್ಯೆ| ಕರುವನ್ನು ಕಾಡಲ್ಲಿ ಬಿಸಾಡಿ ದುಷ್ಕೃತ್ಯ Read More »

ಸುಳ್ಯ: ಕಾಲೇಜು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ| 9 ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದು, ಅನ್ಯಕೋಮಿನ ಜೋಡಿಯ ಮೇಲೆ ಎರಗಿದ ವಿದ್ಯಾರ್ಥಿಗಳ ಗುಂಪೊಂದು ಯುವಕನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಯುವಕ ಸನೀಫ್ ಮತ್ತು ಅದೇ ಕಾಲೇಜಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿತ್ತು. ಇದರಿಂದ ಕೆರಳಿದ ವಿದ್ಯಾರ್ಥಿಗಳ ಗುಂಪೊಂದು ಮಂಗಳವಾರ ಕಾಲೇಜು ಮೈದಾನಕ್ಕೆ ಯುವಕನನ್ನು ಕರೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಸನೀಫ್​ನ ಕಾಲರ್

ಸುಳ್ಯ: ಕಾಲೇಜು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ| 9 ಮಂದಿ ಅರೆಸ್ಟ್ Read More »

ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ 6 ಮಂದಿ ನಕಲಿ ಪತ್ರಕರ್ತರ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್​ನಲ್ಲಿ ನಡೆದಿದೆ. ಬಂಧಿತ ನಕಲಿ ಪತ್ರಕರ್ತರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಬಂಧಿತ ನಕಲಿ ಪತ್ರಕರ್ತರು. ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದರು ಎನ್ನುವ ಆರೋಪ

ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ 6 ಮಂದಿ ನಕಲಿ ಪತ್ರಕರ್ತರ ಬಂಧಿಸಿದ ಪೋಲಿಸರು Read More »

ಕೊಕ್ಕಡ: ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು| ಪತಿಯೇ ಕೊಲೆಗಾರನಾದನೇ?

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯೊಬ್ಬರು ಅನುಮಾ ನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ‌ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದ್ದು ಪತಿಯೇ ಹೊಡೆದು ಕೊಲೆಗೈದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್‌ ಗೌಡ ಅವರ ಪತ್ನಿ ಮೋಹಿನಿ(36) ಮೃತ ಮಹಿಳೆ. ಪತಿ ಗಣೇಶನಿಗೆ ಕುಡಿತದ ಚಟವಿದ್ದು ಕುಡಿದ ಮತ್ತಿನಲ್ಲಿ ಪತ್ನಿ ಜತೆ ಜಗಳ ಉಂಟಾಗಿ ಗಲಾಟೆ ವಿಕೋಪಕ್ಕೆ ತಿರುಗಿ ಹಲ್ಲೆಗೈದ ಪರಿಣಾಮ ಪತ್ನಿ ಮೋಹಿನಿ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಹಿಳೆಯ ಅನುಮಾನಾಸ್ಪದ ಸಾವಿನ ಬಗ್ಗೆ

ಕೊಕ್ಕಡ: ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು| ಪತಿಯೇ ಕೊಲೆಗಾರನಾದನೇ? Read More »

ಮದ್ಯಸೇವನೆ ಮಾಡಿ ತಾಯಿಗೆ ಹಲ್ಲೆ ನಡೆಸಿದ ತಂದೆಯ ವಿರುದ್ಧ ಕೇಸ್ ಕೊಟ್ಟ ಏಳು ವರ್ಷದ ಮಗ

ಸಮಗ್ರ ನ್ಯೂಸ್: ದಿನ ನಿತ್ಯ ಕುಡಿದು ಬಂದು ತಾಯಿಯ ಮೇಲೆ ಹಲ್ಲೆ ನಡೆಸುತ್ತಿದ್ದ ತಂದೆಯ ವಿರುದ್ಧ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಮುಸ್ತಾಬಾದ್ ಪಟ್ಟಣದಲ್ಲಿ ತಂದೆ ಬಾಲಕಿಶನ್ ವಿರುದ್ಧ ಭರತ್ ಎಂಬಾತ ದೂರು ನೀಡಿದ್ದಾನೆ. ಮುಸ್ತಾಬಾದ್ ಮೂಲದ ಬಾಲಕಿಶನ್‍ಗೆ ಭರತ್ ಹಾಗೂ ಶಿವಾನಿ ಎಂಬ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಲ್ಲಿ ಭರತ್ ಮುಸ್ತಾಬಾದ್‍ನ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುತ್ತಿದ್ದಾನೆ. ಮದ್ಯವ್ಯಸನಿಯಾಗಿದ್ದ ಬಾಲಕಿಶನ್ ಪ್ರತಿನಿತ್ಯ ತನ್ನ

ಮದ್ಯಸೇವನೆ ಮಾಡಿ ತಾಯಿಗೆ ಹಲ್ಲೆ ನಡೆಸಿದ ತಂದೆಯ ವಿರುದ್ಧ ಕೇಸ್ ಕೊಟ್ಟ ಏಳು ವರ್ಷದ ಮಗ Read More »

ಸುಳ್ಯ: ಭಿನ್ನಕೋಮಿನ ಜೋಡಿಗಳು ಪತ್ತೆ; ಬಾಸುಂಡೆ ಬರುವಂತೆ ಥಳಿಸಿದ ಸ್ಥಳೀಯರು

ಸಮಗ್ರ ನ್ಯೂಸ್: ಕಾಲೇಜು ಬಳಿಯಲ್ಲಿ ಏಕಾಂತದಲ್ಲಿದ್ದ ಅನ್ಯಕೋಮಿನ ಕಾಲೇಜು ವಿದ್ಯಾರ್ಥಿಗಳಿಬ್ಬರಿಗೆ ಕಿಡಿಗೇಡಿಗಳು ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಇಬ್ಬರೇ ಇದ್ದ ಸಂದರ್ಭದಲ್ಲಿ ಸ್ಥಳೀಯರಿಂದ ದಾಳಿ ನಡೆಸಿ ವಿದ್ಯಾರ್ಥಿಯನ್ನು ಬಾಸುಂಡೆ ಬರುವಂತೆ ಥಳಿಸಿದ್ದಾರೆ. ಇವರಿಬ್ಬರು ಬೇರೆ ಬೇರೆ ಕೋಮಿನ ವಿದ್ಯಾರ್ಥಿ ‌ಮತ್ತು ವಿದ್ಯಾರ್ಥಿನಿಯರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಭಿನ್ನಕೋಮಿನ ಜೋಡಿಗಳು ಪತ್ತೆ; ಬಾಸುಂಡೆ ಬರುವಂತೆ ಥಳಿಸಿದ ಸ್ಥಳೀಯರು Read More »

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಗೀತೆಗೆ ಅಪಮಾನ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ಬಿಜೆಪಿ ಈ ದೂರು ನೀಡಿದ್ದು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್‌ಸಿಗಳಾದ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವ್ರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು Read More »

ಕೇರಳ; ಭಾರಿ ಮಳೆಗೆ ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು

ಕೇರಳ: ಒಂದೇ ಕುಟುಂಬದ ಐವರು ಭೂಕುಸಿತದಿಂದ ಸಾವಿಗೀಡಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಥೋಡುಪೊಜಾ ಬಳಿ ನಡೆದಿದೆ. ಕಂಜಾರ್‌ ನಿವಾಸಿಗಳಾದ ಥಂಕಮ್ಮ(80),ಪುತ್ರ ಸೋಮನ್‌ (52)ಪತ್ನಿ ಶಾಜಿ(50),ಪುತ್ರಿ ಶಿಮಾ(30) ಮತ್ತು ದೇವಾನಂದ್‌(5)ಮೃತಪಟ್ಟ ದುರ್ದೈವಿಗಳು. ಮುಂಜಾನೆ ಮೂರರ ಸುಮಾರಿಗೆ ಘಟನೆ ನಡೆದಿದೆ. ಮೃತದೇಹಗಳನ್ನು ಅವಶೇಷಗಳಡಿಯಿಂದ ತೆಗೆಯಲಾಗಿದೆ. ಪರ್ವತ ಪ್ರದೇಶವಾದ ಇಡುಕ್ಕಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಕಾಸರಗೋಡು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕೊಟ್ಟಾಯಂ,ನೆಡುಕುನ್ನಮನ್‌,ಕರುಕಾಚಲ್‌ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿ

ಕೇರಳ; ಭಾರಿ ಮಳೆಗೆ ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು Read More »

ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

ದೆಹಲಿ: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಬಗ್ಗೆ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಭಿಜಿತ್ ಅವರಿಗೆ 72 ವರ್ಷ ವಯಸ್ಸಾಗಿತ್ತು. ʻನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ನಾವು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ನಾವು ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರುʼ ಎಂದು ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ Read More »